ಫೆ.2ರಂದು ಎಲ್ಲೂರಿನಲ್ಲಿ ಸ್ವಲಾತ್ ಮಜ್ಲಿಸ್
ಮಂಗಳೂರು, ಜ. 31: ಉಚ್ಚಿಲ ಸಮೀಪದ ಎಲ್ಲೂರಿನ ದಾರುಲ್ ಅಮಾನ್ ಎಜುಕೇಶನಲ್ ಅಕಾಡಮಿ ವತಿಯಿಂದ ಫೆ. 2ರಂದು ಮಧ್ಯಾಹ್ನ 3 ಗಂಟೆಗೆ ಎಲ್ಲೂರಿನಲ್ಲಿ ಸ್ವಲಾತ್ ಮಜ್ಲಿಸ್ ಹಾಗೂ ಧಾರ್ಮಿಕ ಶಿಬಿರ ಕಾರ್ಯಕ್ರಮ ನಡೆಯಲಿವೆ.
ಕಾರ್ಯಕ್ರಮದ ನೇತೃತ್ವವನ್ನು ಅಕಾಡಮಿಯ ಮುಖ್ಯಸ್ಥ ಅಲ್ಹಾಜ್ ಸಲೀಂ ಮದನಿ ಕುತ್ತಾರು ವಹಿಸಲಿದ್ದಾರೆ. ಅಲ್ಹಾಜ್ ಅಬ್ದುರ್ರಹ್ಮಾನ್ ಮದನಿ ಮೂಳೂರು ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಅಕಾಡಮಿಯ ಪ್ರಕಟನೆ ತಿಳಿಸಿದೆ.
Next Story





