Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಫ್ರಿಕದಲ್ಲಿ ಅಪಹರಣಕ್ಕೀಡಾದ ಹಡಗಿನಲ್ಲಿ...

ಆಫ್ರಿಕದಲ್ಲಿ ಅಪಹರಣಕ್ಕೀಡಾದ ಹಡಗಿನಲ್ಲಿ ಕಾಸರಗೋಡಿನ ಯುವಕ

► 2 ದಿನಗಳಿಂದ ಸಂಪರ್ಕಕ್ಕೆ ಸಿಗದ ಹಡಗು ► ಆತಂಕದಲ್ಲಿ ಶ್ರೀಉಣ್ಣಿ ಮನೆ ಮಂದಿ

ವಾರ್ತಾಭಾರತಿವಾರ್ತಾಭಾರತಿ3 Feb 2018 7:56 PM IST
share
ಆಫ್ರಿಕದಲ್ಲಿ ಅಪಹರಣಕ್ಕೀಡಾದ ಹಡಗಿನಲ್ಲಿ ಕಾಸರಗೋಡಿನ ಯುವಕ

ಕಾಸರಗೋಡು, ಫೆ.3: ಆಫ್ರಿಕಾ ಕರಾವಳಿಯಲ್ಲಿ ಕಡಲ್ಗಳ್ಳರು ತೈಲ ಸಾಗಾಟದ ಹಡಗೊಂದನ್ನು ಅಪಹರಿಸಿದ್ದು, ಅದರಲ್ಲಿ ಕಾಸರಗೋಡು ನಿವಾಸಿ ಯೋರ್ವರು ಇದ್ದಾರೆಂಬ ಮಾಹಿತಿ ಲಭಿಸಿದೆ. 

ಉದುಮ ಪೇರಳೆ ಹಿತ್ತಿಲಿನ ಶ್ರೀಉಣ್ಣಿ (25) ಈ ಹಡಗಿನಲ್ಲಿದ್ದು, ಹಡಗು ಅಪಹರಣದ ಕುರಿತು ಮನೆಯವರಿಗೆ ಮಾಹಿತಿ ಲಭಿಸಿದೆ. ಮುಂಬೈ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಪನಾಮಾ ನೋಂದಣಿಯ ಮರೈನ್ ಎಕ್ಸ್‌ಪ್ರೆಸ್ ಎಂಬ ಹಡಗನ್ನು ಜ.31ರಂದು ಕಡಲ್ಗಳ್ಳರು ಅಪಹರಿಸಿದ್ದಾರೆ. ಈ ಹಡಗಿನಲ್ಲಿ ಶ್ರೀಉಣ್ಣಿ ಸೇರಿದಂತೆ 20 ಮಂದಿಯಿದ್ದರು ಎಂದು ತಿಳಿದುಬಂದಿದೆ. ಹಡಗಿನೊಂದಿಗಿನ ಸಂಪರ್ಕ ಕಡಿತಗೊಂಡಿರುವುದಾಗಿ ಕಂಪೆನಿ ಅಧಿಕಾರಿಗಳು ಮನೆ ಯವರಿಗೆ ತಿಳಿಸಿದ್ದಾರೆ.

ಶ್ರೀಉಣ್ಣಿ (25) ನಾಲ್ಕು ವರ್ಷಗಳಿಂದ ಈ ಹಡಗಿನಲ್ಲಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ರಜೆಯಲ್ಲಿ ಊರಿಗೆ ಬಂದಿದ್ದ ಅವರು ಒಂದು ತಿಂಗಳ ಹಿಂದೆಯಷ್ಟೇ ಮತ್ತೆ ಕೆಲಸಕ್ಕೆ ಸೇರ್ಪಡೆಗೊಂಡಿದ್ದರು. ಜ.31ರಂದು ಅಪರಾಹ್ನ 3 ಗಂಟೆಗೆ ಅವರು ಮನೆಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ಅದೇ ದಿನ ರಾತ್ರಿಯಿಂದ ಹಡಗು ಮತ್ತು ಮುಂಬೈಯಲ್ಲಿರುವ ಹಡಗು ಕಂಪೆನಿಯ ಕೇಂದ್ರದ ನಡುವಿನ ಸಂಪರ್ಕ ಕಡಿದಿರುವುದಾಗಿ ಕಂಪೆನಿ ಮೂಲಗಳು ತಿಳಿಸಿವೆ. 

ಹಡಗು ಅಪಹರಣ ಸುದ್ದಿ ತಿಳಿದು ಮನೆಯಲ್ಲಿ ಆತಂಕ ಮನೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X