Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತುಂಬೆ ಆಸ್ಪತ್ರೆ ಹೈದರಾಬಾದ್ ಗೆ...

ತುಂಬೆ ಆಸ್ಪತ್ರೆ ಹೈದರಾಬಾದ್ ಗೆ ಪ್ರತಿಷ್ಟಿತ ಎನ್‌ಎಬಿಎಚ್, ಎನ್‌ಎಬಿಎಲ್ ಮಾನ್ಯತೆ

ವಾರ್ತಾಭಾರತಿವಾರ್ತಾಭಾರತಿ30 Jan 2018 10:04 PM IST
share
ತುಂಬೆ ಆಸ್ಪತ್ರೆ ಹೈದರಾಬಾದ್ ಗೆ ಪ್ರತಿಷ್ಟಿತ ಎನ್‌ಎಬಿಎಚ್, ಎನ್‌ಎಬಿಎಲ್ ಮಾನ್ಯತೆ

ಹೈದರಾಬಾದ್, ಜ.30:   ತುಂಬೆ ಸಮೂಹ ಸಂಸ್ಥೆಯ ಅಂಗವಾಗಿರುವ ತುಂಬೆ ಆಸ್ಪತ್ರೆ-ಹೈದರಾಬಾದ್‌ಗೆ ಅತ್ಯುತ್ತಮ ಆರೋಗ್ಯ ಸೇವೆಗಾಗಿ ಆಸ್ಪತ್ರೆಗಳು ಮತ್ತು ಆರೋಗ್ಯ ಸೇವೆ ಪೂರೈಕೆದಾರರ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್‌ಎಬಿಎಚ್) ನಿಂದ ಮಾನ್ಯತೆಯನ್ನು ಪಡೆದುಕೊಂಡಿದೆ. ಇದರ ಜೊತೆಗೆ ತುಂಬೆ ಪ್ರಯೋಗಾಲಯಗಳ ಜಾಲದ ಭಾಗವಾಗಿರುವ ತುಂಬೆ ಆಸ್ಪತ್ರೆಯ ಪ್ರಯೋಗಾಲಯವು ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್‌ಎಬಿಎಲ್) ನಿಂದ ಮಾನ್ಯತೆಯನ್ನು ಪಡೆದುಕೊಂಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಎನ್‌ಎಬಿಎಚ್ ಮತ್ತು ಎನ್‌ಎಬಿಎಲ್ ಭಾರತೀಯ ಗುಣಮಟ್ಟ ಮಂಡಳಿಯ (ಕ್ಯೂಸಿಐ) ಯ ವಿಭಾಗೀಯ ಮಂಡಳಿಗಳಾಗಿವೆ. ಎನ್‌ಎಬಿಎಚ್, ಆರೋಗ್ಯ ಸೇವೆಯಲ್ಲಿ ಗುಣಮಟ್ಟದ ಅಂತಾರಾಷ್ಟ್ರೀಯ ಸಂಘದ (ಐಎಸ್‌ಕ್ಯೂಯುಎ)ಯ ಸಾಂಸ್ಥಿಕ ಸದಸ್ಯನಾಗಿದೆ. ಈ ಸಂಘವು ಆರೋಗ್ಯ ಸೇವೆ ಕ್ಷೇತ್ರದಲ್ಲಿ ಮಾನ್ಯತೆಗಳನ್ನು ನೀಡಲು ಮಾನ್ಯತಾ ಸಂಸ್ಥೆಗಳಿಗೆ ಅನುಮತಿಯನ್ನು ನೀಡುವ ಅಂತಾರಾಷ್ಟ್ರೀಯ ಮಟ್ಟದ ಅತ್ಯುನ್ನತ ಸಂಸ್ಥೆಯಾಗಿದೆ. ಅಂತಾರಾಷ್ಟ್ರೀಯ ಲ್ಯಾಬೊರೆಟರಿ ಮಾನ್ಯತೆ ಸಹಕಾರ (ಐಎಲ್‌ಎಸಿ) ಮತ್ತು ಏಷ್ಯಾ ಪಿಸಿಫಿಕ್ ಲ್ಯಾಬೊರೆಟರಿ ಮಾನ್ಯತೆ ಸಹಕಾರ (ಎಪಿಎಲ್‌ಎಸಿ) ಯ ಜೊತೆ ಒಪ್ಪಂದ ಮಾಡಿಕೊಂಡಿರುವ ಕಾರಣ ಎನ್‌ಎಬಿಎಲ್‌ನಿಂದ ಮಾನ್ಯತೆ ಪಡೆದ ಲ್ಯಾಬೊರೆಟರಿಗಳು ಅಂತಾರಾಷ್ಟ್ರೀಯವಾಗಿ ಪ್ರಾಮುಖ್ಯತೆಯನ್ನು ಹೊಂದಿವೆ.

