Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 60 ವರ್ಷಗಳ ನಂತರ ರೈತರಿಗೆ ಸಾಗುವಳಿ ಪತ್ರ...

60 ವರ್ಷಗಳ ನಂತರ ರೈತರಿಗೆ ಸಾಗುವಳಿ ಪತ್ರ : ವೈ.ಎಸ್.ವಿ. ದತ್ತ

ವಾರ್ತಾಭಾರತಿವಾರ್ತಾಭಾರತಿ29 Jan 2018 8:16 PM IST
share
60 ವರ್ಷಗಳ ನಂತರ ರೈತರಿಗೆ ಸಾಗುವಳಿ ಪತ್ರ : ವೈ.ಎಸ್.ವಿ. ದತ್ತ

ಕಡೂರು, ಜ.29: ತಾಲೂಕಿನ ಎಮ್ಮೆದೊಡ್ಡಿ ಭಾಗದ ಸ.ನಂ. 70 ರಲ್ಲಿ ರೈತರು ಜಮೀನು ಉಳುಮೆ ಮಾಡುತ್ತಿದ್ದು, ಇವರಿಗೆ ಕಳೆದ 60 ವರ್ಷಗಳಿಂದ ಯಾವುದೇ ಸಾಗುವಳಿ ಪತ್ರ ದೊರಕಿರುವುದಿಲ್ಲ. ಹಲವಾರು ಹೋರಾಟಗಳ ಮಧ್ಯೆ ಈ ಭಾಗದ ಸುಮಾರು 55 ಜನ ರೈತರಿಗೆ ಸಾಗುವಳಿ ಪತ್ರ ದೊರಕಿಸಲಾಗಿದೆ. ಇನ್ನೂ 500 ಜನರಿಗೆ ಸಾಗುವಳಿಗೆ ಚೀಟಿ ಕೊಡಿಸಲು ಗುರಿ ಹೊಂದಲಾಗಿದೆ ಎಂದು ಶಾಸಕ ವೈ.ಎಸ್.ವಿ. ದತ್ತ ತಿಳಿಸಿದರು.

ಅವರು ಎಮ್ಮೆದೊಡ್ಡಿ ಗ್ರಾಮದ ಸಗುನಿಬಸವನಹಳ್ಳಿ ಗ್ರಾಮದಲ್ಲಿ ಆ ಭಾಗದ ಸುಮಾರು 55 ಜನರಿಗೆ ಸಾಗುವಳಿ  ಪತ್ರವನ್ನು ವಿತರಿಸಿ ಮಾತನಾಡಿದರು. ಈ ಭಾಗದ ರೈತರಿಗೆ ಯಾವುದೇ ಸಾಗುವಳಿ ಚೀಟಿ ದೊರಕಿಸಲು ಸಾಧ್ಯವಾಗಿರಲಿಲ್ಲ. ಸ.ನಂ. 70 ರ ಜಮೀನುಗಳಿಗೆ ಸಾಗುವಳಿ ಚೀಟಿ ದೊರಕಿಸಲು ಕಠಿಣವಾಗಿತ್ತು. ಈ ಜಮೀನಿನ ಬಗ್ಗೆ ಹೈಕೋರ್ಟ್‍ನಲ್ಲಿ ಕೇಸು ದಾಖಲಿಸಲಾಗಿತ್ತು. ಇದರಲ್ಲಿ ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಶ್ರಮವಿದೆ ಎಂದು ಹೇಳಿದರು.

ಸಾಗುವಳಿ ಪತ್ರ ದೊರಕಿಸುವಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀರಂಗ ಹಾಗೂ ತಹಸೀಲ್ದಾರ್ ಭಾಗ್ಯ ಇವರ ಕೊಡುಗೆ ಅಪಾರವಾಗಿದೆ. ಯಾವುದೇ ಅಧಿಕಾರಿಗಳಾಗಲೀ, ರಾಜಕಾರಣಿಗಳಾಗಲೀ ಸಾಗುವಳಿದಾರರಿಂದ ಯಾವುದೇ ಹಣ ಪಡೆದಿಲ್ಲ. ರೈತರ ಪರ ಹೋರಾಟವನ್ನು ಮಾಡಿ ಸಾಗುವಳಿ ಪತ್ರ ದೊರಕಿಸಿಕೊಡಲಾಗಿದೆ. ಸಾಗುವಳಿ ಪತ್ರ ದೊರಕಿಸಿಕೊಡಬಾರದು ಎಂಬ ಉದ್ದೇಶದಿಂದ ಪಟ್ಟಬದ್ಧ ಹಿತಾಸಕ್ತಿಗಳು ಇದರ ಬಗ್ಗೆ ಕೇಸು ಹಾಕಲಾಗಿತ್ತು. ಕಡು ಬಡವರಿಗೆ ಬೆಳಕು ನೀಡಿದ ಸಮಾಧಾನ ಇದೆ ಎಂದು ಹೇಳಿದರು. 

