Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭೂ ನ್ಯಾಯಮಂಡಳಿ ಮಾಜಿ ಸದಸ್ಯನ ವಿರುದ್ಧ...

ಭೂ ನ್ಯಾಯಮಂಡಳಿ ಮಾಜಿ ಸದಸ್ಯನ ವಿರುದ್ಧ ದೂರು ದಾಖಲಿಸಲು ಹೈಕೋರ್ಟ್ ಆದೇಶ

ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ1 Feb 2018 9:00 PM IST
share
ಭೂ ನ್ಯಾಯಮಂಡಳಿ ಮಾಜಿ ಸದಸ್ಯನ ವಿರುದ್ಧ ದೂರು ದಾಖಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು, ಫೆ.1: ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಸಿದ ಕಾರಣಕ್ಕೆ ಕರ್ನಾಟಕ ಭೂ ನ್ಯಾಯಮಂಡಳಿ ಮಾಜಿ ಸದಸ್ಯ ಎಂ.ನಾರಾಯಣ ಸ್ವಾಮಿ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ನಡೆಸುವಂತೆ ರಿಜಿಸ್ಟ್ರಾರ್‌ಗೆ ಮತ್ತು ದೂರು ದಾಖಲಿಸಲು ಪೊಲೀಸರಿಗೆ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಈ ಮಧ್ಯೆ ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಕೋರ್ಟ್ ಹಾಲಿನಲ್ಲಿಯೇ ನಾರಾಯಣ ಸ್ವಾಮಿಯನ್ನು ವಶಕ್ಕೆ ಪಡೆದ ಪೊಲೀಸರು, ಒಂದೆರಡು ಗಂಟೆ ನಂತರ ಬಿಡುಗಡೆಗೊಳಿಸಿದರು.

ಜಮೀನುವೊಂದರ ವಿವಾದ ಸಂಬಂಧ ಹೊಸಕೋಟೆಯ ಇಂಜಿನಹಳ್ಳಿ ನಿವಾಸಿ ವಿ.ರಾಜಣ್ಣ ಹಾಗೂ ಇತರರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಎನ್.ಸತ್ಯನಾರಾಯಣ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿತು.

ಪ್ರಕರಣವೇನು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಅಪ್ಪಸಂದ್ರ ಗ್ರಾಮದ ಸರ್ವೇ ನಂ 29ರ ಐದು ಎಕರೆ ಜಮೀನು ಮಾಲಕತ್ವದ ಬಗ್ಗೆ ಅರ್ಜಿದಾರ ವಿ.ರಾಜಣ್ಣ ಮತ್ತು ಕರ್ನಾಟಕ ಭೂ ನ್ಯಾಯಮಂಡಳಿಯ ಮಾಜಿ ಸದಸ್ಯ ಎಂ.ನಾರಾಯಣಸ್ವಾಮಿ ನಡುವೆ ವಿವಾದವಿದೆ. ಈ ಸಂಬಂಧ ವಿ.ರಾಜಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನಾರಾಯಣ ಸ್ವಾಮಿ ಪ್ರತಿವಾದಿಯಾಗಿದ್ದಾರೆ.

ಅರ್ಜಿಗೆ ನಾರಾಯಣ ಸ್ವಾಮಿ ಆಕ್ಷೇಪಣೆ ಸಲ್ಲಿಸಿದ್ದರು. ಹಾಗೆಯೇ, ಆಕ್ಷೇಪಣೆಯಲ್ಲಿನ ಎಲ್ಲ ಅಂಶಗಳು ಸತ್ಯದಿಂದ ಕೂಡಿವೆ ಎಂದು ಪ್ರಮಾಣೀಕರಿಸಿ ಪ್ರಮಾಣಪತ್ರ ಸಲ್ಲಿಸಿದ್ದರು. ಆದರೆ, ತಮ್ಮ ಆಕ್ಷೇಪಣೆ ಪತ್ರದೊಂದಿಗೆ ಸಲ್ಲಿಸಿದ್ದ ದಾಖಲೆ (ಗೇಣಿ)ಯಲ್ಲಿನ ಮಾಹಿತಿಯನ್ನು ನಾರಾಯಣ ಸ್ವಾಮಿ ತಿರುಚಿದ್ದರು. ಈ ಅಂಶ ಪತ್ತೆ ಹಚ್ಚಿದ ನ್ಯಾಯಮೂರ್ತಿಗಳು, ಮೂಲ ದಾಖಲೆ ಪರಿಶೀಲಿಸಿದಾಗ ದಾಖಲೆ ತಿರುಚಿರುವುದು ಬಹಿರಂಗವಾಯಿತು.

ಈ ವೇಳೆ ನಾರಾಯಣ ಸ್ವಾಮಿ ವಿವರಣೆ ನೀಡಿದರೂ ಅದಕ್ಕೆ ತೃಪ್ತರಾಗದ ನ್ಯಾಯಮೂರ್ತಿಗಳು, ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಸಿರುವ ನಾರಾಯಣ ಸ್ವಾಮಿ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ನಡೆಸುವಂತೆ ರಿಜಿಸ್ಟ್ರಾರ್‌ಗೆ ನಿರ್ದೇಶಿಸಿದರು. ಹಾಗೆಯೇ, ಪ್ರಕರಣ ಸಂಬಂಧ ದೂರು ದಾಖಲಿಸುವಂತೆ ಸಂಬಂಧಪಟ್ಟ ಠಾಣಾ ಪೊಲೀಸರಿಗೆ ಸೂಚಿಸಿದರು.

ನ್ಯಾಯಾಲಯದ ಆದೇಶದ ಮೇರೆಗೆ ಗುರುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಕೋರ್ಟ್ ಹಾಲಿನಲ್ಲಿಯೇ ನಾರಾಯಣಸ್ವಾಮಿಯನ್ನು ಹೈಕೋರ್ಟ್ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಸಂಜೆಯ ವೇಳೆಗೆ ಭದ್ರತಾ ಖಾತರಿ ಪಡೆದು ಬಿಡುಗಡೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X