Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಳಸಾ ಬಂಡೂರಿ ಬಗ್ಗೆ ತುಟಿಬಿಚ್ಚದ...

ಕಳಸಾ ಬಂಡೂರಿ ಬಗ್ಗೆ ತುಟಿಬಿಚ್ಚದ ಪ್ರಧಾನಿ ಮೋದಿ ವಿರುದ್ಧ ಅಹೋರಾತ್ರಿ ಧರಣಿ : ಪ್ರೊ.ಚಂಪಾ

"ಕಂಡದ್ದಕ್ಕೆಲ್ಲ ಬಂದ್ ಕರೆ ಸರಿಯಲ್ಲ"

ವಾರ್ತಾಭಾರತಿವಾರ್ತಾಭಾರತಿ31 Jan 2018 6:46 PM IST
share
ಕಳಸಾ ಬಂಡೂರಿ ಬಗ್ಗೆ ತುಟಿಬಿಚ್ಚದ ಪ್ರಧಾನಿ ಮೋದಿ ವಿರುದ್ಧ ಅಹೋರಾತ್ರಿ ಧರಣಿ : ಪ್ರೊ.ಚಂಪಾ

ಬೆಂಗಳೂರು, ಜ. 31: ಮಹಾದಾಯಿ ವಿವಾದ ಬಗೆಹರಿಸುವ ಸಂಬಂಧ ತುಟಿಬಿಚ್ಚದ ಪ್ರಧಾನಿ ನರೇಂದ್ರ ಮೋದಿಯವರ ಕ್ರಮವನ್ನು ಖಂಡಿಸಿ ಜ.1ರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಜನಸಾಮಾನ್ಯರ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ, ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾದಾಯಿ ವಿವಾದ ಇತ್ಯರ್ಥಕ್ಕೆ ಮಧ್ಯಪ್ರವೇಶಿಸಬೇಕೆಂದು ಫೆ.4ಕ್ಕೆ ಕನ್ನಡ ಪರ ಸಂಘಟನೆಗಳು ಕರೆ ನೀಡುವ ‘ಬೆಂಗಳೂರು ಬಂದ್’ಗೆ ನಮ್ಮ ಬೆಂಬಲವಿಲ್ಲ. ಮೌನವಾಗಿದ್ದೇ ಪ್ರತಿಭಟನೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.

ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಆದರೆ, ಅದನ್ನು ಬಿಟ್ಟು ಕಂಡದ್ದಕ್ಕೆಲ್ಲಾ ಬಂದ್ ಕರೆ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಚಂಪಾ, ಇಲ್ಲಿನ ಸ್ವಾತಂತ್ರ ಉದ್ಯಾನವನದಲ್ಲಿ ನಡೆಯಲಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ತಾನೂ ಪಾಲ್ಗೊಳ್ಳುವೆ ಎಂದು ಹೇಳಿದರು.

ಒಂದೇ ಅಲ್ಲ: ಕಳಸಾ ಬಂಡೂರಿ ನಾಲೆ ಹಾಗೂ ಮಹಾದಾಯಿ ಯೋಜನೆ ಎರಡೂ ಒಂದೇ ಎಂದು ಗೊಂದಲ ಹುಟ್ಟಿಸುವ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿರುವ ರಾಜಕೀಯ ಪಕ್ಷಗಳು ಹಾಗೂ ಇದುವರೆಗೂ ಈ ವಿಷಯದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ವಿರುದ್ದ ಫೆ.1ರಿಂದ ಅಹೋರಾತ್ರಿ ಧರಣಿ ನಡೆಸಲು ಜನಸಾಮಾನ್ಯರ ಪಕ್ಷ ಸಜ್ಜಾಗಿದೆ ಎಂದು ಪಕ್ಷದ ಅಧ್ಯಕ್ಷ ಡಾ.ಡಿ.ಅಯ್ಯಪ್ಪ ಹೇಳಿದರು.

ಕಳಸಾ ಬಂಡೂರಿ ನಾಲಾ ಯೋಜನೆ ಹಾಗೂ ಮಹಾದಾಯಿ ತಿರುವು ಯೋಜನೆ ಎರಡು ಭಿನ್ನ. ಒಂದೇ ಪ್ರದೇಶದಲ್ಲಿವೆ ಎನ್ನುವುದನ್ನು ಬಿಟ್ಟರೆ ಇಲ್ಲಿಯ ಯೋಜನೆಗೆ ಬಹಳಷ್ಟು ವ್ಯತ್ಯಾಸವಿದೆ. ಮಹಾದಾಯಿ ಯೋಜನೆ ನದಿಗೆ ಸಂಬಂಧಿಸಿದ್ದು ಹಾಗೂ ಕರ್ನಾಟಕ, ಗೋವಾ, ಮಹಾರಾಷ್ಟ್ರ ಮಧ್ಯೆ ನೀರು ಹಂಚಿಕೆಯ ಬಗ್ಗೆ ಇನ್ನುವರೆಗೂ ಯಾವುದೇ ತೀರ್ಮಾನ ಆಗಿಲ್ಲ. ಈ ಹಿನ್ನೆಲೆಯಲ್ಲಿ ಈ ವಿವಾದ ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ತಾರ್ಕಿಕ ಅಂತ್ಯ ಕಾಣಲು ಸಾಧ್ಯವಿಲ್ಲ.

