Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಠಾಣೆಗೆ ಬರಲು ಹೇಳಿ ಬಾಲಕಿಯನ್ನು...

ಠಾಣೆಗೆ ಬರಲು ಹೇಳಿ ಬಾಲಕಿಯನ್ನು ಅಪಹರಿಸಿದ ‘ಪೊಲೀಸರು’!

ನಿಜವಾಗಿ ನಡೆದದ್ದೇನು?

ವಾರ್ತಾಭಾರತಿವಾರ್ತಾಭಾರತಿ29 Jan 2018 8:50 PM IST
share
ಠಾಣೆಗೆ ಬರಲು ಹೇಳಿ ಬಾಲಕಿಯನ್ನು ಅಪಹರಿಸಿದ ‘ಪೊಲೀಸರು’!

ಪನ್ನಾ(ಮ.ಪ್ರ),ಜ.29: ಐವರು ದುಷ್ಕರ್ಮಿಗಳು ಪೊಲೀಸ್ ವ್ಯಾನೊಂದನ್ನು ಹೈಜಾಕ್ ಮಾಡಿ, ಪೊಲೀಸರ ಸಮವಸ್ತ್ರ ಧರಿಸಿಕೊಂಡು ಬಾಲಕಿಯೋರ್ವಳನ್ನು ಅಪಹರಿಸಿರುವ ಸಿನಿಮೀಯ ರೀತಿಯ ಘಟನೆ ಪನ್ನಾ ಜಿಲ್ಲೆಯ ಅಮನಗಂಗ್ ತಾಲೂಕಿನ ಕುಗ್ರಾಮ ಬಮುರಹಾದಲ್ಲಿ ರವಿವಾರ ನಡೆದಿದೆ.

ಪಾನಮತ್ತ ವ್ಯಕ್ತಿಯೋರ್ವ ಬಮುರಹಾ ಗ್ರಾಮದಲ್ಲಿ ಗಲಾಟೆ ಮಾಡುತ್ತಿದ್ದಾನೆ ಎಂದು ದುಷ್ಕರ್ಮಿಗಳ ತಂಡವು ‘ಡಯಲ್ 100’ ಪೊಲೀಸ್ ವ್ಯಾನ್‌ಗೆ ಕರೆ ಮಾಡಿತ್ತು. ಇಬ್ಬರು ಪೊಲೀಸರು ವಾಹನದಲ್ಲಿ ಸ್ಥಳಕ್ಕೆ ತಲುಪಿದಾಗ ವ್ಯಕ್ತಿಯೋರ್ವ ರಸ್ತೆಯಲ್ಲಿ ಬೋರಲು ಬಿದ್ದುಕೊಂಡಿದ್ದ. ಪೊಲೀಸರು ಸಮೀಪಕ್ಕೆ ತೆರಳಿದಾಗ ಆ ವ್ಯಕ್ತಿ ಏಕಾಏಕಿ ಎದ್ದು ಅವರಿಗೆ ಪಿಸ್ತೂಲು ತೋರಿಸಿದ್ದ. ತಕ್ಷಣವೇ ಇನ್ನೂ ನಾಲ್ವರು ದುಷ್ಕರ್ಮಿಗಳು ಆತನೊಂದಿಗೆ ಸೇರಿಕೊಂಡಿದ್ದರು.

