Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಆದಾಯ ಹೆಚ್ಚಳ ಮಾಡದೆ, ರಾಷ್ಟ್ರಪತಿ,...

ರೈತರ ಆದಾಯ ಹೆಚ್ಚಳ ಮಾಡದೆ, ರಾಷ್ಟ್ರಪತಿ, ರಾಜ್ಯಪಾಲರ ವೇತನ ಹೆಚ್ಚಳ ಮಾಡಿದ್ದಾರೆ: ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ3 Feb 2018 8:48 PM IST
share
ರೈತರ ಆದಾಯ ಹೆಚ್ಚಳ ಮಾಡದೆ, ರಾಷ್ಟ್ರಪತಿ, ರಾಜ್ಯಪಾಲರ ವೇತನ ಹೆಚ್ಚಳ ಮಾಡಿದ್ದಾರೆ: ಎಚ್.ವಿಶ್ವನಾಥ್

ಮೈಸೂರು,ಫೆ.3: ಬೆಲೆ ಏರಿದಂತೆ ವೇತನ ಹೆಚ್ಚಾಗುತ್ತೆ ಅಂತಾರೆ. ಅದರಂತೆ ರಾಷ್ಟ್ರಪತಿ, ರಾಜ್ಯಪಾಲರ ವೇತನ ಹೆಚ್ಚಳ ಮಾಡಿದ್ದಾರೆ. ಹಾಗಿದ್ದರೆ ರೈತರ ಆದಾಯ ಹೆಚ್ಚಳ ಮಾಡುವವರು ಯಾರು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಸರ್ಕಾರದ ಬಜೆಟ್ ಕಟ್ಟಾ ಮಿಠಾಯಿ ಬಜೆಟ್. ಜನಸಾಮಾನ್ಯರಿಗೆ ಅರ್ಥ ಆಗುವ ರೀತಿಯಲ್ಲಿ ಬಜೆಟ್ ಮಂಡಿಸಲಾಗಿದೆ. ಆದರೆ ಅವರು ಯಾಕೆ ಹಿಂದಿನ ಬಜೆಟ್‍ನ ಅಂಕಿ ಅಂಶಗಳನ್ನು ಹಂಚಿಕೊಳ್ಳಲಿಲ್ಲ. ನೀವು ಒಬ್ಬರೆ ತೆಗೆದುಕೊಂಡ ನೋಟು ಅಮಾನೀಕರಣದ ಬಗ್ಗೆ ಯಾಕೆ ಮಾತನಾಡಲಿಲ್ಲ. ನಿಮ್ಮ 2018ರ ಬಜೆಟ್ ಒಂದು ಮನ್ ಕಿ ಬಾತ್ ಅಷ್ಟೇ. ಯಾರು ಕೊಟ್ಟ ಭರವಸೆ ಈಡೇರಿಸುತ್ತಾರೆ ಅವರೇ ನಿಜವಾದ ದೇಶಭಕ್ತ ಎಂದು ಹೇಳಿದರು.

ಸ್ವಚ್ಛಭಾರತ, ಮುದ್ರಾ ಯೋಜನೆ ಕ್ರಾಂತಿಕಾರಿ ಅಲ್ಲ. ಅದೆಲ್ಲ ಹಳೆ ಯೋಜನೆಗಳಿಗೆ ಹೊಸ ನಾಮಧೇಯ ಅಷ್ಟೇ. 2018ರ ಬಜೆಟ್ ಸ್ವಲ್ಪ ಸಿಹಿ, ಜಾಸ್ತಿ ಕಹಿ ಆಗಿದೆ. ಇದು ದೇಶದ ಬಜೆಟ್. ಗಣಪತಿ ಹಬ್ಬದಲ್ಲಿ ಲೆಕ್ಕ ಕೊಡೋ ಬಜೆಟ್ ಅಲ್ಲವೆಂದು ವ್ಯಂಗ್ಯವಾಡಿದರು.

ಚಿಕ್ಕಮಾದು ಕುಟಂಬ ಜೆಡಿಎಸ್ ತೊರೆದಿರುವುದು ನೋವು ತಂದಿದೆ: ಚಿಕ್ಕಮಾದು ಕುಟುಂಬ ಜೆಡಿಎಸ್ ತೊರೆದಿರುವುದು ನನಗೆ ನೋವಾಗಿದೆ. ಜೆಡಿಎಸ್ ಅವರಿಗೆ ಎಲ್ಲವನ್ನೂ ನೀಡಿತ್ತು. ಆದರೂ ಆ ಚಿಕ್ಕ ಹುಡುಗನನ್ನು ಯಾರೋ ದಿಕ್ಕು ತಪ್ಪಿಸಿದ್ದಾರೆ ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

