Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರದ ಅನುದಾನದ ಬಗ್ಗೆ ಕಾಂಗ್ರೆಸ್...

ಕೇಂದ್ರದ ಅನುದಾನದ ಬಗ್ಗೆ ಕಾಂಗ್ರೆಸ್ ವಿತಂಡವಾದ: ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ3 Feb 2018 7:24 PM IST
share
ಕೇಂದ್ರದ ಅನುದಾನದ ಬಗ್ಗೆ ಕಾಂಗ್ರೆಸ್ ವಿತಂಡವಾದ: ಯಡಿಯೂರಪ್ಪ

ಬೆಂಗಳೂರು, ಫೆ.3: ಜನರ ದುಡ್ಡನ್ನು ಖರ್ಚು ಮಾಡಿ, ಕಾಂಗ್ರೆಸ್ ಋಣ ತೀರಿಸಿ ಎಂದು ಕರೆ ಕೊಡುವ ಮೂರ್ಖ ಮುಖಂಡರನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ನಿಜಬಣ್ಣ ಜನರಿಗೆ ತಿಳಿದಿದೆ. 14ನೆ ಹಣಕಾಸು ಆಯೋಗದಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿದ್ದ ಅನುದಾನದ ಪ್ರಮಾಣ ಶೇ.32ರಿಂದ ಶೇ.42ಕ್ಕೆ ಹೆಚ್ಚಿಸಿರುವುದು ಎನ್‌ಡಿಎ ಸರಕಾರದ ಕೊಡುಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇದರಿಂದಾಗಿ, 2010 ರಿಂದ 2015ರ ವರೆಗಿನ 13ನೇ ಹಣಕಾಸು ಆಯೋಗದಲ್ಲಿ ಯುಪಿಎ ಸರಕಾರ ಇದ್ದಾಗ ರಾಜ್ಯಕ್ಕೆ ಬಿಡುಗಡೆಯಾದ ಒಟ್ಟು ಮೊತ್ತ 73,209 ಕೋಟಿ ರೂ.ಗಳು. ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ಮೇಲೆ 2014-15ರಿಂದ 2017-18ನೆ ಸಾಲಿನ ನವೆಂಬರ್‌ವರೆಗೆ ಬಿಡುಗಡೆ ಮಾಡಿದ ಒಟ್ಟು ಮೊತ್ತ 1,35,089 ಕೋಟಿ ರೂ.ಗಳು. ಮೋದಿ ಸರಕಾರ ಕೇವಲ 3 ವರ್ಷದಲ್ಲಿ ಯುಪಿಎ ಸರಕಾರಕ್ಕಿಂತ ಎರಡು ಪಟ್ಟು ಅನುದಾನ ಬಿಡುಗಡೆ ಮಾಡಿದೆ ಎಂದು ಅವರು ಹೇಳಿದ್ದಾರೆ.

14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರಾಜ್ಯಕ್ಕೆ ಅನುಮೋದನೆ ಆದ ಒಟ್ಟು ಮೊತ್ತ 2,03,445 ಕೋಟಿ ರೂ.ಗಳು. ಇದರ ಜತೆಗೆ ಕೇಂದ್ರ ವಲಯದ ಯೋಜನೆಗಳು(ಸಿಎಸ್‌ಎಸ್), ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಸಂಸ್ಥೆಗಳ ಅನುದಾನ ಇವುಗಳೆಲ್ಲವೂ ಸೇರಿದಂತೆ ಕೇಂದ್ರದಿಂದ 3 ಲಕ್ಷ ಕೊಟಿ ರೂ.ಅನುದಾನ ಬರಲಿದೆ ಎಂದು ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

ಸುಮಾರು 10 ಸಾವಿರ ಕೋಟಿ ರೂ.ಗಳು ಕಳೆದ ಮೂರು ವರ್ಷಗಳಲ್ಲಿ ಬರದಿರಲು, ರಾಜ್ಯ ಸರಕಾರ ಯೋಜನೆಗಳಿಗೆ ಅನುಷ್ಠಾನ ಪತ್ರ ಕೊಡದೇ ಇರುವುದೇ ಮುಖ್ಯ ಕಾರಣ. ಯುಪಿಎ ಸರಕಾರ ಇದ್ದಾಗಲೂ ನಮ್ಮ ರಾಜ್ಯ ಸರಕಾರ ಶೇ.19ರಷ್ಟು ತೆರಿಗೆ ಕೇಂದ್ರಕ್ಕೆ ಪಾವತಿಸುತ್ತಿದ್ದು, ಅವುಗಳಲ್ಲಿ ಶೇ.4.39ರಷ್ಟೇ ರಾಜ್ಯಕ್ಕೆ ಹಂಚಿಕೆ ಆಗಿದೆ. ಇದನ್ನು ಎನ್‌ಡಿಎ ಸರಕಾರ ಶೇ.4.70ಕ್ಕೆ ಏರಿಸಿದೆ ಎಂದು ಅವರು ಹೇಳಿದ್ದಾರೆ.

14ನೆ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರಾಜ್ಯಗಳಿಗೆ ಶೇ.32ರಿಂದ ಶೇ.42ರಷ್ಟು ಅನುದಾನ ಹೆಚ್ಚಾಗಿರುವುದರಿಂದ ಐದು ವರ್ಷಗಳಲ್ಲಿ 1.25 ಲಕ್ಷ ಕೋಟಿ ರೂ.ಅನುದಾನ ಹೆಚ್ಚಿಗೆ ಬರಲಿದೆ. ಇಷ್ಟಾಗಿಯೂ, ಕೇಂದ್ರ ಸರಕಾರದಿಂದ 2017-18ರ ನವೆಂಬರ್‌ವರೆಗೆ ಕೊಟ್ಟಿರುವ 1,35,089 ಕೋಟಿ ರೂ.ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಎಂಬ ಲೆಕ್ಕವನ್ನು ಕಾಂಗ್ರೆಸ್ ಕೊಟ್ಟಿಲ್ಲ. ಈ ಉತ್ತರದಾಯಿತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X