Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ. 3ರಿಂದ ಒಡ್ಡೂರು ಫಾರ್ಮ್‌ನಲ್ಲಿ ಕೃಷಿ...

ಫೆ. 3ರಿಂದ ಒಡ್ಡೂರು ಫಾರ್ಮ್‌ನಲ್ಲಿ ಕೃಷಿ ಸಂಗಮ

ಫಾರ್ಮ್‌ಸರ್ಜ್ ಆ್ಯಪ್ ಲೋಕಾರ್ಪಣೆ: ವಿಚಾರ ಮಂಥನ

ವಾರ್ತಾಭಾರತಿವಾರ್ತಾಭಾರತಿ30 Jan 2018 11:33 PM IST
share

ಮಂಗಳೂರು, ಜ. 30: ನಗರದ ಅರುಣ್ಯ ಫೌಂಡೇಶನ್ ಆಯೋಜಿಸಿರುವ ಕೃಷಿ ಸಂಗಮ - ಕೃಷಿ ಪರಿವಾರದ ಸಮಾಗಮ ಕಾರ್ಯಕ್ರಮವು ಫೆ. 3 ಮತ್ತು 4ರಂದು ಗಂಜಿಮಠ ಬಳಿಯ ಒಡ್ಡೂರು ಫಾರ್ಮ್‌ನಲ್ಲಿ ನಡೆಯಲಿದೆ.

ಫೆ. 3ರ ಬೆಳಗ್ಗೆ ಭತ್ತದ ತಳಿ ತಪಸ್ವಿ ಆರ್. ಕೆ. ದೇವ್‌ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೃಷಿಕರ ಸಬಲೀಕರಣಕ್ಕಾಗಿ ಅರುಣ್ಯ ಫೌಂಡೇಶನ್, ಪ್ರಧ್ವಾನ್ ಟೆಕ್ನಾಲಜೀಸ್ ಮಂಗಳೂರು ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಫಾರ್ಮ್‌ಸರ್ಜ್ ಆ್ಯಪ್ ಅನ್ನು ದ.ಕ. ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಎಚ್. ಲೋಕಾರ್ಪಣೆ ಮಾಡಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಪಿ. ಚೌಡಪ್ಪ, ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ, ಮೂಡಬಿದ್ರೆ ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ರಾಜವರ್ಮ ಬೈಲಂಗಡಿ ಮುಖ್ಯ ಅತಿಥಿಗಳಾಗಿ ಭಾಗವಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಶಿವಕುಮಾರ್ ಮಗದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಒಡ್ಡೂರು ಫಾರ್ಮ್‌ನ ಯು. ರಾಜೇಶ್ ನಾಕ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಫೆ. 4ರಂದು ಬೆಳಗ್ಗೆ ‘ಕೃಷಿ ಮತ್ತು ಯುವಜನತೆ: ಸವಾಲುಗಳು-ಸಾಧ್ಯತೆಗಳು’ ವಿಚಾರ ಮಂಥನ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಉದಯವಾಣಿಯ ನಿವೃತ್ತ ಹಿರಿಯ ಉಪಸಂಪಾದಕ ನಿತ್ಯಾನಂದ ಪಡ್ರೆ, ಹಸಿರುವಾಸಿ ಪತ್ರಿಕೆಯ ಸಂಪಾದಕ ರಾಧಾಕೃಷ್ಣ ಭಡ್ತಿ, ದಕ್ಷಿಣ ಕನ್ನಡ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಕುಮಾರ್ ಮಗದ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಉಪನ್ಯಾಸಕ ಪಿ.ಎಸ್. ಶ್ರೀಕಂಠಮೂರ್ತಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ದ.ಕ. ಜಿಲ್ಲಾ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಎಚ್. ಆರ್. ನಾಕ್, ಸುಜಾತಾ ಸಂಚಿಕೆಯ ಸಂಪದಾಕ ರಾಧಾಕೃಷ್ಣ ಹೊಳ್ಳ, ಜೆಸಿಐ ಮಂಗಳೂರಿನ ಅಧ್ಯಕ್ಷೆ ಜೆಸಿ ಶೈಲಜಾ ಎ. ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜೆಸಿಐ ಮಂಗಳೂರು ಇದರ ಸಹಯೋಗದೊಂದಿಗೆ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ.

ಕೃಷಿ ಸಂಗಮ ವಿಶೇಷತೆಗಳು: ಜ್ಞಾನ ಪ್ರಸಾರದ ನಿಟ್ಟಿನಲ್ಲಿ ನಡೆಯುವ ಕೃಷಿ ಸಂಗಮದಲ್ಲಿ ಡ್ರೋನ್, ರಬ್ಬರ್ ಟ್ಯಾಪಿಂಗ್, ಸ್ವಯಂಚಾಲಿತ ಮರ ಹತ್ತುವ ಯಂತ್ರಗಳ ವಿಶೇಷ ಆಕರ್ಷಣೆ ಇರಲಿದ್ದು, ಗೃಹಪಯೋಗಿ ಯಂತ್ರಗಳು, ಬೆಳೆ ಆಧರಿತ ಕೃಷಿ ಯಂತ್ರೋಪಕರಣಗಳು, ಯಂತ್ರೋಪಕರಣಗಳ ವಿಶೇಷ ಪ್ರಾತ್ಯಕ್ಷಿಕೆ, ವಿಶೇಷ ಕಾರ್ಯಾಗಾರಗಳು, ನೂತನ ಆಹಾರ ಉತ್ಷನ್ನಗಳ ಪ್ರದರ್ಶನ, ಮಾರಾಟ, ರೈತ-ಕೃಷಿ ಕೇಂದ್ರಿತ ಸಂವಾದ-ಚರ್ಚೆಗಳು, ರೈತ-ಕೃಷಿ ಯಶೋಗಾಥೆಯ ವೀಡಿಯೊ ಪ್ರದರ್ಶನ, ಶಾಲಾ-ಕಾಲೇಜು ಮಕ್ಕಳಿಗೆ ಮತ್ತು ಸಾರ್ವಜನಿಕರಿಗಾಗಿ ಕೃಷಿ ಸಂಬಂಧಿತ ಸ್ಪರ್ಧೆಗಳು ನಡೆಯಲಿವೆ.

ಕೃಷಿ ಸಂಗಮಕ್ಕೆ ವಿವಿಧ ಸರಕಾರಿ ಹಾಗೂ ಖಾಸಗಿ ಸಂಘ ಸಂಸ್ಥೆಗಳು ಸಹಯೋಗವನ್ನು ನೀಡಿವೆ. ದಕ್ಷಿಣ ಕನ್ನಡ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ದ.ಕ. ಜಿಲ್ಲಾ ಕೃಷಿ ಇಲಾಖೆ, ದ.ಕ. ಜಿಲ್ಲಾ ತೋಟಗಾರಿಕಾ ಇಲಾಖೆ, ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಗಳು, ಜ್ಞಾನ ಸಹಯೋಗವನ್ನು ನೀಡಲಿವೆ.

ಕಾರ್ಯಕ್ರಮ ಆಯೋಜನೆಗೆ ಕೃಷಿ ವಿಚಾರ ವಿನಿಮಯ ಕೇಂದ್ರ, ಮೂಡುಬಿದಿರೆ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಪುತ್ತೂರಿನ ಸಮೃದ್ಧಿ ಗಿಡಗೆಳೆತನ ಸಂಘ ಹಾಗೂ ಜೆಸಿಐ ಮಂಗಳೂರು ಸಹಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X