Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಬಜೆಟ್‌ಗೆ ಪ್ರತಿಕ್ರಿಯೆಗಳು

ಉಡುಪಿ: ಬಜೆಟ್‌ಗೆ ಪ್ರತಿಕ್ರಿಯೆಗಳು

ವಾರ್ತಾಭಾರತಿವಾರ್ತಾಭಾರತಿ1 Feb 2018 11:02 PM IST
share

ಉಡುಪಿ, ಫೆ. 1: ವ್ಯಕ್ತಿಗತ ಆದಾಯದ ತೆರಿಗೆ ವಿನಾಯಿತಿ ಮಿತಿಯ ಹೆಚ್ಚಳವಿಲ್ಲ. ಕೃಷಿಯ ಬಗ್ಗೆ ಹೆಚ್ಚಿನ ಒತ್ತು ನೀಡಿಲ್ಲ. ಸಂಸ್ಥೆಗಳ ನಗದು ವ್ಯವಹಾರವನ್ನು 10,000 ಕ್ಕೆ ಸೀಮಿತಗೊಳಿಸಿರುವುದು ಅಭಿವೃದ್ಧಿಗೆ ಮಾರಕ. ಶಿಕ್ಷಣದ ಮೇಲಿನ ಸೆಸ್ ಶೇ. 4ಕ್ಕೆ ಏರಿಕೆ ಉತ್ತೇಜನಕಾರಿಯಲ್ಲ. ಮಧ್ಯಮ ವರ್ಗದ ನಿರೀಕ್ಷೆ ಯನ್ನು ಹುಸಿಗೊಳಿಸಿದ ಕೇಂದ್ರ ಸರಕಾರದ ಈ ಬಜೆಟ್, ಕೇಂದ್ರದಲ್ಲಿ ಇರುವುದು ವ್ಯಾಪಾರಿ ಸರಕಾರ ಎಂಬುದನ್ನು ತೋರಿಸಿಕೊಟ್ಟಿದೆ

-ಭಾಸ್ಕರ್ ರಾವ್ ಕಿದಿಯೂರು, ಕಾಂಗ್ರೆಸ್ ವಕ್ತಾರ ಉಡುಪಿ.

 ಈ ಸಲದ ಕೇಂದ್ರ ಬಜೆಟ್ ರೈತರ ಹಾಗೂ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. 72 ಸಾವಿರ ಕೋಟಿ ಮಹಿಳಾ ಸೇವಾ ಸಂಘಗಳಿಗೆ ಸಾಲ ಸೌಲಭ್ಯ, ಉಜ್ಜಲಾ ಯೋಜನೆಯಡಿ 8 ಕೋಟಿ ಉಚಿತ ಅಡುಗೆ ಅನಿಲ ಸಂಪರ್ಕ ಮತ್ತು ಬಡ ಕುಟುಂಬಗಳಿಗೆ ಸೌಭಾಗ್ಯ ಯೋಜನೆಯಡಿ 4 ಕೋಟಿ ವಿದ್ಯುತ್ ಸಂಪರ್ಕ, 10 ಕೋಟಿ ಬಡ ಕುಟುಂಬಕ್ಕೆ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆ. ಒಟ್ಟಿನಲ್ಲಿ ಗ್ರಾಮೀಣ ಭಾರತಕ್ಕೆ ಕೊಡುಗೆಗಳನ್ನು ನೀಡಿದ ಬಜೆಟ್ ಇದಾಗಿದೆ. ದೇಶದ ಪ್ರಗತಿಗೆ ಹೆಚ್ಚಿನ  ಪ್ರಾಮುಖ್ಯತೆಯನ್ನು ನೀಡಿದ ಬಜೆಟ್ ಇದು.

-ಕೆ.ಉದಯಕುಮಾರ್ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ.

