Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾಸ್ಗಂಜ್ ನಲ್ಲಿ ಗಣರಾಜ್ಯೋತ್ಸವಕ್ಕೆ...

ಕಾಸ್ಗಂಜ್ ನಲ್ಲಿ ಗಣರಾಜ್ಯೋತ್ಸವಕ್ಕೆ ಅಡ್ಡಿಪಡಿಸಿ ಗಲಭೆಗೆ ಕಾರಣವಾದದ್ದು ಯಾರು?

ಸಿಸಿಟಿವಿಯಲ್ಲಿ ಸೆರೆಯಾಗಿದೆ ಸಂಘಪರಿವಾರಿಗಳ ಕೃತ್ಯ

ವಾರ್ತಾಭಾರತಿವಾರ್ತಾಭಾರತಿ3 Feb 2018 9:40 PM IST
share
ಕಾಸ್ಗಂಜ್ ನಲ್ಲಿ ಗಣರಾಜ್ಯೋತ್ಸವಕ್ಕೆ ಅಡ್ಡಿಪಡಿಸಿ ಗಲಭೆಗೆ ಕಾರಣವಾದದ್ದು ಯಾರು?

ಉತ್ತರ ಪ್ರದೇಶ, ಫೆ.3: ಗಣರಾಜ್ಯೋತ್ಸವ ದಿನಾಚರಣೆಯ ದಿನ ಧ್ವಜಾರೋಹಣಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದ್ದ ಮುಸ್ಲಿಮರ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಇದುವೇ ಕಾಸ್ಗಂಜ್ ಗಲಭೆಯ ಆರಂಭ ಎನ್ನುವುದಕ್ಕೆ ಸಾಕ್ಷಿಯಾಗಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಸಂಘಪರಿವಾರ ಕಾರ್ಯಕರ್ತರು ಮುಸ್ಲಿಮರ ಮೇಲೆ ದಾಳಿ ನಡೆಸಿ ಗಲಭೆಗೆ ಕಾರಣವಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ jantakareporter.com ಸಂಪೂರ್ಣ ವರದಿಯೊಂದನ್ನು ಪ್ರಕಟಿಸಿದೆ.

ಸುತ್ತಮುತ್ತಲ ಪ್ರದೇಶವನ್ನು ತ್ರಿವರ್ಣದ ಬಲೂನುಗಳೊಂದಿಗೆ ಸಿಂಗರಿಸಿದ್ದ ಸ್ಥಳೀಯ ಮುಸ್ಲಿಮರು ಧ್ವಜಸ್ಥಂಬವೊಂದನ್ನು ನಿರ್ಮಿಸಿ ಧ್ವಜಾರೋಹಣಕ್ಕೆ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದರು. ಈ ಸಂದರ್ಭ ಮತ್ತೊಂದು ಕಡೆಯಿಂದ ಸಂಘಪರಿವಾರ ಕಾರ್ಯಕರ್ತರು ಆಗಮಿಸಿದ್ದಾರೆ. ಕೆಲ ಸಮಯದಲ್ಲೇ ದುಷ್ಕರ್ಮಿಗಳು ಮುಸ್ಲಿಮರು ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸುತ್ತಿದ್ದ ಸ್ಥಳಕ್ಕೆ ನುಗ್ಗಿ ಕುರ್ಚಿಗಳನ್ನು ಎಸೆದು ಅಶಾಂತಿ ಸೃಷ್ಟಿಸಿದ್ದಾರೆ. ಈ ಎಲ್ಲಾ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಂತರ ನಡೆದ ಕಾಸ್ಗಂಜ್ ಗಲಭೆ ವ್ಯಾಪಕವಾಗಿ ಹರಡಿ ಒಬ್ಬ ಯುವಕನ ಸಾವಿಗೂ ಕಾರಣವಾಗಿತ್ತು. ಇಡೀ ಘಟನೆಯ ಸೂತ್ರಧಾರಿಗಳು, ಕಾರಣಕರ್ತರು ಸಂಘಪರಿವಾರದ ಕಾರ್ಯಕರ್ತರೇ ಆಗಿದ್ದರೂ ‘ಆಜ್ ತಕ್’ ಚಾನೆಲ್ ನ ರೋಹಿತ್ ಸರ್ದಾನ ಹಾಗು ಶ್ವೇತಾ ಸಿಂಗ್ ಗಲಭೆಗೆ ಮುಸ್ಲಿಮರೇ ಕಾರಣ ಎನ್ನುವಂತೆ ಹಾಗು ಮುಸ್ಲಿಮರು ಭಾರತ ವಿರೋಧಿಗಳು ಎನ್ನುವಂತೆ ಬಿಂಬಿಸಿದರು. ಆದರೆ ಇವರ ಬಣ್ಣ ನಂತರ ಬಯಲಾಗಿತ್ತು.

