Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾಸ್ಗಂಜ್ ಹಿಂಸಾಚಾರದ ಕುರಿತು ಫರ್ಹಾನ್...

ಕಾಸ್ಗಂಜ್ ಹಿಂಸಾಚಾರದ ಕುರಿತು ಫರ್ಹಾನ್ ಅಖ್ತರ್ ಹೆಸರಲ್ಲಿ ಹರಡಿತು ಆಘಾತಕಾರಿ ಸುಳ್ಳು

ಈ ಸುಳ್ಳುಕೋರನಿಗೆ ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ಫಾಲೋವರ್!

ವಾರ್ತಾಭಾರತಿವಾರ್ತಾಭಾರತಿ31 Jan 2018 9:14 PM IST
share
ಕಾಸ್ಗಂಜ್ ಹಿಂಸಾಚಾರದ ಕುರಿತು ಫರ್ಹಾನ್ ಅಖ್ತರ್ ಹೆಸರಲ್ಲಿ ಹರಡಿತು ಆಘಾತಕಾರಿ ಸುಳ್ಳು

ಕಾಸ್ಗಂಜ್ ಹಿಂಸಾಚಾರವು ದೇಶಾದ್ಯಂತ ಸುದ್ದಿಯಾದ ನಡುವೆಯೇ ಈ ಘಟನೆಯ ಬಗ್ಗೆ ಬಾಲಿವುಡ್ ನಟ, ನಿರ್ಮಾಪಕ ಫರ್ಹಾನ್ ಅಖ್ತರ್ ಹೆಸರಿನಲ್ಲಿ ಸುಳ್ಳೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿತ್ತು.

“ಜನವರಿ 26ರಂದು ಜುಮ್ಮಾ (ಶುಕ್ರವಾರ) ಆಗಿತ್ತು. ಒಂದು ವೇಳೆ ಹಿಂದೂಗಳು ಮುಸ್ಲಿಮ್ ಬಾಹುಳ್ಯದ ಪ್ರದೇಶಗಳಿಗೆ ತ್ರಿವಣ ಧ್ವಜಗಳೊಂದಿಗೆ ತೆರಳದೆ ಇರುತ್ತಿದ್ದರೆ, ವಂದೇ ಮಾತರಂನಂತಹ ಪ್ರಚೋದನಾತ್ಮಕ ಘೋಷಣೆಗಳನ್ನು ಕೂಗದಿದ್ದರೆ ಕೊಲೆಯಾಗುತ್ತಿರಲಿಲ್ಲ” ಎಂದು ಫರ್ಹಾನ್ ಅಖ್ತರ್ ಹೇಳಿದ್ದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್, ವಾಟ್ಸ್ ಆ್ಯಪ್ ನಲ್ಲಿ ಫೋಟೊಗಳು ಹರಿದಾಡತೊಡಗಿತ್ತು.

ಫರ್ಹಾನ್ ಹೆಸರಿನಲ್ಲಿ ಹರಿದಾಡಿದ ಹೇಳಿಕೆ ಹಿಂದಿನ ಸತ್ಯಾಸತ್ಯತೆಯ ಬಗ್ಗೆ altnews.in ವರದಿ ಮಾಡಿದೆ.

ಇದರ ಫೋಟೊವನ್ನು ಟ್ವಿಟರ್ ನಲ್ಲಿ ಹಾಕಿದ್ದು ಗೌರವ್ ಪ್ರಧಾನ್ ಎಂಬ ಸುಳ್ಳುಕೋರ.  ಈ ಹಿಂದೆಯೂ ಯಾವುದೇ ನಾಚಿಕೆಯಿಲ್ಲದೆ ಸುಳ್ಳು ಸುದ್ದಿಗಳನ್ನು ಹರಡಿದ ಸಾಧನೆ ಈತನದ್ದು. ವಿಶೇಷ ಹಾಗು ದುರಂತವೆಂದರೆ ಪ್ರಧಾನಿ ಮೋದಿಯವರು ಈತನನ್ನು ಟ್ವಿಟರ್ ನಲ್ಲಿ ಫಾಲೋ ಮಾಡುತ್ತಿದ್ದಾರೆ.  ಪೋಸ್ಟ್ ಕಾರ್ಡ್ ನ ಪೋಸ್ಟ್ ಜೊತೆ ಈತ ಈ ಫೋಟೊವನ್ನು ಟ್ವೀಟ್ ಮಾಡಿದ್ದ. ಹೇಳಿಕೇಳಿ ಪೋಸ್ಟ್ ಕಾರ್ಡ್ ನ್ಯೂಸ್ ಸುಳ್ಳು ಸುದ್ದಿ, ಕೋಮುದ್ವೇಷ ಹರಡುವ ಮೂಲಕವೇ ಕುಖ್ಯಾತಿ ಗಳಿಸಿದೆ.

ಟ್ವಿಟರ್ ಮತ್ತು ಫೇಸ್ ಬುಕ್ ನಲ್ಲಿ ಫರ್ಹಾನ್ ಅಖ್ತರ್ ಹೆಸರಲ್ಲಿ ಈ ಹೇಳಿಕೆ ವೈರಲ್ ಆಗತೊಡಗಿತ್ತು. ಹಲವು ಗ್ರೂಪ್ ಗಳು ಹಾಗ ಪೇಜ್ ಗಳು ಈ ಫೋಟೊವನ್ನು ಶೇರ್ ಮಾಡಿದ್ದಲ್ಲದೆ, ಫರ್ಹಾನ್ ಅಖ್ತರ್ ರನ್ನು ‘ಜಿಹಾದಿ’ ಎಂದು ಜರೆದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸ್ವತಃ ಫರ್ಹಾನ್ ಅಖ್ತರ್ ಸ್ಪಷ್ಟನೆಯೊಂದನ್ನು ನೀಡಿದರು. "ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹೇಳಿಕೆಯನ್ನು ನಾನು ನೀಡಿಲ್ಲ. ಇದು ಸಂಪೂರ್ಣ ಸುಳ್ಳು. ಸಾಮಾಜಿಕ ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ನಂಬುವುದರ ಬಗ್ಗೆ ನನ್ನ ಫಾಲೋವರ್ ಗಳು ಹಾಗು ಇತರರು ಎಚ್ಚರ ವಹಿಸಿ. ದ್ವೇಷವನ್ನು ಹರಡಲು ದುಷ್ಟಶಕ್ತಿಗಳು ಕೆಲಸ ಮಾಡುತ್ತಿವೆ. ಈ ಬಗ್ಗೆ ಎಚ್ಚರ ವಹಿಸಿ" ಎಂದು ಫರ್ಹಾನ್ ಟ್ವೀಟ್ ಮಾಡಿದರು.

ತನ್ನ ಬಣ್ಣ ಬಯಲಾಗುತ್ತಲೇ ಗೌರವ್ ಪ್ರಧಾನ್ ಟ್ವೀಟನ್ನು ಅಳಿಸಿ ಹಾಕಿದೆ. ಆದರೆ ಕ್ಷಮೆ ಕೇಳುವ ಬದಲು ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X