Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾರ್ಡ್ ವಾರು ಮೀಸಲಾತಿ ಪಟ್ಟಿಯಲ್ಲಿ...

ವಾರ್ಡ್ ವಾರು ಮೀಸಲಾತಿ ಪಟ್ಟಿಯಲ್ಲಿ ಗೊಂದಲ: ಆರೋಪ

ಫೆ.18ರಂದು ಪುದು ಗ್ರಾಪಂ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ30 Jan 2018 7:40 PM IST
share

ಬಂಟ್ವಾಳ, ಜ. 30: ತಾಲೂಕಿನ ಅತೀ ದೊಡ್ಡ ಗ್ರಾಮ ಪಂಚಾಯತ್‌ವೊಂದಾಗಿರುವ ಪುದು ಗ್ರಾಮ ಪಂಚಾಯತ್‌ನ ಆಡಳಿತ ಅವಧಿ ಮುಗಿದ ಹಿನ್ನೆಲೆಯಲ್ಲಿ ಫೆ.18ಕ್ಕೆ ಚುನಾವಣೆ ನಡೆಯಲಿದೆ. ಆದರೆ ವಾರ್ಡ್ ವಾರ್ ಮೀಸಲಾತಿಪಟ್ಟಿ ಬಿಡುಗಡೆಯಾಗಿದ್ದರೂ ಪಟ್ಟಿಯಲ್ಲಿ ಗೊಂದಲ ಉಂಟಾಗಿದೆ ಎಂಬ ಆರೋಪ ಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿಬರುತ್ತಿವೆ.

ಪುದು ಗ್ರಾಮ ಪಂಚಾಯತ್‌ನ ಫರಂಗಿಪೇಟೆ, ಅಮ್ಮೆಮಾರ್ ಹಾಗೂ ಕುಮ್ಡೇಲು ವಾರ್ಡ್‌ಗಳಲ್ಲಿ ಮಹಿಳೆ ಹಾಗೂ ಪುರುಷರ ಮೀಸಲಾತಿಯಲ್ಲಿ ಗೊಂದಲ ವುಂಟಾಗಿದೆ ಎಂದು ಗ್ರಾಮಸ್ಥರ ಆರೋಪವಾಗಿದೆ.

ಈ ಹಿಂದಿನ ಆಡಳಿತಾವಧಿಯಲ್ಲಿ ಪುದು ಗ್ರಾಮ ಪಂಚಾಯತ್ 32 ಸ್ಥಾನಗಳನ್ನು ಹೊಂದಿದ್ದು, ಪ್ರಸ್ತುತ ಎರಡು ಸ್ಥಾನಗಳನ್ನು ಹೆಚ್ಚಿಸಿಕೊಂಡು 34 ಸ್ಥಾನಗಳಿಗೆ ಏರಿಕೆಯಾಗಿದೆ. ಇದರಿಂದ ವಾರ್ಡ್ ವಾರು ಮೀಸಲಿಟ್ಟ ಮೀಸಲಾತಿ ಪಟ್ಟಿಯಲ್ಲಿ ಗೊಂದಲ ಉಂಟಾಗಿದ್ದು, ಈ ಬಗ್ಗೆ ಸರಿಪಡಿಸುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಪುದು ಗ್ರಾಮ ಪಂಚಾಯತ್ ಈ ಹಿಂದೆ ನಗರ ಪಂಚಾಯತ್ ಆಗುವ ಅವಕಾಶವಿತ್ತಾದರೂ ಜನಸಂಖ್ಯೆಯ ಕೊರತೆಯಿಂದಾಗಿ ಈ ಪ್ರಸ್ತಾವ ನೆನಗುದಿಗೆ ಬಿದ್ದಿತ್ತು. ಸದ್ಯ ಪುದು ಪಂಚಾಯತ್ ಆಗಿಯೇ ಮುಂದುವರಿದಿದೆ. ಕಳೆದ ಬಾರಿ 22 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದರೆ, 9 ಸ್ಥಾನಗಳಿಗಷ್ಟೆ ಬಿಜೆಪಿ ತೃಪ್ತಿಪಟ್ಟುಕೊಂಡಿತ್ತು. ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟಿರುವ ಪುದು ಗ್ರಾಮ ಪಂಚಾಯತ್‌ಗೆ ಪುದು, ಕುಂಪನಮಜಲು, ಅಮ್ಮೆಮಾರ್, ಪುಂಚಮೆ-ಅಮ್ಮೆಮಾರ್, ಫರಂಗೀಪೇಟೆ, ಸುಜೀರ್, ಪೆರಿಮಾರ್, ಕುಂಜತ್ಕಳ, ಕುಮ್ಡೇಲು, ನೆತ್ತರಕೆರೆ, ಮಾರಿಪಳ್ಳ ಪ್ರದೇಶದ ಹತ್ತು ವಾರ್ಡ್ ಗಳಿದ್ದು, ಸುಮಾರು 13 ಸಾವಿರ ಮತದಾರರನ್ನು ಹೊಂದಿವೆ.