ನಾನು ಕಾಂಗ್ರೆಸ್ ಬಿಟ್ಟು ಜೆಡಿಎಸ್‍ಗೆ ಬರೋದಕ್ಕೆ ದಿ.ಶಾಸಕ ಚಿಕ್ಕಮಾದು ಅವರೇ ಕಾರಣ. ಕಾಂಗ್ರೆಸ್ ಬಿಟ್ಟ ಸಂದರ್ಭ ಚಿಕ್ಕಮಾದು ನನ್ನ ಮನವೊಲಿಸಿದರು. ನಿಮ್ಮಂತವರು ರಾಜಕೀಯದಲ್ಲಿ ಇರಬೇಕು ಅಂತ ಕೇಳಿಕೊಂಡಿದ್ದರು. ಅವರೇ ಮೊದಲು ನನ್ನನ್ನು ಜೆಡಿಎಸ್‍ಗೆ ಕರೆದರು. ಆದರೆ ಅವರ ಕುಟುಂಬದವರೇ ಜೆಡಿಎಸ್ ತೊರೆದಿದ್ದು ನನಗೆ ನೋವಾಗಿದೆ. ಚಿಕ್ಕಮಾದು ಅವರ ಮಗ ಇನ್ನೂ ಚಿಕ್ಕ ಹುಡುಗನಾಗಿದ್ದು, ಯಾರೋ ದಿಕ್ಕು ತಪ್ಪಿಸಿದ್ದಾರೆ ಎಂದರು.

ನಾನು ಮತ್ತು ಸಾ.ರಾ. ಮಹೇಶ್ ಅನೀಲ್ ಚಿಕ್ಕಮಾದು ಅವರೊಂದಿಗೆ ಮಾತನಾಡಿದ್ದೆವು. ಆದರೆ ಒಂದೇ ವಾರಕ್ಕೆ ಅವರು ಸಿದ್ದರಾಮಯ್ಯ ಕಾಲಿಗೆ ಬಿದ್ದರು. ಜೆಡಿಎಸ್ ಅನ್ನು ದುರ್ಬಲ ಮಾಡಲು ಸಿದ್ದರಾಮಯ್ಯ ಹೀಗೆಲ್ಲ ಮಾಡಿಸುತ್ತಿದ್ದಾರೆ. ಯಾಕಂದರೆ ಸಿದ್ದರಾಮಯ್ಯರೇ ಈಗ ದುರ್ಬಲರಾಗಿದ್ದಾರೆ. ಅವರಿಂದ ಜೆಡಿಎಸ್‍ಅನ್ನು ಏನು ಮಾಡಲು ಸಾಧ್ಯವಿಲ್ಲ ಎಂದರು. 

ಸಿದ್ದರಾಮಯ್ಯಗೆ ಬಜೆಟ್ ಮಂಡಿಸಲು ಯಾವುದೇ ಹಕ್ಕಿಲ್ಲ, ಆದರೂ ಮಂಡಿಸುತ್ತಾರೆ. ಯಾಕೆಂದರೆ ಅವರಿಗೆ ಯಾವುದೇ ಕಾನೂನು ಗೊತ್ತಿಲ್ಲ. ನನ್ನ ನಂತರ ಜಲಪ್ರಳಯವಾಗಲಿ ಅನ್ನೋ ಮನಃಸ್ಥಿತಿ ಸಿದ್ದರಾಮಯ್ಯನದು. ನನ್ನ ನಂತರ ಯಾರಿಗೂ, ಏನೂ ಇರಬಾರದು ಅನ್ನೋದು ಸಿಎಂ ಮನಃಸ್ಥಿತಿ ಎಂದು ಕಿಡಿಕಾರಿದರು.

ಅಲ್ಪಸಂಖ್ಯಾತರ ಮುಂದೆ ಸಿಎಂ ಬುಡುಬುಡಿಕೆ ಅಲ್ಲಾಡಿಸುತ್ತಿದ್ದಾರೆ. ಮುಸ್ಲಿಂ ಗುರುಗಳನ್ನು ರಾತ್ರೋರಾತ್ರಿ ಭೇಟಿ ಮಾಡುವ ಅಗತ್ಯವೇನಿತ್ತು. ಹಗಲು ಹೊತ್ತು ಮುಸ್ಲಿಂ ಮುಖಂಡರನ್ನು ಭೇಟಿ ಮಾಡಲು ಹೆದರಿಕೆಯೇ? ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವನಾಥ್, ಇಂದಿರಾ ಕ್ಯಾಂಟೀನ್ ಬಗ್ಗೆ ನಮಗೆ ಗೌರವ ಇದೆ. ಅನ್ನದ ಬಗ್ಗೆ ಗೌರವ ಇದೆ. ಆದರೆ ಕೊನೆ ಮೂರು ತಿಂಗಳಲ್ಲಿ ಅದನ್ನ ಜಾರಿ ಮಾಡಿದಿರಿ. ಇಷ್ಟು ವರ್ಷ ನಿದ್ದೆ ಮಾಡ್ತಿದ್ರಾ? ಇಷ್ಟು ದಿನ ಬಡವರು ಇರಲಿಲ್ವಾ? ಯಾವ ಆಧಾರದ ಮೇಲೆ ಈ ಯೋಜನೆಗಳನ್ನ ಜಾರಿ ಮಾಡಿದ್ದೀರಿ ಎಂದು ಪ್ರಶ್ನಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಪ್ರೊ.ಎಚ್.ಗೋವಿಂದಯ್ಯ, ಅಶೋಕಪುರಂ ರೇವಣ್ಣ ಸೇರಿದಂತೆ ಹಲವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X