Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2017ರಲ್ಲಿ ಮುಂಬೈನಲ್ಲಿ ಅತ್ಯಾಚಾರಗಳ...

2017ರಲ್ಲಿ ಮುಂಬೈನಲ್ಲಿ ಅತ್ಯಾಚಾರಗಳ ಹೆಚ್ಚಳ

ಶೇ.60ರಷ್ಟು ಸಂತ್ರಸ್ತರು ಅಪ್ರಾಪ್ತ ವಯಸ್ಕರು

ವಾರ್ತಾಭಾರತಿವಾರ್ತಾಭಾರತಿ29 Jan 2018 11:36 PM IST
share
2017ರಲ್ಲಿ ಮುಂಬೈನಲ್ಲಿ ಅತ್ಯಾಚಾರಗಳ ಹೆಚ್ಚಳ

ಮುಂಬೈ,ಜ.29: ಮುಂಬೈ ಮಹಾನಗರದಲ್ಲಿ 2017ರಲ್ಲಿ ಅತ್ಯಾಚಾರ ಪ್ರಕರಣಗಳಲ್ಲಿ ಏರಿಕೆಯಾಗಿದೆ. 2016ಕ್ಕೆ ಹೋಲಿಸಿದರೆ ಕಳೆದ ವರ್ಷ ಈ ನಗರದಲ್ಲಿ 40ರಷ್ಟು ಅಧಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮಂಬೈ ಪೊಲೀಸರ ಅಂಕಿಅಂಶಗಳಂತೆ ಸಂತ್ರಸ್ತರಲ್ಲಿ ಶೇ.60ರಷ್ಟು ಅಪ್ರಾಪ್ತ ವಯಸ್ಕ ಬಾಲಕಿಯರಾಗಿದ್ದಾರೆ. ಸಂತ್ರಸ್ತರು ಮುಂದೆ ಬಂದು ದೂರುಗಳನ್ನು ದಾಖಲಿಸುತ್ತಿರುವ ಜೊತೆಗೆ ವಿಫಲ ಪ್ರೇಮ ವ್ಯವಹಾರಗಳು ಮತ್ತು ದಾರಿ ತಪ್ಪಿದ ಲಿವ್-ಇನ್ ಸಂಬಂಧಗಳು ಅತ್ಯಾಚಾರ ಪ್ರಕರಣಗಳು ಹೆಚ್ಚಲು ಕಾರಣಗಳಲ್ಲಿ ಸೇರಿವೆ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

2016ರಲ್ಲಿ 712 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದರೆ, 2017ರಲ್ಲಿ ಈ ಸಂಖ್ಯೆ 752ಕ್ಕೇರಿದೆ. ಆದರೆ 2016ಕ್ಕೆ ಹೋಲಿಸಿದರೆ ಲೈಂಗಿಕ ಕಿರುಕುಳದ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ ಕಂಡು ಬಂದಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕದ ಇತ್ತೀಚಿನ ವರದಿಯಂತೆ ಶೇ.95ರಷ್ಟು ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳು ಸಂತ್ರಸ್ತರಿಗೆ ಗೊತ್ತಿರುವವರೇ ಆಗಿದ್ದಾರೆ. ಮದ್ಯಪಾನ ಮತ್ತು ಮಾದಕದ್ರವ್ಯ ಸೇವನೆ ಚಟ ಮತ್ತು ಇತರ ಸಂಗತಿಗಳು ಅತ್ಯಾಚಾರ ಪ್ರಕರಣಗಳ ಹೆಚ್ಚಳಕ್ಕೆ ಪ್ರಮುಖ ಕಾರಣಗಳಲ್ಲಿ ಸೇರಿವೆ. ಇಂತಹ ಹೆಚ್ಚಿನ ಅಪರಾಧಗಳು ಪರಿಚಿತರಿಂದಲೇ ಎಸಗಲ್ಪಡುತ್ತವೆ ಮತ್ತು ಇವು ರಸ್ತೆಗಳಲ್ಲಿ ನಡೆಯುವುದಿಲ್ಲ. ಹೀಗಾಗಿ ಅತ್ಯಾಚಾರ ಪ್ರಕರಣಗಳಲ್ಲಿ ಏರಿಕೆ ಕುರಿತು ಪೊಲೀಸರ ದಕ್ಷತೆಯನ್ನು ಪ್ರಶ್ನಿಸುವುದು ಸೂಕ್ತವಲ್ಲ ಎಂದು ಮಾಜಿ ಡಿಜಿಪಿ ಪ್ರವೀಣ ದೀಕ್ಷಿತ್ ಹೇಳಿದರು.

