Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಜೆಟ್-2018: ನಿಮಗೆ ಗೊತ್ತಿರಬೇಕಾದ 4...

ಬಜೆಟ್-2018: ನಿಮಗೆ ಗೊತ್ತಿರಬೇಕಾದ 4 ಆದಾಯ ತೆರಿಗೆ ಬದಲಾವಣೆಗಳು

ವಾರ್ತಾಭಾರತಿವಾರ್ತಾಭಾರತಿ1 Feb 2018 9:59 PM IST
share
ಬಜೆಟ್-2018: ನಿಮಗೆ ಗೊತ್ತಿರಬೇಕಾದ 4 ಆದಾಯ ತೆರಿಗೆ ಬದಲಾವಣೆಗಳು

ಹೊಸದಿಲ್ಲಿ,ಫೆ.1: ವಿತ್ತಸಚಿವ ಅರುಣ್ ಜೇಟ್ಲಿಯವರು ಗುರುವಾರ ಸಂಸತ್ತಿನಲ್ಲಿ ಮಂಡಿಸಿದ ಮುಂಗಡಪತ್ರದಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ ಅಥವಾ ವಿವಿಧ ಸ್ಲಾಬ್‌ಗಳಿಗೆ ಆದಾಯ ತೆರಿಗೆ ದರಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಆದರೆ ನಿಮ್ಮ ಆದಾಯ ತೆರಿಗೆಯ ಮೇಲೆ ಪರಿಣಾಮವನ್ನು ಬೀರುವ ಹಲವಾರು ಬದಲಾವಣೆಗಳನ್ನು ಪ್ರಸ್ತಾಪಿಸಿದ್ದಾರೆ. ಶೇರುಗಳು ಮತ್ತು ಈಕ್ವಿಟಿ ಮ್ಯೂಚ್ಯುವಲ್ ಫಂಡ್‌ಗಳಲ್ಲಿಯ ಹೂಡಿಕೆಗಳ ಮೇಲಿನ ದೀರ್ಘಾವಧಿ ಬಂಡವಾಳ ಗಳಿಕೆಯನ್ನು ತೆರಿಗೆ ವ್ಯಾಪ್ತಿಗೆ ತರುವುದರಿಂದ ಹಿಡಿದು ಆದಾಯ ತೆರಿಗೆಯ ಮೇಲಿನ ಸೆಸ್‌ನಲ್ಲಿ ಪರಿಷ್ಕರಣೆ ಯವರೆಗೆ ಹಲವಾರು ಬದಲಾವಣೆಗಳನ್ನು ಅವರು ಸೂಚಿಸಿದ್ದಾರೆ.

ಅವರು ಪ್ರಸ್ತಾಪಿಸಿರುವ 4 ಬದಲಾವಣೆಗಳು ಇಲ್ಲಿವೆ

►ವೈಯಕ್ತಿಕ ಆದಾಯ ತೆರಿಗೆ ಮತ್ತು ಕಾರ್ಪೊರೇಟ್ ತೆರಿಗೆಯ ಮೇಲಿನ ಸೆಸ್ ಈಗಿನ ಶೇ.3ರಿಂದ ಶೇ.4ಕ್ಕೆ ಏರಿಕೆ. ಇದು ವ್ಯಕ್ತಿಗತ ಆದಾಯ ತೆರಿಗೆಯನ್ನು ಹೆಚ್ಚಿಸಲಿದೆ.

►ವೇತನದಾರ ವರ್ಗಕ್ಕೆ ವಾರ್ಷಿಕ 40,000 ರೂ.ಗಳ ಸ್ಟಾಂಡರ್ಡ್ ಡಿಡಕ್ಷನ್ ಅನ್ನು ಪ್ರಕಟಿಸಲಾಗಿದೆ. ಸುಮಾರು 2.5 ಕೋಟಿ ವೇತನದಾರರು ಮತ್ತು ಪಿಂಚಣಿದಾರರು ಇದರ ಲಾಭ ಪಡೆಯಲಿದ್ದು, ಸರಕಾರಕ್ಕೆ ವಾರ್ಷಿಕ 8,000 ಕೋ.ರೂ.ಆದಾಯ ನಷ್ಟವಾಗಲಿದೆ. ಪ್ರಯಾಣ ಭತ್ಯೆ ಮತ್ತು ಇತರ ವೈದ್ಯಕೀಯ ವೆಚ್ಚ ಮರುಪಾವತಿಯ ಮೇಲೆ ಈಗಿರುವ ತೆರಿಗೆ ವಿನಾಯಿತಿಯ ಬದಲಾಗಿ ಈ ಕೊಡುಗೆಯನ್ನು ನೀಡಲಾಗಿದೆ.