ಈ ಸಾಗುವಳಿ ಪತ್ರದ ವಿಷಯದಲ್ಲಿ ಸುಮಾರು 577 ಜನರ ಮೇಲೆ ಕೇಸು ಹಾಕಿಸಲಾಗಿತ್ತು. ಹಲವಾರು ಕೇಸುಗಳಲ್ಲಿ ಗೆದ್ದು ನಂತರ ಸಾಗುವಳಿ ಚೀಟಿ ದೊರಕಿಸಲಾಗಿದೆ. ಜನರು ನೀಡಿದ ಶಕ್ತಿಯ ಫಲವಾಗಿ ಕೆಲಸ ಮಾಡಲಾಗಿದೆ. ಸಾಗುವಳಿ ಚೀಟಿ ಸಿಗದಂತೆ ನೋಡಿಕೊಂಡ ಜನರಿಗೆ ಇದು ತಕ್ಕ ಪಾಠವಾಗಲಿದೆ. ಇದರ ಬಗ್ಗೆ ಭಾರೀ ಪ್ರಯತ್ನಗಳು ನಡೆದವು. ಬಡವರ ಬಗ್ಗೆ ಕೀಳು ರಾಜಕಾರಣ ಮಾಡದೆ ರಾಜಮಾರ್ಗದಲ್ಲಿ ರಾಜಕಾರಣ ಮಾಡಬೇಕಿದೆ ಎಂದು ಹೇಳಿದರು. 

ನಾನು ಶಾಸಕನಾಗಿದ್ದು ಯಾವುದೇ ಆಸ್ತಿ, ಮನೆ ಮಾಡಿಕೊಳ್ಳಲು ಅಲ್ಲ, ಬಡವರ ಕೆಲಸ ಮಾಡಲು ಮಾತ್ರ. ಈ ಭಾಗದ ವಿದ್ಯುತ್ ಸಮಸ್ಯೆ ನಿವಾರಣೆಗೆ 108 ಕೋಟಿ ರೂಗಳ ವೆಚ್ಚದಲ್ಲಿ ಕಾಮಗಾರಿ ಸಂಪೂರ್ಣಗೊಂಡಿದೆ. ಈಗ ನಿರಂತರ ವಿದ್ಯುತ್ ದೊರಕುತ್ತಿದೆ. ಬುಕ್ಕಸಾಗರ ಬಳಿ ಸರ್ವೀಸ್ ಲೈನ್ ಮಂಜೂರಾಗಿದೆ. ಗೋಂದಿ ಅಣೆಕಟ್ಟಿನ ಯೋಜನೆ ಆದರೆ ಮದಗದ ಕೆರೆ ತುಂಬಿಸುವ ಕನಸು ನನ್ನದಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಭಾಗ್ಯ, ಶಿವಮೂರ್ತಿನಾಯ್ಕ, ತಿಪ್ಪೇಸ್ವಾಮಿ, ಪ್ರಸನ್ನ, ಭಂಡಾರಿ ಶ್ರೀನಿವಾಸ್, ಸೀಗೆಹಡ್ಲು ಹರೀಶ್, ಕೃಷ್ಣಾನಾಯ್ಕ, ಕೃಷ್ಣಮೂರ್ತಿ, ತಮ್ಮಯ್ಯ, ಕಲ್ಲೇಶಪ್ಪ, ಚಂದ್ರಶೇಖರ್, ಶ್ರೀಮತಿ ಪುಷ್ಪ, ತಿಮ್ಮಪ್ಪ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X