Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಎಸ್ಸಿ-ಎಸ್ಟಿ, ಅಲ್ಪಸಂಖ್ಯಾತರ...

ಕಾಂಗ್ರೆಸ್ ಎಸ್ಸಿ-ಎಸ್ಟಿ, ಅಲ್ಪಸಂಖ್ಯಾತರ ಅಭಿವೃದ್ದಿಗೆ ಯಾವುದೇ ಕ್ರಮ ಕೈಗೊಂಡಿಲ್ಲ: ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ30 Jan 2018 7:47 PM IST
share
ಕಾಂಗ್ರೆಸ್ ಎಸ್ಸಿ-ಎಸ್ಟಿ, ಅಲ್ಪಸಂಖ್ಯಾತರ ಅಭಿವೃದ್ದಿಗೆ ಯಾವುದೇ ಕ್ರಮ ಕೈಗೊಂಡಿಲ್ಲ: ಯಡಿಯೂರಪ್ಪ

ದಾವಣಗೆರೆ,ಜ.30: ಆರು ದಶಕಗಳ ಕಾಲ ದೇಶ ಆಳಿದ ಕಾಂಗ್ರೆಸ್ ಎಸ್ಸಿ-ಎಸ್ಟಿ, ಅಲ್ಪಸಂಖ್ಯಾತರ ಅಭಿವೃದ್ದಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಟೀಕಿಸಿದರು. 

ತಾಲೂಕಿನ ಅಣಜಿ ಗ್ರಾಮದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಮಾಯಕೊಂಡ ಮೀಸಲು ಕ್ಷೇತ್ರದ ಹರಿಜನ (ಮಾದಿಗ) ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಕಾಂಗ್ರೆಸ್ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೆ ರಾಜಘಾಟ್‍ನಲ್ಲಿ ಜಾಗ ನೀಡದೆ ಅವಮಾನ ಮಾಡಿತ್ತು. ಅಲ್ಲದೆ, ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು 2 ಬಾರಿ ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಅದರೆ, ಬಿಜೆಪಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ 2 ದಿವಸಗಳ ಕಾಲ ಲೋಕಸಭೆಯಲ್ಲಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿತು ಎಂದರು. 

ಸಿಎಂ ಸಿದ್ದರಾಮಯ್ಯ, ದಲಿತರ ಮನೆಯಲ್ಲಿ ಊಟ ಮಾಡಿದಾಗ ಟೀಕಿಸುವ ಮೂಲಕ ಸಂಬಂಧ ಬೆಳೆಸುವ ಬಗ್ಗೆ ಮಾತನಾಡಿ ಕೀಳುಮಟ್ಟದ ರಾಜಕಾರಣ ಮಾಡಿದ್ದಾರೆ. ನಾನು ಸಿಎಂ ಆದ ಸಂದರ್ಭ ಬೆಂಗಳೂರಿನಲ್ಲಿ ಬಾಬು ಜಗಜೀವನ್ ರಾಂ ಅವರ ಭವನ ನಿರ್ಮಾಣಕ್ಕೆ 2 ಕೋಟಿ ಹಣ ಮೀಸಲಿರಿಸಿದ್ದೇನೆ. ಎಲ್ಲ ಜಿಲ್ಲಾ ಮತ್ತು ತಾಲೂಕುಗಳಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣ ಮಾಡಿದ್ದೇವೆ. ಪರಿಶಿಷ್ಟ ಜಾತಿ ಸಮುದಾಯದ ಜನರಿಗೆ ಗಂಗಾ ಕಲ್ಯಾಣ ಯೋಜನೆಯಲ್ಲಿ ಸೌಲಭ್ಯ ಕಲ್ಪಿಸಿದ್ದೇವೆ. ಕಿತ್ತೂರು ಚೆನ್ನಮ್ಮ, ಮೋರಾರ್ಜಿ ಶಾಲೆಗಳ ಅಭಿವೃದ್ದಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪ್ರೊ.ಲಿಂಗಣ್ಣ ಅವರಿಗೆ ಟಿಕೆಟ್ ನೀಡುವ ಸಂಬಂಧ ಸರ್ವೇ ಮಾಡಲಾಗುತ್ತಿದೆ. ನಂತರ ಪಕ್ಷದ ವರಿಷ್ಠರಾದ ಅಮಿತ್ ಶಾ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ನಿರ್ಧಾರ ಮಾಡಲಿದ್ದಾರೆ. ಟಿಕೆಟ್ ಯಾರಿಗೆ ಕೊಟ್ಟರೂ ಎಲ್ಲರೂ ಬಿಜೆಪಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. 

ಪ್ರೊ. ಲಿಂಗಣ್ಣ ಮಾತನಾಡಿ, ಕಾಂಗ್ರೆಸ್ ನಮ್ಮ ಸಮಾಜವನ್ನು ಕೇವಲ ಓಟ ಬ್ಯಾಂಕ್‍ಗೆ ಸೀಮಿತ ಮಾಡಿ ನಿರ್ಲಕ್ಷ್ಯ ಮಾಡಿದೆ. ಅದರೆ, ಬಿಜೆಪಿ ಆಡಳಿತದ ಅವಧಿಯಲ್ಲಿ ಸಾಕಷ್ಟು ಅಭಿವೃದ್ದಿ ಕೈಗೊಳ್ಳಲಾಗಿದೆ. ಕೇಂದ್ರ ಸರಕಾರದ ಶೇ. 40ರಷ್ಟು ಯೋಜನೆಗಳು ಪ. ಜಾತಿ ಪರವಾಗಿವೆ ಎಂದರು. 

ಹಿರಿಯೂರ ಆದಿಜಾಂಬವ ಪೀಠದ ಷಡಕ್ಷರಿ ಮುನಿಶ್ರೀ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಆಲೂರು ನಿಂಗರಾಜ್, ಮೆಳೆಕಟ್ಟೆ ನಾಗರಾಜ್, ಬಿ.ಪಿ. ಹರೀಶ್, ಯಶವಂತರಾವ್ ಜಾಧವ್, ಅಣಜಿ ಗುಡ್ಡೇಶ್, ನಾಗಣ್ಣ ಹಾಗೂ ಇತರರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X