 ಕೇಂದ್ರ ಸಚಿವ ಅರುಣ್ ಜೇಟ್ಲಿ ಇಂದು ಮಂಡಿಸಿದ ಬಜೆಟ್ ರಾಷ್ಟ್ರ ಕಟ್ಟುವ ದೂರಗಾಮಿ ಯೋಜನೆಯುಳ್ಳ ಬಜೆಟ್. ಗ್ರಾಮೀಣ ಪ್ರದೇಶದ ಪರಿಪೂರ್ಣ ಅಭಿವೃದ್ಧಿಗೆ ಬಜೆಟ್ ಒತ್ತು ನೀಡಿದೆ. ಸರ್ವರಿಗೂ ಸೂರು ಎಂಬ ಕಲ್ಪನೆಗೆ ಕಾಳಜಿ ವಹಿಸಿದ್ದು, ರಾಷ್ಟ್ರದಲ್ಲಿ ಬದುಕುವ ಬಡವರಿಗೆ ಕುಟುಂಬಕ್ಕೊಂದು ಮನೆ ಯೋಜನೆ ಅನುಷ್ಠಾನವಾಗಲಿದೆ. ದೇಶದ 10 ಕೋಟಿ ಕುಟುಂಬಗಳಿಗೆ ಅಂದರೆ, 50 ಕೋಟಿ ಬಡಜನರಿಗೆ ಆರೋಗ್ಯ ರಕ್ಷಣೆ ಕೇಂದ್ರ ಸರಕಾರದಿಂದ ಅನುಷ್ಠಾನ. ಅನಾರೋಗ್ಯ ಪೀಡಿತ ಬಡವರಿಗೆ 5 ಲಕ್ಷ ರೂ. ಆರೋಗ್ಯವಿಮೆ. ಬಜೆಟ್‌ನಲ್ಲಿ ಕರ್ನಾಟಕಕ್ಕೂ ಒತ್ತು, 17 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿಗೆ ಉಪನಗರ ರೈಲು ಯೋಜನೆ ನೀಡಲಾಗಿದೆ.

-ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ.

ಕೆಳ ವರ್ಗದ, ಮಧ್ಯಮ ವರ್ಗದ, ರೈತರ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ಯುವ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದ ಬಜೆಟ್. ರೈತರ ಸಾಲ ಮನ್ನಾ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಈ ಸರಕಾರ ಉದ್ಯಮಪತಿಗಳ ಪರವಾಗಿದೆ ಎಂಬುದನ್ನು ಈ ಬಜೆಟ್ ಇನ್ನೊಮ್ಮೆ ಸಾಬೀತುಪಡಿಸುವ ಈ ಬಜೆಟ್ ಮಳೆಗಾಲದ ಪಟಾಕಿಯಂತಿದೆ.

-ಯೋಗೀಶ್ ಶೆಟ್ಟಿ, ಜಾತ್ಯತೀತ ಜನತಾದಳದ ಉಡುಪಿ ಜಿಲ್ಲಾಧ್ಯಕ್ಷ.

ಕ್ರಾಂತಿಕಾರಿ, ಅಭಿವೃದ್ಧಿಗೆ ಪೂರಕವಾದ ಜನಪ್ರಿಯ ಬಜೆಟ್. 70 ಲಕ್ಷ ಯುವಕರಿಗೆ ಹೊಸ ಉದ್ಯೋಗ, ಕೃಷಿಗೆ 11 ಲಕ್ಷ ಕೋಟಿ ರೂ., ಹೈನುಗಾರಿಕೆ, ಕೃಷಿ, ಮೀನುಗಾರಿಕೆಗೆ ಉತ್ತೇಜನ, 22 ಸಾವಿರ ಎಪಿಎಂಸಿಗಳ ಗುರುತಿಸಿ 11 ಲಕ್ಷ ಕೋಟಿ ರೂ. ಸಾಲದ ಗುರಿ, 4 ಕೋಟಿ ಜನರಿಗೆ ಉಚಿತ ವಿದ್ಯುತ್, 8 ಕೋಟಿ ಜನರಿಗೆ ಉಚಿತ ಎಲ್‌ಪಿಜಿ, ಬೆಂಗಳೂರಿಗೆ ಮೋನೋರೈಲು ನೀಡಿದ ಅತ್ಯುತ್ತಮ ಬಜೆಟ್ ಇದಾಗಿದೆ.

-ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಉಡುಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X