ಮಂಡ್ಯ: ಪರಿಶಿಷ್ಟ ವರ್ಗಕ್ಕೆ ಸೇರಿಸಲು ಉಪ್ಪಾರರ ಒತ್ತಾಯ
![ಮಂಡ್ಯ: ಪರಿಶಿಷ್ಟ ವರ್ಗಕ್ಕೆ ಸೇರಿಸಲು ಉಪ್ಪಾರರ ಒತ್ತಾಯ ಮಂಡ್ಯ: ಪರಿಶಿಷ್ಟ ವರ್ಗಕ್ಕೆ ಸೇರಿಸಲು ಉಪ್ಪಾರರ ಒತ್ತಾಯ](https://www.varthabharati.in/sites/default/files/images/articles/2018/01/29/29MDY-6.jpg)
ಮಂಡ್ಯ, ಜ.29: ಪರಿಶಿಷ್ಟ ಪಂಗಡ ಸೇರ್ಪಡೆಗೆ ಒತ್ತಾಯಿಸಿ ಜಿಲ್ಲಾ ಉಪ್ಪಾರ ಸಮುದಾಯ ಸದಸ್ಯರು ನಗರದಲ್ಲಿ ಸೋಮವಾರ ಮೌನ ಮೆರವಣಿಗೆ ನಡೆಸಿದರು.
ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಸುಮಾರು 40 ಲಕ್ಷ ಜನಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದ್ದು, ಜಿಲ್ಲೆಯಲ್ಲೇ 30-35 ಸಾವಿರ ಜನರಿದ್ದಾರೆ. ಆದರೆ, ಶೇ.80ರಷ್ಟು ಜನರು ಅವಿದ್ಯಾವಂತರಾಗಿದ್ದು, ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ ಎಂದು ಅವರು ಹೇಳಿದರು.
ಬಡತನದಿಂದ ಜೀವನ ಸಾಗಿಸುತ್ತಿರುವ ತಾವು ಸಣ್ಣಪುಟ್ಟ ಕೆಲಸಗಳು ಹಾಗೂ ಕೂಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಮುಂದಿನ ಪೀಳಿಗೆಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಶ್ರೇಯೋಭಿವೃದ್ಧಿಗಾಗಿ ಮೀಸಲಾತಿ ಅಗತ್ಯವಾಗಿದೆದ್ದು, ಎಸ್ಟಿ ವರ್ಗಕ್ಕೆ ಸೇರಿಸಬೇಕು ಎಂದು ಅವರು ಒತ್ತಾಯಿಸಿದರು.
ಸಿ.ಎಂ ಮಹದೇವಯ್ಯ, ಸಿದ್ದಯ್ಯ, ಟಿ.ಸತೀಶ್, ಸಿದ್ದರಾಜು, ಪುಟ್ಟಸ್ವಾಮಿ, ಉಮೇಶ, ಮಹೇಂದ್ರ, ನಾಗರತ್ನ, ಸತೀಶ್, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.