Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ.31: ಸೂಪರ್ ಬ್ಲೂ ಬ್ಲಡ್ ಮೂನ್

ಜ.31: ಸೂಪರ್ ಬ್ಲೂ ಬ್ಲಡ್ ಮೂನ್

ವಾರ್ತಾಭಾರತಿವಾರ್ತಾಭಾರತಿ30 Jan 2018 9:53 PM IST
share
ಜ.31: ಸೂಪರ್ ಬ್ಲೂ ಬ್ಲಡ್ ಮೂನ್

ಹೊಸದಿಲ್ಲಿ, ಜ.30: ಆಕಾಶಕಾಯಗಳ ಬಗ್ಗೆ ಆಸಕ್ತಿಯುಳ್ಳವರಿಗೆ ಇಂದು ಸೂಪರ್ ಬ್ಲೂ ಬ್ಲಡ್ ಮೂನ್ ವೀಕ್ಷಿಸುವ ಅಪರೂಪದ ಅವಕಾಶ ಒದಗಿಬಂದಿದೆ. ನಾಸಾ ವಿಜ್ಞಾನಿಗಳ ಪ್ರಕಾರ, ಜನವರಿ 31 (ಇಂದು) ರಂದು ಸಂಭವಿಸಲಿರುವ ಹುಣ್ಣಿಮೆ ಮೂರು ಕಾರಣಗಳಿಂದ ವಿಶೇಷವಾಗಿರಲಿದೆ. ಇದು ಸೂಪರ್ ಮೂನ್‌ಗಳ ಸರಣಿಯಲ್ಲಿ ಮೂರನೇಯದ್ದಾಗಿದೆ. ಈ ಸಮಯದಲ್ಲಿ ಚಂದ್ರನು ಭೂಮಿಯ ಅತ್ಯಂತ ಸಮೀಪಕ್ಕೆ ಆಗಮಿಸುತ್ತಾನೆ ಮತ್ತು ಸಾಮಾನ್ಯ ಹುಣ್ಣಿಮೆಯಂದು ಕಾಣುವುದಕ್ಕಿಂತ ಹದಿನಾಲ್ಕು ಪಟ್ಟು ಹೆಚ್ಚು ದೊಡ್ಡದಾಗಿ ಗೋಚರಿಸುತ್ತಾನೆ. ಈ ತಿಂಗಳಲ್ಲಿ ಸಂಭವಿಸುತ್ತಿರುವ ಎರಡನೇ ಹುಣ್ಣಿಮೆ ಇದಾಗಿದ್ದು, ಸಾಮಾನ್ಯವಾಗಿ ಈ ವಿದ್ಯಾಮಾನವನ್ನು ಬ್ಲೂಮೂನ್ ಎಂದು ಕರೆಯಲಾಗುತ್ತದೆ. ಸೂಪರ್ ಬ್ಲೂಮೂನ್ ಭೂಮಿಯ ನೆರಳಿನ ಮೂಲಕ ಹಾದು ಹೋಗುವ ಕಾರಣ ಚಂದ್ರಗ್ರಹಣ ಸಂಭವಿಸಲಿದೆ. ಈ ವೇಳೆ ಚಂದ್ರನು ಕೆಂಪಾಗಿ ಗೋಚರಿಸುವ ಕಾರಣ ಅದನ್ನು ಬ್ಲಡ್ ಮೂನ್ ಎಂದು ಕರೆಯಲಾಗಿದೆ. ಆಕಾಶಕಾಯ ವೀಕ್ಷಕರಿಗೆ ಸೂಪರ್ ಬ್ಲೂ ಬ್ಲಡ್ ಮೂನ್ ವೀಕ್ಷಣೆಗೆ ಸಹಕಾರಿಯಾಗುವಂತೆ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದಲ್ಲಿರುವ ನೆಹರೂ ತಾರಾಲಯದಲ್ಲಿ ಗ್ರಹಣದಿಂದ ಚಂದ್ರನ ಉದಯ ಎಂಬ ಕಾರ್ಯಕ್ರಮವನ್ನು ಬುಧವಾರದಂದು ಸಂಜೆ 6.30ರಿಂದ ರಾತ್ರಿ 9 ಗಂಟೆಯವರೆಗೆ ಆಯೋಜಿಸಲಾಗಿದೆ.

ಖಗೋಳ ಶಿಕ್ಷಣ ಮತ್ತು ಖಗೋಳ ಪ್ರವಾಸೋದ್ಯಮ ಸೇವೆಯನ್ನ ಗಮನದಲ್ಲಿಟ್ಟು ಆರಂಭಿಸಲಾಗಿರುವ ಸ್ಟಾರ್ಟ್ ಅಪ್ ಸಂಸ್ಥೆ ಸ್ಪೇಸ್ ಇಂಡಿಯಾ, ಈ ಅಭೂತಪೂರ್ವ ವಿದ್ಯಾಮಾನವನ್ನು ವೀಕ್ಷಿಸಲು ಜನರಿಗೆ ಸಹಕಾರಿಯಾಗಲು ಇಂಡಿಯಾ ಗೇಟ್ ಸೇರಿದಂತೆ ಭಾರತದ ವಿವಿಧೆಡೆಗಳಲ್ಲಿ ಸಂಜೆ 6ರಿಂದ ರಾತ್ರಿ 9.30ರ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದೆ.

ಬುಧವಾರದಂದು ಚಂದ್ರಗ್ರಹಣದ ವೇಳೆ ಚಂದ್ರನು ಒಂದು ಗಂಟೆ ಹದಿನಾರು ನಿಮಿಷಗಳ ಕಾಲ ಸಂಪೂರ್ಣವಾಗಿ ಮರೆಯಾಗುತ್ತಾನೆ. ಭಾರತಾದ್ಯಂತ ಈ ಚಂದ್ರಗ್ರಹಣವು ಗೋಚರವಾದರೂ ಚಂದ್ರೋದಯದ ಜೊತೆಗೆಯೇ ಗ್ರಹಣವೂ ಆರಂಭವಾಗುವುದರಿಂದ ಈ ಸಮಯದಲ್ಲಿ ಕೇವಲ ಭಾಗಶಃ ಗ್ರಹಣವನ್ನು ವೀಕ್ಷಿಸಲು ಮಾತ್ರ ಸಾಧ್ಯವಾಗಲಿದೆ ಎಂದು ಸ್ಪೇಸ್ ಇಂಡಿಯಾ ತಿಳಿಸಿದೆ. ಈ ಚಂದ್ರಗ್ರಹಣದ ಮೂಲಕ ಅಪರೂಪದ ಚಂದ್ರೋದಯ ವೀಕ್ಷಣೆಗೆ ಅವಕಾಶ ಸಿಗುವ ಜೊತೆಗೆ ಚಂದ್ರನ ಮೇಲ್ಮೈಯು ತಕ್ಷಣ ತಣ್ಣಗಾದರೆ ಏನಾಗುತ್ತದೆ ಎಂಬುದನ್ನು ತಿಳಿಯಲು ಸಂಶೋಧಕರಿಗೆ ನೆರವಾಗಲಿದೆ ಎಂದು ಸ್ಪೇಸ್ ಇಂಡಿಯಾ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X