Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯಮನ್ ಅಧ್ಯಕ್ಷೀಯ ಅರಮನೆಗೆ ಬಂಡುಕೋರರ...

ಯಮನ್ ಅಧ್ಯಕ್ಷೀಯ ಅರಮನೆಗೆ ಬಂಡುಕೋರರ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ30 Jan 2018 10:41 PM IST
share
ಯಮನ್ ಅಧ್ಯಕ್ಷೀಯ ಅರಮನೆಗೆ ಬಂಡುಕೋರರ ಮುತ್ತಿಗೆ

ಸನಾ (ಯಮನ್), ಜ. 30: ಸೋಮವಾರ ರಾತ್ರಿಯ ಭೀಕರ ಕಾಳಗದ ಬಳಿಕ, ದಕ್ಷಿಣದ ಬಂದರು ನಗರ ಏಡನ್‌ನಲ್ಲಿರುವ ಅಧ್ಯಕ್ಷೀಯ ಅರಮನೆಯನ್ನು ಪ್ರತ್ಯೇಕತಾವಾದಿಗಳು ವಶಪಡಿಸಿಕೊಂಡಿದ್ದು, ಅಲ್ಲಿಂದ ಪರಾರಿಯಾಗಲು ದೇಶದ ಪ್ರಧಾನಿ ಅಹ್ಮದ್ ಉಬೈದ್ ಬಿನ್ ಡಘರ್ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಯಮನ್ ಭದ್ರತಾ ಅಧಿಕಾರಿಗಳು ಹೇಳಿದ್ದಾರೆ.

‘ಸದರ್ನ್ ಟ್ರಾನ್ಸಿಶನಲ್ ಕೌನ್ಸಿಲ್’ಗೆ ನಿಷ್ಠೆ ಹೊಂದಿರುವ ಹೋರಾಟಗಾರರು ಯುದ್ಧ ಮಾಡುತ್ತಾ ಏಡನ್‌ನ ಕ್ರೇಟರ್ ಜಿಲ್ಲೆಯಲ್ಲಿರುವ ‘ಮಾಶಿಕ್’ ಅರಮನೆಯ ದ್ವಾರದವರೆಗೆ ಬಂದಿದ್ದಾರೆ.

ಈ ಅರಮನೆಯು ಯಮನ್‌ನ ಅಂತಾರಾಷ್ಟ್ರೀಯ ಬೆಂಬಲಿತ ಸರಕಾರದ ಕೇಂದ್ರವಾಗಿದೆ.

ಪ್ರಧಾನಿ ಅಹ್ಮದ್ ಉಬೈದ್ ಬಿನ್ ಡಘರ್ ತಕ್ಷಣ ಅರಮನೆಯಿಂದ ಪರಾರಿಯಾಗಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮೊದಲು ಪ್ರತ್ಯೇಕತಾವಾದಿಗಳು ರಾಜೀನಾಮೆ ನೀಡಲು ಸರಕಾರಕ್ಕೆ ಗಡುವು ನೀಡಿದ್ದರು. ಆ ಗಡುವು ಮುಗಿದ ಬಳಿಕ ರವಿವಾರ ಏಡನ್‌ನಲ್ಲಿ ಕಾಳಗ ಆರಂಭಗೊಂಡಿದೆ.

ಈ ನಡುವೆ, ಅಧ್ಯಕ್ಷ ಮನ್ಸೂರ್ ಹದಿ ಪ್ರತ್ಯೇಕತಾವಾದಿಗಳ ಕೃತ್ಯವನ್ನು ‘ಕ್ಷಿಪ್ರಕ್ರಾಂತಿ’ ಎಂಬುದಾಗಿ ಬಣ್ಣಿಸಿದ್ದಾರೆ.

ಭೀಕರ ಕಾಳಗ: 36 ಸಾವು; 185 ಮಂದಿಗೆ ಗಾಯ

ಯಮನ್‌ನ ಮಧ್ಯಾಂತರ ರಾಜಧಾನಿ ಏಡನ್‌ನಲ್ಲಿ ಸರಕಾರಿ ಪಡೆಗಳು ಮತ್ತು ಪ್ರತ್ಯೇಕತಾವಾದಿಗಳ ನಡುವೆ ನಡೆಯುತ್ತಿರುವ ಭೀಕರ ಕಾಳಗದಲ್ಲಿ ಎರಡು ದಿನಗಳ ಅವಧಿಯಲ್ಲಿ ಕನಿಷ್ಠ 36 ಮಂದಿ ಮೃತಪಟ್ಟಿದ್ದಾರೆ ಹಾಗೂ 185 ಮಂದಿ ಗಾಯಗೊಂಡಿದ್ದಾರೆ ಎಂದು ರೆಡ್‌ಕ್ರಾಸ್ ಹೇಳಿದೆ.

ಕಾಳಗದ ಎರಡನೆ ದಿನವಾದ ಸೋಮವಾರ ರಾತ್ರಿ ಯುದ್ಧನಿರತ ಉಭಯ ಬಣಗಳು ಟ್ಯಾಂಕ್‌ಗಳು ಮತ್ತು ಫಿರಂಗಿಗಳನ್ನು ಬಳಸಿದ್ದು, ಪರಿಸ್ಥಿತಿ ಉಲ್ಬಣಗೊಂಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಯಮನ್‌ನ ಅಧಿಕೃತ ಸರಕಾರಕ್ಕೆ ಬೆಂಬಲ ನೀಡುತ್ತಿರುವ ಸೌದಿ ಅರೇಬಿಯ ನೇತೃತ್ವದ ಸೇನಾ ಮಿತ್ರಕೂಟವು, ತಕ್ಷಣ ಯುದ್ಧವಿರಾಮ ಆಚರಿಸುವಂತೆ ಹಾಗೂ ಎಲ್ಲ ರೀತಿಯ ಸಶಸ್ತ್ರ ಸಂಘರ್ಷವನ್ನು ನಿಲ್ಲಿಸುವಂತೆ ಕರೆ ನೀಡಿದೆ ಎಂದು ಸೌದಿ ಅರೇಬಿಯದ ಸರಕಾರಿ ಸುದ್ದಿ ಸಂಸ್ಥೆ ಎಸ್‌ಪಿಎ ನೀಡಿದ ಹೇಳಿಕೆಯೊಂದರಲ್ಲಿ ತಿಳಿಸಿದೆ.

 ಏಡನ್‌ನಲ್ಲಿ ನಡೆಯುತ್ತಿರುವ ಕಾಳಗದಲ್ಲಿ 36 ಮಂದಿ ಮೃತಪಟ್ಟಿದ್ದಾರೆ ಹಾಗೂ 185 ಮಂದಿ ಗಾಯಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿಯ ಯಮನ್ ಘಟಕದ ಮುಖ್ಯಸ್ಥ ಕಾರ್ಲೋಸ್ ಬ್ಯಾಟಲಸ್ ಸೋಮವಾರ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ನಾಗರಿಕ ಸಾವು ನೋವಿನ ವಿವರಗಳನ್ನು ಅದು ನೀಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X