ಈ ಕುರಿತು ಆಸ್ಪತ್ರೆಗೆ ಅಭಿನಂದನೆಯನ್ನು ಸಲ್ಲಿಸಿದ ತುಂಬೆ ಸಮೂಹದ ಸ್ಥಾಪಕಾಧ್ಯಕ್ಷರಾದ ಡಾ. ತುಂಬೆ ಮೊಯ್ದಿನ್ ಅವರು, ಆಸ್ಪತ್ರೆಯ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣವಾಗಿದೆ. ಯುಎಇ ಮತ್ತು ಭಾರತದಲ್ಲಿರುವ ತುಂಬೆ ಆಸ್ಪತ್ರೆಗಳು ಪಡೆದಿರುವ ಅಂತಾರಾಷ್ಟ್ರೀಯ ಮಾನ್ಯತೆಗಳು ಮತ್ತು ಮಾಡಿಕೊಂಡಿರುವ ಒಪ್ಪಂದಗಳು ನಾವು ಅನುಸರಿಸುವ ಅತ್ಯುನ್ನತ ಗುಣಮಟ್ಟಕ್ಕೆ ಹಿಡಿದ ಕನ್ನಡಿಯಾಗಿದೆ. ನಮ್ಮ ಆಸ್ಪತ್ರೆಗಳ ಭೋದನಾ/ಶೈಕ್ಷಣಿಕ ರಚನೆಯು ವಿಶಿಷ್ಟವಾಗಿದೆ ಮತ್ತು ಇದರಿಂದ ಇನ್ನಷ್ಟು ಹೆಚ್ಚಿನ ಗುಣಮಟ್ಟದ ಸವಾಲನ್ನು ಸಾಧಿಸಲು ನಮಗೆ ಪ್ರೇರಣೆ ಸಿಗುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಹೈದರಾಬಾದ್ ಆಸ್ಪತ್ರೆಗೆ ಎನ್‌ಎಬಿಎಚ್ ಮತ್ತು ಎನ್‌ಎಬಿಎಲ್ ಮಾನ್ಯತೆ ಸಿಕ್ಕಿರುವುದು ಸಂತೋಷದ ವಿಷಯವಾಗಿದೆ. ನಮ್ಮಲ್ಲಿ ಬರುವ ರೋಗಿಗಳಿಗೆ ಅತ್ಯುತ್ತಮ ಗುಣಮಟ್ಟದ ಸೇವೆಯನ್ನು ನೀಡುವುದೇ ನಮ್ಮ ಉದ್ದೇಶವಾಗಿದೆ. ಇಂಥ ಮಾನ್ಯತೆಗಳು ಮತ್ತು ಪ್ರಶಂಸೆಗಳು ನಮ್ಮನ್ನು ಮತ್ತಷ್ಟು ಹೆಚ್ಚಿನ ಸಾಧನೆಯನ್ನು ಮಾಡಲು ಹುರಿದುಂಬಿಸುವ ಮೂಲಕ ರೋಗಿಗಳಿಗೆ ಅತ್ಯಾಧುನಿಕ ಉಪಕರಣಗಳೊಂದಿಗೆ ಉತ್ತಮ ಸೇವೆಯನ್ನು ನೀಡಲು ಸಹಕಾರಿಯಾಗಿದೆ ಎಂದು ತುಂಬೆ ಸಮೂಹದ ಆರೋಗ್ಯ ಸೇವೆ ವಿಭಾಗದ ಉಪಾಧ್ಯಕ್ಷ ಅಕ್ಬರ್ ಮೊಯ್ದಿನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X