ಇದೇ ಕಾಸ್ಗಂಜ್ ಗಲಭೆಗೆ ಸಂಬಂಧಿಸಿ ರಾಹುಲ್ ಉಪಾಧ್ಯಾಯ ಎನ್ನುವ ವ್ಯಕ್ತಿಯನ್ನೂ ಕೊಲೆಗೈಯಲಾಗಿದೆ. ಮುಸ್ಲಿಮರೇ ಆತನನ್ನು ಕೊಲೆಗೈದಿದ್ದಾರೆ ಎನ್ನುವ ಸುದ್ದಿಯನ್ನೂ ಹರಡಲಾಗಿತ್ತು. ಆದರೆ ನಂತರ ರಾಹುಲ್ ಮಾಧ್ಯಮದವರ ಮುಂದೆ ಬಂದು, “ನಾನು ಸತ್ತಿಲ್ಲ. ಕೋಮುದ್ವೇಷ ಹರಡಬೇಡಿ” ಎಂದು ವಿನಂತಿಸಿದ್ದರು.

ಇಷ್ಟೇ ಅಲ್ಲದೆ ಗಲಭೆಯಲ್ಲಿ ಮೃತಪಟ್ಟ ಯುವಕನ ತಂದೆ ತನಗೆ ಜೀವಬೆದರಿಕೆ ಇದೆ ಸುಳ್ಳು ಹೇಳಲು ಪತ್ರಕರ್ತನೊಬ್ಬ ಒತ್ತಾಯಿಸಿದ್ದ ಎಂದು ಕಾಸ್ಗಂಜ್ ಎಸ್ಪಿ ಪಿಯೂಷ್ ಶ್ರೀವಾಸ್ತವ ಹೇಳಿದ್ದರು.

ಕಾಸ್ಗಂಜ್ ಗಲಭೆಯ ಸಂದರ್ಭ ‘ವಂದೇ ಮಾತರಂ ಹೇಳಿದ್ದೇ ತಪ್ಪಾ, ಭಾರತದಲ್ಲಿ ತ್ರಿವರ್ಣ ಧ್ವಜ ಹಾರಿಸಬಾರದೇ” ಎಂದೆಲ್ಲಾ ಚರ್ಚೆ ನಡೆಸಿ ಈ ಘಟನೆಗೆ ಮುಸ್ಲಿಮರೇ ಕಾರಣ ಎಂದು ಮಾಧ್ಯಮಗಳು ಬಿಂಬಿಸಿದ್ದವು. ಇದೀಗ ಮುಸ್ಲಿಮರು ಗಣರಾಜ್ಯೋತ್ಸವ ಆಚರಿಸುತ್ತಿದ್ದ ಸಂದರ್ಭ ಅಡ್ಡಿಪಡಿಸಿದ, ಗಲಾಟೆ ಮಾಡಿದ, ಗಲಭೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಇಂತಹ ಮಾಧ್ಯಮಗಳು ಬಾಯಿ ಬಿಡುತ್ತಿಲ್ಲ. ಅಂತೆ ಕಂತೆಗಳನ್ನು ಮುಂದಿಟ್ಟು ಸುದ್ದಿ ಮಾಡಿದವರು ಸತ್ಯಾಂಶವೇ ಕಣ್ಣ ಮುಂದಿರುವಾಗ ಗಣರಾಜ್ಯೋತ್ಸವ ಆಚರಿಸದಂತೆ ತಡೆದವರ ವಿರುದ್ಧ ಸುದ್ದಿ ಮಾಡುತ್ತಾರೆಯೇ ಎಂದು ಕಾದು ನೋಡಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X