ಮರತ್ತೂರು: ಅಕ್ರಮ ಮರಳುಗಾರಿಕೆಗೆ ದಾಳಿ
ಕೋಟ, ಫೆ.1: ಮೊಳಹಳ್ಳಿ ಗ್ರಾಮದ ಮರತ್ತೂರು ವಾರಾಹಿ ನದಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಜ.31ರಂದು ಸಂಜೆ ವೇಳೆ ದಾಳಿ ನಡೆಸಿದ ಅಧಿಕಾರಿ ಗಳು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ತಹಶೀಲ್ದಾರ್ ಆದೇಶದಂತೆ ಕುಂದಾಪುರ ಹೋಬಳಿಯ ಕಂದಾಯ ನಿರೀಕ್ಷಕ ನರಸಿಂಹ ಕಾಮತ್ ನೇತೃತ್ವದಲ್ಲಿ ಕಂದಾಯ ಇಲಾಖೆ ಹಾಗಲ್ಲ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಾರಾಹಿ ನದಿ ದಕ್ಕೆಗಳ ಸಮೀಪ ಅಕ್ರಮವಾಗಿ ಸಂಗ್ರಹಿಸಿದ್ದ 25 ಬುಟ್ಟಿ ಮರಳು ಇತರ ಸೊತ್ತುಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ಆರೋಪಿ ಪುಷ್ಪರಾಜ ಶೆಟ್ಟಿ ಹಾಗೂ ಇತರರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





