Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಹೊಸ ವಿವಾದ ಸೃಷ್ಟಿಸಿದ...

ಕೇರಳದಲ್ಲಿ ಹೊಸ ವಿವಾದ ಸೃಷ್ಟಿಸಿದ ‘ಸ್ಪೀಕರ್ ಕನ್ನಡಕ’ !

ವಾರ್ತಾಭಾರತಿವಾರ್ತಾಭಾರತಿ3 Feb 2018 7:26 PM IST
share
ಕೇರಳದಲ್ಲಿ ಹೊಸ ವಿವಾದ ಸೃಷ್ಟಿಸಿದ ‘ಸ್ಪೀಕರ್ ಕನ್ನಡಕ’ !

ತಿರುವನಂತಪುರಂ, ಫೆ.3: ಕೇರಳ ವಿಧಾನಸಭಾ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರು 50,000 ರೂ. ಬೆಲೆಯ ಕನ್ನಡಕವನ್ನು ಖರೀದಿಸಿದ್ದು ಇದರ ಮೊತ್ತವನ್ನು ಸರಕಾರವು ಮರುಪಾವತಿಸಿರುವ ಹಿನ್ನೆಲೆಯಲ್ಲಿ ವಿವಾದವೊಂದು ತಲೆಯೆತ್ತಿದೆ.

2018-19ರ ಬಜೆಟ್ ಮಂಡಿಸಿದ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಸರಕಾರವು ರಾಜ್ಯದಲ್ಲಿರುವ ವಿತ್ತೀಯ ಬರವನ್ನು ನೀಗಿಸಲು ಕಠಿಣ ವಿತ್ತೀಯ ಶಿಸ್ತನ್ನು ಪಾಲಿಸುವಂತೆ ಸೂಚಿಸಿದ ಮರುದಿನವೇ ಸ್ಪೀಕರ್ ಅವರ ದುಬಾರಿ ಕನ್ನಡಕದ ಕುರಿತ ಮಾಹಿತಿಯು ಬಯಲಾಗಿದೆ.

ಕೊಚ್ಚಿ ನಿವಾಸಿ ನ್ಯಾಯವಾದಿ ಡಿ.ಬಿ ಬಿನು ಅವರು ಮಾಹಿತಿ ಹಕ್ಕಿನಡಿ ಹಾಕಿದ ಅರ್ಜಿಗೆ ಉತ್ತರಿಸಿದ ಶಾಸಕಾಂಗ ಕಾರ್ಯಾಲಯವು, ಸ್ಪೀಕರ್ ಅವರು ಕನ್ನಡಕದ ಪಟ್ಟಿಗೆ 4,900 ರೂ. ಹಾಗೂ ಅದರ ಲೆನ್ಸ್‌ಗೆ 45,000 ರೂ. ಸೇರಿ ಒಟ್ಟಿಗೆ 49,900 ವೆಚ್ಚ ಮಾಡಿದ್ದಾರೆ ಎಂದು ತಿಳಿಸಿದೆ. ಜೊತೆಗೆ 2016ರ ಅಕ್ಟೋಬರ್ 5ರಿಂದ ಈ ವರ್ಷ ಜನವರಿ 19ರ ವರೆಗೆ ಸ್ಪೀಕರ್ ಅವರಿಗೆ 4.25 ಲಕ್ಷ ರೂ. ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಲಾಗಿದೆ ಎಂದು ಕಾರ್ಯಾಲಯ ತಿಳಿಸಿದೆ. ಈ ವಿವಾದಕ್ಕೆ ಪ್ರತಿಕ್ರಿಯೆ ನೀಡಿರುವ ಸ್ಪೀಕರ್, ತಾನು ವೈದ್ಯರ ಸಲಹೆಯ ಮೇರೆಗೆ ಈ ಕನ್ನಡಕವನ್ನು ಖರೀದಿಸಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ, ಶ್ರೀರಾಮಕೃಷ್ಣನ್ ಅವರು ಸಲ್ಲಿಸಿರುವ ಕೆಲವು ಬಿಲ್‌ಗಳ ಪ್ರತಿಯನ್ನು ನನಗೆ ನೀಡಲಾಗಿಲ್ಲ. ಹಾಗಾಗಿ ವಿಧಾನಸಭಾ ಕಾರ್ಯಾಲಯವು ನೀಡಿರುವ ಅಪೂರ್ಣ ದಾಖಲೆಗಳ ವಿರುದ್ಧ ರಾಜ್ಯ ಮಾಹಿತಿ ಆಯೋಗಯಲ್ಲಿ ದೂರು ಸಲ್ಲಿಸುವುದಾಗಿ ಬಿನು ತಿಳಿಸಿದ್ದಾರೆ. ಈ ಹಿಂದೆ, ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು 28,000 ರೂ. ಬೆಲೆಯ ಕನ್ನಡಕವನ್ನು ಖರೀದಿಸಿದಾಗ ಅದರ ಹಣವನ್ನು ಸರಕಾರದಿಂದ ಮರುಪಾವತಿ ಮಾಡಲಾದ ಕಾರಣಕ್ಕೆ ವಿವಾದಕ್ಕೀಡಾಗಿದ್ದರು. ತನ್ನ ಗಂಡನಿಗಾಗಿ ಖರೀದಿಸಿದ್ದ ಕನ್ನಡಕದ ಬೆಲೆಯನ್ನು ಸರಕಾರದಿಂದ ಪಡೆಯಲು ಶೈಲಜಾ ಅವರು ದಾಖಲೆಗಳನ್ನು ತಿರುಚಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಸುರೇಂದ್ರನ್‌ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಜಾಗೃತಿ ಮತ್ತು ಭ್ರಷ್ಟಾಚಾರ ನಿಗ್ರಹದಳ ಪ್ರಾಥಮಿಕ ತನಿಖೆಯನ್ನು ನಡೆಸುತ್ತಿದೆ.

ವಿಧಾನಸಭಾ ಸದಸ್ಯರು ಕನ್ನಡಕದ ವೆಚ್ಚವೆಂದು ಹೇಳಿ ದೊಡ್ಡ ಮೊತ್ತದಲ್ಲಿ ಹಣವನ್ನು ಮರುಪಾವತಿ ಮಾಡಿಸಿಕೊಳ್ಳುತ್ತಿದ್ದಾರೆ ಎಂಬುದು ಕಂಡುಬಂದ ಹಿನ್ನೆಲೆಯಲ್ಲಿ 2004ರಲ್ಲಿ ಆಗಿನ ಸ್ಪೀಕರ್ ವಕ್ಕೊಮ್ ಪುರುಷೋತ್ತಮ್ ಅವರು 5,000 ರೂ. ವರೆಗಿನ ಕನ್ನಡಕದ ಪ್ರೇಮ್‌ಗಳಿಗೆ ಮಾತ್ರ ಸರಕಾರ ಮರುಪಾವತಿ ಮಾಡುವುದಾಗಿ ಮಿತಿ ಹೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X