 ಗುಂಪು ಪೊಲೀಸರು ಮತ್ತು ವ್ಯಾನ್ ಚಾಲಕನ ಸಮವಸ್ತ್ರಗಳನ್ನು ಕಳಚಿ ಅವರ ಕೈಕಾಲುಗಳನ್ನು ಕಟ್ಟಿ ಪಕ್ಕದಲ್ಲಿಯೇ ಇದ್ದ ಕಾರೊಂದರಲ್ಲಿ ಕೂಡಿ ಹಾಕಿತ್ತು. ಬಳಿಕ ಅವರ ಪೈಕಿ ಕೆಲವರು ಪೊಲೀಸ್ ಸಮವಸ್ತ್ರಗಳನ್ನು ಧರಿಸಿಕೊಂಡು ‘ಡಯಲ್ 100’ ವ್ಯಾನ್‌ನಲ್ಲಿ ಗ್ರಾಮದಲ್ಲಿಯ ಬಾಲಕಿಯ ಮನೆಗೆ ತಳಿತ್ತು. ಬಾಲಕಿ ನೀಡಿರುವ ಲೈಂಗಿಕ ಕಿರುಕುಳ ದೂರಿಗೆ ಸಂಬಂಧಿಸಿದಂತೆ ಮಗಳೊಂದಿಗೆ ಠಾಣೆಗೆ ಬಂದು ಹೇಳಿಕೆಯನ್ನು ದಾಖಲಿಸು ವಂತೆ ದುಷ್ಕರ್ಮಿಗಳು ತಂದೆಗೆ ಸೂಚಿಸಿದ್ದರು. ಬಲವಂತದಿಂದ ಬಾಲಕಿ, ಆಕೆಯ ತಂದೆ ಮತ್ತು ಚಿಕ್ಕಪ್ಪನನ್ನು ವ್ಯಾನಿನೊಳಗ ಕುಳ್ಳಿರಿಸಿದ ಅವರು ಬಳಿಕ ತಂದೆ ಮತ್ತು ಚಿಕ್ಕಪ್ಪನನ್ನು ಪಿಸೂಲು ತೋರಿಸಿ ಬೆದರಿಸಿ ಕೆಳಕ್ಕೆ ಇಳಿಸಿದ್ದರು. ಬಳಿಕ ತಾವು ಕಾರು ನಿಲ್ಲಿಸಿದ್ದ ಸ್ಥಳಕ್ಕೆ ಮರಳಿ ಪೊಲೀಸರನ್ನು ಬಿಡುಗಡೆಗೊಳಿಸಿ ಸಮವಸ್ತ್ರಗಳು ಮತ್ತು ವ್ಯಾನ್ ವಾಪಸ್ ಮಾಡಿ ಬಾಲಕಿಯೊಂದಿಗೆ ಪರಾರಿಯಾಗಿದ್ದಾರೆ.

ಮುಖ್ಯ ಆರೋಪಿ,ಹಿನೌತಾ ಗ್ರಾಮದ ನಿವಾಸಿ ದೇವರಾಜ್ ಸಿಂಗ್ ಮತ್ತು ಬಾಲಕಿಯ ನಡುವೆ ಪ್ರೇಮ ಸಂಬಂಧವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೊಲೆ ಸೇರಿದಂತೆ ಹಲವಾರು ಅಪರಾಧಗಳಲ್ಲಿ ಭಾಗಿಯಾಗಿರುವ ಸಿಂಗ್‌ನನ್ನು ಜಿಲ್ಲೆಯಿಂದ ಗಡೀಪಾರು ಮಾಡಲಾಗಿತ್ತು.

ಬಾಲಕಿ ಸಾಗರ ಪಟ್ಟಣದಲ್ಲಿ ಕಾಲೇಜು ಕಲಿಯುತ್ತಿದ್ದು, ಆಕೆ ಸಿಂಗ್‌ನನ್ನು ಆಗಾಗ್ಗೆ ಭೇಟಿಯಾಗುತ್ತಿದ್ದುದನ್ನು ಆಕೆಯ ಚಿಕ್ಕಪ್ಪ ಆಕ್ಷೇಪಿಸಿದ್ದ. ಆಕೆ ತನ್ನ ಚಿಕ್ಕಪ್ಪನ ವಿರುದ್ಧವೇ ಲೈಂಗಿಕ ಕಿರುಕುಳದ ದೂರನ್ನು ದಾಖಲಿಸಿದ್ದಳು. ಇಷ್ಟಾದ ಬಳಿಕ ತಂದೆ ಆಕೆಯನ್ನು ಕಾಲೇಜು ಬಿಡಿಸಿ ಗ್ರಾಮಕ್ಕೆ ವಾಪಸ್ ಕರೆತಂದಿದ್ದ.

ಸಿಂಗ್ ಸೂಚನೆಯಂತೆ ಬಾಲಕಿ ದೂರನ್ನು ದಾಖಲಿಸಿದ್ದಳು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X