ಅಕ್ರಮ ಗಾಂಜಾ ವಶ: ಓರ್ವನ ಬಂಧನ

ಉಡುಪಿ, ಫೆ.3: ಹೆಜಮಾಡಿ ರಾಜೀವ ಗಾಂಧಿ ಕ್ರೀಡಾಂಗಣದ ಬಳಿ ಫೆ.3 ರಂದು ಅಕ್ರಮವಾಗಿ ಗಾಂಜಾ ಹೊಂದಿದ್ದ ಓರ್ವನನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ತೌಡುಗೋಳಿ ಮೂಲದ, ಪ್ರಸ್ತುತ ಸುರತ್ಕಲ್ ಕೃಷ್ಣಾಪುರದ ನಿವಾಸಿ ಇರ್ಫಾನ್ ಟಿ.ಎಂ.(29) ಬಂಧಿತ ಆರೋಪಿ. ಈತನಿಂದ 25,000 ರೂ. ಮೌಲ್ಯದ 1,170 ಗ್ರಾಂ ತೂಕದ ಗಾಂಜಾ, ನಂಬರ್ ಪ್ಲೇಟ್ ಇಲ್ಲದ ಸುಜುಕಿ ಸ್ಕೂಟರ್, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರ್ಗಿ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮತ್ತು ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಹೃಷಿಕೇಶ್ ಸೋನವಾಲೆ ಮಾರ್ಗದರ್ಶನದಲ್ಲಿ ಉಡುಪಿ ಡಿಸಿಐಬಿ ನಿರೀಕ್ಷಕ ಸಂಪತ್ ಕುಮಾರ್ ನೇತೃತ್ವ ದಲ್ಲಿ ಡಿಸಿಐಬಿ ಎಎಸ್ಸೈ ರವಿಚಂದ್ರ, ಸಿಬ್ಬಂದಿಗಳಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ಪ್ರವೀಣ್, ರಾಜ್ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ನಡೆಸಿದ್ದಾರೆ. ಆರೋಪಿ ಹಾಗೂ ಸೊತ್ತುಗಳನ್ನು ಪಡುಬಿದ್ರೆ ಠಾಣೆಗೆ ಹಸ್ತಾಂತರಿಸಿದ್ದು ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