ವಾರ್ಡ್ ವಾರ್ ಮೀಸಲಾತಿ ಪಟ್ಟಿ ಬಿಡುಗಡೆಯಾಗಿದ್ದರೂ ಫರಂಗಿಪೇಟೆ, ಅಮ್ಮೆಮಾರ್ ಹಾಗೂ ಕುಮ್ಡೇಲು ವಾರ್ಡ್‌ಗಳಲ್ಲಿ ಮಹಿಳೆ ಹಾಗೂ ಪುರುಷರ ಮೀಸಲಾತಿಯಲ್ಲಿ ಗೊಂದಲ ವುಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನವಾರ ಅಧಿಕೃತ ಮೀಸಲಾತಿಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ. ಚುನಾವಣೆಗಾಗಿ ತಾಲೂಕಾಡಳಿತವು ಸಂಪೂರ್ಣ ಸಜ್ಜಾಗಿದೆ.
 
ಫೆ. 20ಕ್ಕೆ ಮತ ಎಣಿಕೆ: ಅವಧಿ ಮುಕ್ತಾಯಗೊಳ್ಳಲಿರುವ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಸೇರಿದಂತೆ ಹಾಸನ ಜಿಲ್ಲೆ ಸಕಲೇಶಪುರದ ವಣಗೂರು, ಉಚ್ಚಂಗಿ, ದಾವಣಗೆರೆಯ ಹರಪ್ಪನಹಳ್ಳಿಯ ಹಾರಕನಾಳು ಗ್ರಾಪಂ ಸೇರಿದಂತೆ ಒಟ್ಟು 7 ಗ್ರಾ.ಪಂ. ಗಳಿಗೆ ಫೆ.18ಕ್ಕೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದೆ.

ಆಯಾ ಜಿಲ್ಲಾಧಿಕಾರಿಗಳು ಫೆ.5ಕ್ಕೆ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ. ಫೆ.8ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯದಿನ. ಫೆ.9ಕ್ಕೆ ನಾಮಪತ್ರ ಪರಿಶೀಲನೆ, ಫೆ.12ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಫೆ.18ರ ರವಿವಾರ ಚುನಾವಣೆ ನಡೆಯಲಿದೆ. ಫೆ.20ಕ್ಕೆ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದನ್ವಯ ಫೆ.5ರಿಂದ ಫೆ.20ರ ವರೆಗೆ ಚುನಾವಣಾ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಯಾವುದೆಲ್ಲ ಗ್ರಾ.ಪಂ.ಗಳು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು, ಹಾಸನ ಜಿಲ್ಲೆಯ ವಣಗೂರು-ಉಚ್ಚಂಗಿ, ದಾವಣಗೆರೆಯ ಹಾರಕನಾಳು, ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿಯ ಹಾರೋಹಳ್ಳಿ, ಕೋರಮಂಗಲ ಹಾಗೂ ವಿಜಯಪುರ ಜಿಲ್ಲೆಯ ಇಂಗಳಗೇರಿ ಗ್ರಾ.ಪಂ.ಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X