Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 6ನೆ ವೇತನ ಆಯೋಗದ ವರದಿಯಿಂದ ಅನುಕೂಲವಿಲ್ಲ...

6ನೆ ವೇತನ ಆಯೋಗದ ವರದಿಯಿಂದ ಅನುಕೂಲವಿಲ್ಲ : ರಾಜ್ಯ ಸರಕಾರಿ ನೌಕರರ ಒಕ್ಕೂಟ ಖಂಡನೆ

ವಾರ್ತಾಭಾರತಿವಾರ್ತಾಭಾರತಿ31 Jan 2018 9:10 PM IST
share

ಬೆಂಗಳೂರು, ಜ.31: ರಾಜ್ಯ ಸರಕಾರ 6ನೆ ವೇತನ ಆಯೋಗದಿಂದ ರಾಜ್ಯ ಸರಕಾರಿ ನೌಕರರಿಗೆ ಯಾವುದೆ ರೀತಿಯ ಅನುಕೂಲವಿಲ್ಲ. ಹೀಗಾಗಿ 6ನೆ ವೇತನ ಆಯೋಗದ ವರದಿಯನ್ನು ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟ ಖಂಡಿಸುತ್ತದೆ ಎಂದು ಅಧ್ಯಕ್ಷ ಮಹದೇವಯ್ಯ ಮಠಪತಿ ತಿಳಿಸಿದರು.

ರಾಜ್ಯ ಸರಕಾರ 6ನೆ ವೇತನ ಆಯೋಗವನ್ನು ರಚಿಸಿದಾಗ ಸರಕಾರಿ ನೌಕರರು ಅಪಾರ ನಿರೀಕ್ಷೆ ಹೊಂದಿದ್ದರು. ಆದರೆ, ಪ್ರಸ್ತುತ ಸಲ್ಲಿಕೆಯಾಗಿರುವ ರಾಜ್ಯ 6ನೆ ವೇತನ ಆಯೋಗದ ವರದಿಯು ಅವಾಸ್ತವಿಕತೆಯಿಂದ ಕೂಡಿದ್ದು, ರಾಜ್ಯ ಸರಕಾರಿ ನೌಕರರ ಸಂಕಷ್ಟಗಳನ್ನು ಈಡೇರಿಸಲು ಸಂಪೂರ್ಣ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಿ ನೌಕರರ ನಡುವಿನ ವೇತನದ ವ್ಯತ್ಯಾಸವು ಶೇ.67ರಷ್ಟಿದ್ದು, ಪ್ರಸ್ತುತ ಆಯೋಗವು ಮಾಡಿರುವ ಕನಿಷ್ಠ ಶಿಫಾರಸಿನಿಂದ ಈ ವೇತನ ವ್ಯತ್ಯಾಸ ಮತ್ತಷ್ಟು ದೊಡ್ಡದಾಗುತ್ತಾ ಹೋಗುತ್ತದೆ. ಅಲ್ಲದೆ, ಮನೆ ಬಾಡಿಗೆ ಭತ್ತೆಯನ್ನು ಶೇ.6ರಷ್ಟು ಕಡಿತಗೊಳಿಸಿರುವುದರಿಂದ ವಾಸ್ತವ ಏರಿಕೆಯು ಶೇ.30ರಷ್ಟು ಬದಲಿಗೆ ಕೇವಲ ಶೇ.24 ಮಾತ್ರ ಆಗಿದೆ. ಇದು ರಾಜ್ಯ ಸರಕಾರಿ ನೌಕರರಿಗೆ ಮಾಡಿದ ಅನ್ಯಾಯವೆಂದು ಅವರು ಖಂಡಿಸಿದರು.

ಕೇಂದ್ರ ಸರಕಾರಿ ನೌಕರರ ಕನಿಷ್ಠ ವೇತನ 18ಸಾವಿರ ರೂ. ಇದ್ದು, ಗರಿಷ್ಠ ವೇತನ 2.50ಸಾವಿರ ಆಗಿದೆ. ಇದರೊಂದಿಗೆ ಕನಿಷ್ಠ ಶೇ.10ರಷ್ಟು ತುಟ್ಟಿಭತ್ತೆಯನ್ನು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ಒಕ್ಕೂಟವು ಕನಿಷ್ಠ ವೇತನವನ್ನು 21ಸಾವಿರ ರೂ.ಗೆ ನಿಗದಿಗೊಳಿಸಬೇಕೆಂದು ಆಗ್ರಹಿಸಿತ್ತು. ಆದರೆ, ಪ್ರಸ್ತುತ ವರದಿಯು ನೀಡಿರುವ ಪ್ರಕಾರ, ರಾಜ್ಯ ನೌಕರರ ಕನಿಷ್ಠ ವೇತನ 17ಸಾವಿರ ರೂ. ಮತ್ತು ಗರಿಷ್ಠ ವೇತನ 1.5 ಲಕ್ಷ ಆಗಿದೆ ಎಂದು ಅವರು ತಿಳಿಸಿದರು.

6ನೆ ವೇತನ ಆಯೋಗದಿಂದ ರಾಜ್ಯ ಸರಕಾರಿ ನೌಕರರಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ, ಕೇಂದ್ರ ಸರಕಾರಿ ನೌಕರರಿಗೆ ನೀಡುವ ಸರಿಸಮಾನವಾದ ವೇತನವನ್ನು ರಾಜ್ಯ ನೌಕರರಿಗೂ ನೀಡಬೇಕೆಂದು ಆಗ್ರಹಿಸಲು ‘ಜಂಟಿ ಕ್ರಿಯಾ ಸಮಿತಿ’ ರಚಿಸಲಾಗಿದೆ. ಪ್ರಸ್ತುತ 6ನೆ ವೇತನ ಆಯೋಗ ನೀಡಿರುವ ಅವೈಜ್ಞಾನಿಕವಾದ ವರದಿಯನ್ನು ವಿರೋಧಿಸಿ ಶೀಘ್ರವೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X