ಹೆಚ್ಚಿನ ಪ್ರಕರಣಗಳಲ್ಲಿ ಸಂತ್ರಸ್ತರು ಬಳಿಕ ಕುಟುಂಬ ಸದಸ್ಯರು ಮತ್ತು ಬಂಧುಗಳ ಒತ್ತಡಕ್ಕೆ ಮಣಿದು ಅಥವಾ ಕುಟುಂಬಕ್ಕೆ ಕಳಂಕ ಅಂಟಿಕೊಳ್ಳುತ್ತದೆ ಎಂಬ ಭೀತಿಯಿಂದಾಗಿ ವಿಚಾರಣೆಗೆ ಹಾಜರಾಗುವುದಿಲ್ಲ. ಇದರಿಂದಾಗಿ ಶೇ.80ರಷ್ಟು ಅಪರಾಧಿಗಳು ಕಾನೂನಿನ ಕುಣಿಕೆಯಿಂದ ಪಾರಾಗುತ್ತಾರೆ. ಇದು ಸಮಾಜದ ಮೇಲೆ ಭಾರೀ ಋಣಾತ್ಮಕ ಪರಿಣಾಮವನ್ನು ಬೀರುತ್ತದೆ. ಕೆಲವೇ ಅಪರಾಧಿಗಳು ಶಿಕ್ಷೆಗೊಳಗಾಗು ವುದರಿಂದ ಅಪರಾಧಿಗಳಲ್ಲಿ ಕಾನೂನಿನ ಲವಲೇಶವೂ ಭೀತಿಯಿರುವುದಿಲ್ಲ ಮತ್ತು ಇದರಿಂದಾಗಿ ಇಂತಹ ಅಪರಾಧಗಳು ಹೆಚ್ಚುತ್ತಿವೆ. ಕಾನೂನು ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸುವುದರಿಂದ ಮಾತ್ರ ಇಂತಹ ಅಪರಾಧಗಳನ್ನು ತಡೆಯಬಹುದು ಮತ್ತು ನಮ್ಮ ಸಮಾಜವೂ ಹೊಣೆಗಾರಿಕೆಯನ್ನು ಪ್ರದರ್ಶಿಸುವ ಮತ್ತು ಸಂತ್ರಸ್ತೆಗೆ ನ್ಯಾಯ ದೊರೆಯುವವರೆಗೆ ಆಕೆಗೆ ಬೆಂಬಲವಾಗಿ ನಿಲ್ಲುವ ಅಗತ್ಯವಿದೆ ಎಂದರು.

ಲಿವ್-ಇನ್ ಸಂಬಂಧಗಳು ಹಳಸುತ್ತಿರುವುದು ಮತ್ತು ಅಪ್ರಾಪ್ತ ವಯಸ್ಕರ ನಡುವೆ ಪ್ರೇಮ ವ್ಯವಹಾರಗಳು ಅತ್ಯಾಚಾರ ಪ್ರಕರಣಗಳು ಹೆಚ್ಚಲು ಪ್ರಮುಖ ಕಾರಣಗಳಾಗಿವೆ ಎಂದು ಮಾಜಿ ಐಪಿಎಸ್ ಅಧಿಕಾರಿ ಹಾಗೂ ಹಾಲಿ ನ್ಯಾಯವಾದಿ ವೈ.ಪಿ.ಸಿಂಗ್ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X