ಆದರೆ, ಕಳಸಾ ಬಂಡೂರಿ ನಾಲೆಗಳು ನಮ್ಮ ರಾಜ್ಯದಲ್ಲಿವೆ. ಅಲ್ಲದೆ ಇವುಗಳನ್ನು ಉಪಯೋಗಿಸಿಕೊಳ್ಳುವ ಎಲ್ಲ ರೀತಿಯ ಹಕ್ಕುಗಳು ನಮ್ಮ ರಾಜ್ಯಕ್ಕಿದ್ದು ಯಾವುದೇ ಅನುಮತಿ ಪಡೆಯುವುದು ಅವಶ್ಯಕತೆ ಇರಲಿಲ್ಲ. ಆದರೆ, ಹಿಂದಿನಿ ಸರಕಾರಗಳು ನಾಲೆಗಳ ಕಾಮಗಾರಿಯನ್ನೂ ನ್ಯಾಯಾಧೀಕರಣದ ಪರಿಧಿಯಲ್ಲಿ ಸೇರಿಸುವ ಮೂಲಕ ರಾಜ್ಯದ ಮೂಲಭೂತ ಹಕ್ಕಿಗೆ ಧಕ್ಕೆಯನ್ನುಂಟು ಮಾಡಿವೆ ಎಂದು ದೂರಿದರು.

ಕಳಸಾ ಬಂಡೂರಿ ನಾಲೆಗಳ ಕಾಮಗಾರಿಯನ್ನು ಪ್ರಾರಂಭಿಸಲು ರಾಜ್ಯಕ್ಕೆ ಬೇಕಾಗಿರುವುದು ಕೇವಲ ಪ್ರಧಾನಿ ಅಥವಾ ಕೇಂದ್ರ ಸರಕಾರದ ನಿರಪೇಕ್ಷಣ ಪತ್ರ ಮಾತ್ರ. ಈ ಹಿನ್ನೆಲೆಯಲ್ಲಿ 2018ರ ಜ.22ಕ್ಕೆ ಪ್ರಧಾನಿ ಕಚೇರಿಗೆ ನಿರಪೇಕ್ಷಣಾ ಪತ್ರವನ್ನು ನೀಡುವಂತೆ ಮನವಿಯನ್ನು ಪಕ್ಷ ನೀಡಿದೆ. ಅಲ್ಲದೆ, ಪ್ರಧಾನಿಗಳಿಗೆ ಎಲ್ಲ ರೀತಿಯಲ್ಲೂ ತಲುಪುವ ಪ್ರಯತ್ನ ಮಾಡಲಾಗಿದೆ. ಆದರೆ, ಸಣ್ಣ-ಸಣ್ಣ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಧಾನಿ ಒಂದು ರಾಜ್ಯದ ಜ್ವಲಂತ ಸಮಸ್ಯೆಗೆ ಪರಿಹಾರದ ಬಗ್ಗೆ ತುಟಿ ಬಿಚ್ಚದೇ ಇರುವ ಮೂಲಕ ತಾರತಮ್ಯ ವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಳಸಾ ಬಂಡೂರಿಯ ವಿಷಯವಾಗಿ ಪ್ರಧಾನಿ ಮಧ್ಯಪ್ರವೇಶಿಸಿ ನ್ಯಾಯಾಧಿಕರಣದ ಪರಿಧಿಯಿಂದ ಹೊರಗೆ ಇತ್ಯರ್ಥಕ್ಕೆ ಮುಂದಾಗಬೇಕಾಗಿದೆ. ಅಲ್ಲದೆ, ಈ ಪ್ರತಿಭಟನೆ ನಿರಪೇಕ್ಷಣಾ ಪತ್ರ ದೊರೆಯುವವರೆಗೂ ಮುಂದುವರೆಯಲಿದೆ. ಪ್ರಧಾನಿ ಮೋದಿಯವರೇ ‘ರಾಜಕೀಯ ಬಿಡಿ, ನೀರು ಕೊಡಿ’ ಇಲ್ಲದಿದ್ದಲ್ಲಿ ರಾಜ್ಯಕ್ಕೆ ಬರುವುದು ಅವಶ್ಯಕತೆ ಇಲ್ಲ ಎಂದು ಅಯ್ಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X