►ಶೇರು ಮಾರುಕಟ್ಟೆ ಮತ್ತು ಮ್ಯೂಚ್ಯುವಲ್ ಫಂಡ್‌ಗಳಲ್ಲಿ ಹೂಡಿಕೆಗಳಿಂದ ಒಂದು ಲಕ್ಷ ರೂ.ಗೂ ಹೆಚ್ಚಿನ ದೀರ್ಘಾವಧಿ ಬಂಡವಾಳ ಗಳಿಕೆಯ ಮೇಲೆ ಹೊಸದಾಗಿ ಶೇ.10 ತೆರಿಗೆಯನ್ನು ವಿಧಿಸಲಾಗಿದೆ. ಸದ್ಯ ಶೇರುಗಳು ಮತ್ತು ಮ್ಯೂಚ್ಯುವಲ್ ಫಂಡ್‌ಗಳಲ್ಲಿ 12 ತಿಂಗಳಿಗೂ ಹೆಚ್ಚಿನ ಅವಧಿಯ ಹೂಡಿಕೆಗಳು ತೆರಿಗೆ ವಿನಾಯಿತಿಯನ್ನು ಪಡೆದಿದ್ದವು. ಆದರೆ 2018,ಜ.31ರವರೆಗಿನ ಹೂಡಿಕೆಗಳಿಗೆ ಈ ತೆರಿಗೆಯು ಅನ್ವಯಿಸುವುದಿಲ್ಲ. ಈಕ್ವಿಟಿ ಮ್ಯೂಚ್ಯುವಲ್ ಫಂಡ್‌ಗಳು ಹೂಡಿಕೆದಾರರಿಗೆ ವಿತರಿಸುವ ಆದಾಯದ ಮೇಲೂ ಶೇ.10 ತೆರಿಗೆಯನ್ನು ಮುಂಗಡಪತ್ರದಲ್ಲಿ ಪ್ರಸ್ತಾವಿಸಲಾಗಿದೆ.

►ಹಿರಿಯ ನಾಗರಿಕರ ತೆರಿಗೆ ಹೊರೆಯನ್ನು ಹಗುರವಾಗಿಸಲು ನೆರವಾಗುವ ಹಲವಾರು ಕ್ರಮಗಳನ್ನು ಸರಕಾರವು ಪ್ರಕಟಿಸಿದೆ. ಬ್ಯಾಂಕ್‌ಗಳು ಮತ್ತು ಅಂಚೆ ಕಚೇರಿಗಳಲ್ಲಿನ ಠೇವಣಿಗಳ ಮೇಲೆ ಅವರು ಪಡೆಯುವ ಬಡ್ಡಿ ಆದಾಯದ ಮೇಲಿನ ವಾರ್ಷಿಕ 10,000 ರೂ.ಗಳ ತೆರಿಗೆ ವಿನಾಯಿತಿಯನ್ನು 50,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಆದಾಯ ತೆರಿಗೆ ಕಾಯ್ದೆಯ 80ಡಿ ಸೆಕ್ಷನ್‌ನಡಿ ಆರೋಗ್ಯ ವಿಮೆ ಪ್ರೀಮಿಯಂ ಮತ್ತು/ಅಥವಾ ವ್ಯೆದ್ಯಕೀಯ ವೆಚ್ಚದ ಮೇಲಿನ ತೆರಿಗೆ ವಿನಾಯಿತಿ ಮಿತಿಯನ್ನು 30,000 ರೂ.ಗಳಿಂದ 50,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಹಿರಿಯ ನಾಗರಿಕರಿಗೆ 194ಎ ಸೆಕ್ಷನ್‌ನಡಿ ಮೂಲದಲ್ಲಿಯೇ ತೆರಿಗೆಯನ್ನು ಕಡಿತ ಮಾಡಬೇಕಾಗಿಲ್ಲ ಮತ್ತು ಎಲ್ಲ ನಿರಖು ಠೇವಣಿಗಳು ಮತ್ತು ಆವರ್ತ ಠೇವಣಿಗಳ ಮೇಲಿನ ಬಡ್ಡಿಗೆ ಈ ಲಾಭ ದೊರೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X