Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ಭದ್ರತೆ ಹ್ಯಾಕ್ ಮಾಡಿ ಸಬ್ಸಿಡಿ...

ಆಧಾರ್ ಭದ್ರತೆ ಹ್ಯಾಕ್ ಮಾಡಿ ಸಬ್ಸಿಡಿ ಆಹಾರಧಾನ್ಯ ಕಳ್ಳತನ: ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ3 Feb 2018 10:07 PM IST
share
ಆಧಾರ್ ಭದ್ರತೆ ಹ್ಯಾಕ್ ಮಾಡಿ ಸಬ್ಸಿಡಿ ಆಹಾರಧಾನ್ಯ ಕಳ್ಳತನ: ಇಬ್ಬರ ಬಂಧನ

ಸೂರತ್, ಫೆ.3: ಹ್ಯಾಕ್ ಮಾಡಲ್ಪಟ್ಟ ಸಾಫ್ಟ್‌ವೇರ್ ಹಾಗೂ ಫಲಾನುಭವಿಗಳ ಅನಧಿಕೃತ ಬಯೋಮೆಟ್ರಿಕ್ ಆಧಾರ್ ದತ್ತಾಂಶವನ್ನು ಬಳಸಿ ಸಬ್ಸಿಡಿ ಹೊಂದಿರುವ ಆಹಾರಧಾನ್ಯವನ್ನು ಕಳ್ಳತನ ಮಾಡಿದ ಆರೋಪದಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಪೊಲೀಸರು ಎರಡು ರೇಶನ್ ಅಂಗಡಿಗಳ ಮಾಲಕರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬಾಬುಬಾಯಿ ಬೋರಿವಲ್ (53) ಹಾಗೂ ಸಂಪತ್‌ಲಾಲ್ ಶಾ (61) ಎಂದು ಗುರುತಿಸಲಾಗಿದ್ದು, ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ರಾಜ್ಯ ಸರಕಾರವು 2013ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2016ರ ಎಪ್ರಿಲ್‌ನಲ್ಲಿ ಅನ್ನಪೂರ್ಣ ಯೋಜನೆಗೆ ಚಾಲನೆ ನೀಡಿತ್ತು. ಈ ವೇಳೆ ನ್ಯಾಯ ಬೆಲೆ ಅಂಗಡಿಗಳನ್ನು ದೀನ್ ದಯಾಳ್ ಗ್ರಾಹಕ ಭಂಡಾರ ಎಂದು ಪುನರ್‌ನಾಮಕರಣ ಮಾಡಲಾಗಿದ್ದು ಕಂಪ್ಯೂಟರೀಕರಣಗೊಳಿಸುವ ಮೂಲಕ ಸಬ್ಸಿಡಿವುಳ್ಳ ಆಹಾರಧಾನ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಎಚ್ಚರವಹಿಸಲಾಗಿತ್ತು ಎಂದು ಕ್ರೈಂಬ್ರಾಂಚ್ ಪೊಲೀಸ್ ನಿರೀಕ್ಷಕರಾದ ಬಿ.ಎನ್ ದಾವೆ ತಿಳಿಸಿದ್ದಾರೆ.

ರೇಶನ್ ಅಂಗಡಿಗಳು ಇ-ಎಫ್‌ಪಿಎಸ್ ಎಂಬ ಕಂಪ್ಯೂಟರ್ ಅಪ್ಲಿಕೇಶನ್‌ಅನ್ನು ಬಳಸಬೇಕಾಗುತ್ತದೆ. ಈ ಆ್ಯಪ್‌ನಲ್ಲಿ ಫಲಾನುಭವಿಗಳ ದತ್ತಾಂಶಗಳನ್ನು ಶೇಖರಿಸಿಡಲಾಗಿರುತ್ತದೆ. ಫಲಾನುಭವಿಗಳ ವಿವರವನ್ನು ಪಡೆಯುವ ಸಲುವಾಗಿ ರೇಶನ್ ಅಂಗಡಿ ಮಾಲಕರಿಗೆ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಲಾಗುತ್ತದೆ. ಆಹಾರಧಾನ್ಯ ಪಡೆಯುವ ಸಲುವಾಗಿ ಫಲಾನುಭವಿಯು ತನ್ನ ಬೆರಳಚ್ಚು, ರೇಶನ್ ಕಾರ್ಡ್ ವಿವಿರ ಮತ್ತು ಆಧಾರ್ ಸಂಖ್ಯೆಯನ್ನು ನೀಡಬೇಕಾಗುತ್ತದೆ. ಎಲ್ಲ ಪರಿಶೀಲನೆ ಮುಗಿದ ನಂತರ ಫಲಾನುಭವಿಗಳು ಒಂದು ಸ್ಲಿಪ್ ಪಡೆಯುತ್ತಾರೆ ಮತ್ತು ಅದರ ಆಧಾರದಲ್ಲಿ ಅವರಿಗೆ ಆಹಾರಧಾನ್ಯವನ್ನು ನೀಡಲಾಗುತ್ತದೆ ಎಂದು ದಾವೆ ವಿವರಿಸಿದ್ದಾರೆ.

ಆರೋಪಿಗಳು ನಕಲಿ ಸಾಫ್ಟ್‌ವೇರ್ ಬಳಸಿ ಅಪರಿಚಿತ ಮೂಲದಿಂದ ಫಲಾನುಭವಿಗಳ ದತ್ತಾಂಶಗಳಿಗೆ ಕನ್ನ ಹಾಕಿದ್ದಾರೆ. ಹೀಗೆ ಪಡೆದ ದತ್ತಾಂಶಗಳನ್ನು ತಮ್ಮ ಕಂಪ್ಯೂಟರ್‌ನಲ್ಲಿ ಉಳಿಸಿಕೊಂಡ ಅವರು, ಫಲಾನುಭವಿಗಳು ಸಬ್ಸಿಡಿವುಳ್ಳ ಆಹಾರಧಾನ್ಯವನ್ನು ಪಡೆದುಕೊಂಡಿದ್ದಾರೆ ಎಂದು ಸಾಬೀತುಮಾಡಲು ಪ್ರತೀ ತಿಂಗಳು ಈ ದಾಖಲೆಯನ್ನು ನೀಡುತ್ತಿದ್ದರು. ಆದರೆ ವಾಸ್ತವದಲ್ಲಿ ನಿಜವಾದ ಫಲಾನುಭವಿಗಳಿಗೆ ಆಹಾರಧಾನ್ಯ ಸಿಗುತ್ತಿರಲಿಲ್ಲ ಎಂದು ದಾವೆ ತಿಳಿಸಿದ್ದಾರೆ.

ಅಷ್ಟಕ್ಕೂ ಆರೋಪಿಗಳು ನಕಲಿ ಸಾಫ್ಟ್‌ವೇರ್ ಮತ್ತು ಬಯೋಮೆಟ್ರಿಕ್ ದತ್ತಾಂಶವನ್ನು ಪಡೆದಿದ್ದಾದರೂ ಎಲ್ಲಿಂದ ಎಂಬ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮೊದಲು, ಫಲಾನುಭವಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಎಂಟು ರೇಶನ್ ಅಂಗಡಿ ಮಾಲಕರ ಮೇಲೆ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು. ನಂತರ ಈ ಪ್ರಕರಣವನ್ನು ಕ್ರೈಂಬ್ರಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಬಂಧಿತ ಆರೋಪಿಗಳ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 406, 409 (ನಂಬಿಕೆ ದ್ರೋಹ), 467, 468, 471 (ವಂಚನೆ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳು ಮತ್ತು ಅಗತ್ಯ ವಸ್ತುಗಳ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X