Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರನ್ನು ದುರ್ಬಲಗೊಳಿಸುವ ಬಿಜೆಪಿ,...

ಮಹಿಳೆಯರನ್ನು ದುರ್ಬಲಗೊಳಿಸುವ ಬಿಜೆಪಿ, ಆರೆಸ್ಸೆಸ್ ಸಿದ್ಧಾಂತ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ31 Jan 2018 8:47 PM IST
share
ಮಹಿಳೆಯರನ್ನು ದುರ್ಬಲಗೊಳಿಸುವ ಬಿಜೆಪಿ, ಆರೆಸ್ಸೆಸ್ ಸಿದ್ಧಾಂತ: ರಾಹುಲ್ ಗಾಂಧಿ

ಶಿಲೋಂಗ್, ಜ.31: ಚುನಾವಣೆಗೆ ಸಿದ್ಧವಾಗುತ್ತಿರುವ ಮೇಘಾಲಯದಲ್ಲಿ ಬುಧವಾರದಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರೆಸ್ಸೆಸ್ ದೇಶಾದ್ಯಂತ ತನ್ನ ಸಿದ್ಧಾಂತವನ್ನು ಹೇರುತ್ತಿದೆ ಎಂದು ಆರೋಪಿಸಿದರು.

ಮೇಘಾಲಯದ ರಾಜಧಾನಿ ಶಿಲೋಂಗ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾವು ದೇಶಾದ್ಯಂತ ಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಒಂದೇ ರೀತಿಯ ಚಿಂತನೆಯನ್ನು ದೇಶದ ಮೇಲೆ ಹೇರಲಾಗುತ್ತಿದೆ. ಬಿಜೆಪಿ ಮತ್ತು ಆರೆಸ್ಸೆಸ್ ದೇಶಾದ್ಯಂತ, ಮುಖ್ಯವಾಗಿ ಈಶಾನ್ಯ ರಾಜ್ಯಗಳಲ್ಲಿ ನಿಮ್ಮ ಸಂಸ್ಕೃತಿ, ಭಾಷೆ ಮತ್ತು ಜೀವನಶೈಲಿಯನ್ನು ಕಸಿಯುವ ಪ್ರಯತ್ನವನ್ನು ಮಾಡುತ್ತಿದೆ ಎಂದರು.

ಕ್ರೈಸ್ತರೇ ಹೆಚ್ಚಾಗಿರುವ ರಾಜ್ಯದಲ್ಲಿ ರಾಹುಲ್ ಗಾಂಧಿ, ತಮ್ಮ ಪಕ್ಷವು ನಿಮ್ಮ ಸಂಸ್ಕೃತಿ ಮತ್ತು ಯೋಚನಾಶೈಲಿಯ ರಕ್ಷಣೆ ಮಾಡಲಿದೆ ಎಂದು ಭರವಸೆ ನೀಡಿದರು.

ಈ ವೇಳೆ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, “ಆರೆಸ್ಸೆಸ್ ಸಿದ್ಧಾಂತವೇ ಮಹಿಳೆಯರನ್ನು ದುರ್ಬಲಗೊಳಿಸುವುದಾಗಿದೆ. ಆರೆಸ್ಸೆಸ್ ನಲ್ಲಿ ಎಷ್ಟು ಮಹಿಳೆಯರು ಪ್ರಮುಖ ಸ್ಥಾನಗಳಲ್ಲಿದ್ದಾರೆ ಎಂದು ಯಾರಾದರೂ ಹೇಳಬಲ್ಲರೇ? ಬರೀ ಸೊನ್ನೆ. ನೀವು ಮಹಾತ್ಮ ಗಾಂಧಿಯ ಚಿತ್ರವನ್ನು ನೋಡಿದರೆ ಅವರ ಎರಡೂ ಕಡೆಗಳಲ್ಲಿ ಮಹಿಳೆಯರೇ ಇರುವುದನ್ನು ಕಾಣಬಹುದು. ಆದರೆ ನೀವು ಮೋಹನ್ ಭಾಗವತ್ ಅವರ ಚಿತ್ರವನ್ನು ನೋಡಿದಾಗ ಒಂದೋ ಅವರು ಏಕಾಂಗಿಯಾಗಿರುತ್ತಾರೆ ಅಥವಾ ಪುರುಷರಿಂದ ಸುತ್ತುವರಿದಿರುತ್ತಾರೆ” ಎಂದು ಕುಹಕವಾಡಿದರು.

ಕಾಂಗ್ರೆಸ್ ಮಾಡಲಿರುವ ಅತ್ಯಂತ ಪ್ರಮುಖ ಕೆಲಸವೆಂದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಪುರುಷರ ಮತ್ತು ಮಹಿಳೆಯರ ಸಂಖ್ಯೆಯನ್ನು ಸಮಾನಗೊಳಿಸುವುದು ಎಂದು ರಾಹುಲ್ ಗಾಂಧಿ ತಿಳಿಸಿದರು. ಮೇಘಾಲಯದಲ್ಲಿ ಹೆಚ್ಚುಹೆಚ್ಚು ಮಹಿಳೆಯರು ಕಾಂಗ್ರೆಸ್ ಪಕ್ಷ ಸೇರಬೇಕು. ಆಮೂಲಕ ಹೆಚ್ಚು ಮಹಿಳೆಯರನ್ನು ಆಯ್ಕೆ ಮಾಡಲು ನಮಗೆ ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಎಸ್‌ಟಿಯನ್ನು ಇನ್ನಷ್ಟು ಸರಳೀಕರಣಗೊಳಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷರು ತಿಳಿಸಿದರು.

ಮಹಾತ್ಮಾ ಗಾಂಧಿ ಬಗ್ಗೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗಾಗಿ ಅವರನ್ನು ತೀವ್ರ ತರಾಟೆಗೆ ತೆಗದುಕೊಂಡ ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷರು ಮಹಾತ್ಮಾ ಗಾಂಧಿಯನ್ನು ಅವಮಾನ ಮಾಡಿದ್ದಾರೆ. ಕೇವಲ ಹಿರಿಯ ನಾಯಕರಿಗೆ ದೈಹಿಕವಾಗಿ ಸಾಮಿಪ್ಯ ಹೊಂದಿರುವುದಕ್ಕಷ್ಟೇ ಮಹಿಳೆಯರನ್ನು ಸೀಮಿತಗೊಳಿಸುವ ಮೂಲಕ ರಾಹುಲ್ ಗಾಂಧಿ ಮಹಿಳೆಯರ ಔದಾರ್ಯವನ್ನು ಕೆಣಕಿದ್ದಾರೆ. ಮೇಘಾಲಯದ ಮಾತೃಪ್ರಧಾನ ಸಮಾಜವನ್ನು ಅವರು ಅವಮಾನ ಮಾಡಿದ್ದಾರೆ ಎಂದು ದೂರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X