ಹರ್ಯಾಣ: ಅಂಬೇಡ್ಕರ್ ಪ್ರತಿಮೆಗೆ ಹಾನಿ, ದಿಢೀರ್ ಪ್ರತಿಭಟನೆ
ಹರ್ಯಾಣ, ಫೆ.3: ಜಿಂದ್ ನಗರದ ರಾಣಿ ತಲಾಬ್ ಪ್ರದೇಶದಲ್ಲಿರುವ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಕೆಲ ದುಷ್ಕರ್ಮಿಗಳು ಹಾನಿ ಎಸಗಿರುವ ಹಿನ್ನೆಲೆಯಲ್ಲಿ, ದಲಿತ ಸಂಘಟನೆಗಳು ದಿಢೀರ್ ಪ್ರತಿಭಟನೆ ನಡೆಸಿದವು.
ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಕಲ್ಯಾಣ ಸಂಘರ್ಷ ಸಮಿತಿ ಸದಸ್ಯರು ಪೊಲೀಸರಿಗೆ ಈ ವಿಷಯ ಗಮನಕ್ಕೆ ತಂದರು. ಪ್ರತಿಮೆ ಸ್ಥಳವನ್ನು ಧ್ವಂಸಗೊಳಿಸಿರುವುದು ಗುರುವಾರ ಬೆಳಗ್ಗೆ ಕಂಡುಬಂದಿದೆ ಎಂದು ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ದಲಿತ ಸಂಘಟನೆಗಳ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ. ಡಿಎಸ್ಪಿ ರಾಮಭಜ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.
Next Story