Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಹೇ ರಾಮ್’ ಗಾಂಧೀಜಿ ಹೇಳಿದ ಕೊನೆಯ...

‘ಹೇ ರಾಮ್’ ಗಾಂಧೀಜಿ ಹೇಳಿದ ಕೊನೆಯ ಶಬ್ಧವಾಗಿತ್ತೇ?

ಈ ಬಗ್ಗೆ ಅವರ ಸಹಾಯಕ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ30 Jan 2018 9:41 PM IST
share
‘ಹೇ ರಾಮ್’ ಗಾಂಧೀಜಿ ಹೇಳಿದ ಕೊನೆಯ ಶಬ್ಧವಾಗಿತ್ತೇ?

ಚೆನ್ನೈ,ಜ.30: 70 ವರ್ಷಗಳ ಹಿಂದೆ ಮಹಾತ್ಮಾ ಗಾಂಧಿಯವರ ಹತ್ಯೆ ನಡೆದಾಗ ಅವರು ‘ಹೇ ರಾಮ್’ ಎಂಬ ಶಬ್ದಗಳನ್ನು ಉಚ್ಚರಿಸಿರಲಿಲ್ಲ ಎಂದು ದಶಕದ ಹಿಂದೆ ಹೇಳುವ ಮೂಲಕ ಇಡೀ ದೇಶಕ್ಕೆ ಆಘಾತವನ್ನುಂಟು ಮಾಡಿದ್ದ ಅವರ ಸಹಾಯಕ ರಾಗಿದ್ದ 96ರ ಹರೆಯದ ವೆಂಕಟ ಕಲ್ಯಾಣಂ ಅವರು, ಈ ಹಿಂದೆ ತನ್ನ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿತ್ತು ಎಂದು ಮಂಗಳವಾರ ಇಲ್ಲಿ ಸ್ಪಷ್ಟಪಡಿಸಿದರು.

ಗಾಂಧೀಜಿಯವರು ಕೊನೆಯುಸಿರು ಬಿಡುವ ಮುನ್ನ ‘ಹೇ ರಾಮ್’ ಎಂದು ಉಚ್ಚರಿಸಿರಲಿಲ್ಲ ಎಂದು ತಾನೆಂದೂ ಹೇಳಿರಲಿಲ್ಲ. ಅವರು ‘ಹೇ ರಾಮ್’ ಎಂದು ಹೇಳಿದ್ದನ್ನು ತಾನು ಕೇಳಿರಲಿಲ್ಲ ಎಂದಷ್ಟೇ ತಾನು ಆಗ ಹೇಳಿದ್ದೆ ಎಂದು 1943-48ರ ಅವಧಿಯಲ್ಲಿ ರಾಷ್ಟ್ರಪಿತನ ಖಾಸಗಿ ಕಾರ್ಯದರ್ಶಿಯಾಗಿದ್ದ ಕಲ್ಯಾಣಂ ತಿಳಿಸಿದರು.

ಘಟನೆಯ ನಂತರದ ಗದ್ದಲದಿಂದಾಗಿ ತನಗೇನೂ ಕೇಳಿಸಿರಲಿಲ್ಲ ಎಂದು 1948, ಜ.30ರಂದು ನಡೆದಿದ್ದ ಗಾಂಧೀಜಿಯವರ ಹತ್ಯೆಯ ಪ್ರತ್ಯಕ್ಷದರ್ಶಿಯೆಂದು ಹೇಳಿಕೊಂಡಿರುವ ಅವರು ತಿಳಿಸಿದರು.

ಮಹಾತ್ಮರಿಗೆ ಗುಂಡಿಕ್ಕಿದಾಗ ಪ್ರತಿಯೊಬ್ಬರೂ ಬೊಬ್ಬೆ ಹೊಡೆಯುತ್ತಿದ್ದರು. ಆ ಗದ್ದಲದಲ್ಲಿ ತನಗೇನೂ ಕೇಳಲು ಸಾಧ್ಯವಾಗಿರಲಿಲ್ಲ. ಅವರು ‘ಹೇ ರಾಮ್’ ಎಂದು ಉಚ್ಚರಿಸಿರಬಹುದು ಎಂದರು.

ನಾಥೂರಾಂ ಗೋಡ್ಸೆಯ ಗುಂಡೇಟುಗಳಿಂದ ಕುಸಿದು ಬಿದ್ದಿದ್ದ ಗಾಂಧೀಜಿ ‘ಹೇ ರಾಮ್’ ಎಂದು ಹೇಳಿರಲಿಲ್ಲ ಎಂದು 2006ರಲ್ಲಿ ಕೇರಳದ ಕೊಲ್ಲಮ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳುವ ಮೂಲಕ ಕಲ್ಯಾಣಂ ಇಡೀ ದೇಶವನ್ನು ದಂಗು ಬಡಿಸಿದ್ದರು. ಆಗ ಗಾಂಧೀಜಿಯವರ ಮರಿಮೊಮ್ಮಗ ತುಷಾರ್ ಗಾಂಧಿಯವರು ಈ ಹೇಳಿಕೆಯನ್ನು ಅಲ್ಲಗಳೆದಿದ್ದರು. ಗುಂಡೇಟು ತಿಂದ ಬಳಿಕ ಗಾಂಧೀಜಿಯವರು ಎರಡೂ ಕೈಗಳನ್ನು ಜೋಡಿಸಿ ‘ಹೇ ರಾಮ್’ ಎಂದು ಉಚ್ಚರಿಸಿದ್ದರು ಎಂದು ಕೊಲೆಯ ವಿಚಾರಣೆ ಸಂದರ್ಭ ಸರ್ದಾರ್ ಗುರುಬಚನ್ ಸಿಂಗ್ ಅವರ ಸಾಕ್ಷ್ಯವನ್ನು ಅವರು ಉಲ್ಲೇಖಿಸಿದ್ದರು.

ಗೋಡ್ಸೆ ಗಾಂಧೀಜಿಯವರನ್ನು ಒಂದೇ ಬಾರಿ ಕೊಂದಿದ್ದ. ಆದರೆ ರಾಜಕೀಯ ಪಕ್ಷಗಳು ಗಾಂಧೀಜಿವರ ಬೋಧನೆಗಳನ್ನು ಪಾಲಿಸದೆ ಅವರನ್ನು ಪ್ರತಿ ನಿತ್ಯ ಕೊಲ್ಲುತ್ತಿವೆ ಎಂದೂ ಕಲ್ಯಾಣಂ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X