Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿಷೇಧಿತ ವಸ್ತು ರಫ್ತಿನಿಂದ 1,282 ಕೋಟಿ...

ನಿಷೇಧಿತ ವಸ್ತು ರಫ್ತಿನಿಂದ 1,282 ಕೋಟಿ ರೂ. ಗಳಿಕೆ !

ಉತ್ತರ ಕೊರಿಯದಿಂದ ವಿಶ್ವಸಂಸ್ಥೆ ದಿಗ್ಬಂಧನ ಉಲ್ಲಂಘನೆ

ವಾರ್ತಾಭಾರತಿವಾರ್ತಾಭಾರತಿ3 Feb 2018 10:17 PM IST
share
ನಿಷೇಧಿತ ವಸ್ತು ರಫ್ತಿನಿಂದ 1,282 ಕೋಟಿ ರೂ. ಗಳಿಕೆ !

ವಿಶ್ವಸಂಸ್ಥೆ, ಫೆ. 3: ಉತ್ತರ ಕೊರಿಯವು ವಿಶ್ವಸಂಸ್ಥೆಯ ದಿಗ್ಬಂಧನಗಳನ್ನು ಉಲ್ಲಂಘಿಸಿದ್ದು, 2017ರಲ್ಲಿ ನಿಷೇಧಿತ ವಸ್ತುಗಳನ್ನು ರಫ್ತು ಮಾಡಿ ಸುಮಾರು 200 ಮಿಲಿಯ ಡಾಲರ್ (ಸುಮಾರು 1,282 ಕೋಟಿ ರೂಪಾಯಿ) ಸಂಪಾದಿಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ವೀಕ್ಷಕರ ಗೌಪ್ಯ ವರದಿಯೊಂದು ಹೇಳಿದೆ.

ಉತ್ತರ ಕೊರಿಯವು ಸಿರಿಯ ಮತ್ತು ಮ್ಯಾನ್ಮಾರ್‌ಗೆ ಶಸ್ತ್ರಾಸ್ತ್ರಗಳನ್ನೂ ಪೂರೈಸುತ್ತಿದೆ ಎಂಬುದಾಗಿಯೂ ವರದಿ ಆರೋಪಿಸಿದೆ.

ಉತ್ತರ ಕೊರಿಯವು ರಶ್ಯ, ಚೀನಾ, ದಕ್ಷಿಣ ಕೊರಿಯ, ಮಲೇಶ್ಯ ಮತ್ತು ವಿಯೆಟ್ನಾಂಗಳು ಸೇರಿದಂತೆ ವಿವಿಧ ದೇಶಗಳ ಬಂದರುಗಳಿಗೆ ಕಲ್ಲಿದ್ದಲನ್ನು ಪೂರೈಸಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಸಲ್ಲಿಸಲಾದ 213 ಪುಟಗಳ ವರದಿ ಹೇಳಿದೆ.

  ಉತ್ತರ ಕೊರಿಯವು ನಕಲಿ ದಾಖಲೆಪತ್ರಗಳ ಆಧಾರದಲ್ಲಿ ಹೀಗೆ ಮಾಡಿದೆ ಹಾಗೂ ಸರಕು ರಶ್ಯ ಮತ್ತು ಚೀನಾಗಳಿಂದ ರಫ್ತಾಗುತ್ತಿದೆ ಎಂಬುದಾಗಿ ಈ ದಾಖಲೆ ಪತ್ರಗಳಲ್ಲಿ ತೋರಿಸಲಾಗಿದೆ ಎಂದಿದೆ.

ಉತ್ತರ ಕೊರಿಯದ ಪರಮಾಣು ಮತ್ತು ಪ್ರಕ್ಷೇಪಕ ಕ್ಷಿಪಣಿ ಕಾರ್ಯಕ್ರಮಗಳಿಗೆ ಹರಿದು ಬರುವ ಹಣವನ್ನು ನಿರ್ಬಂಧಿಸುವುದಕ್ಕಾಗಿ 15 ಸದಸ್ಯರ ಭದ್ರತಾ ಮಂಡಳಿಯು 2006ರಿಂದ ಆ ದೇಶದ ಮೇಲೆ ದಿಗ್ಬಂಧನಗಳನ್ನು ವಿಧಿಸುತ್ತಾ ಬಂದಿದೆ. ದಿಗ್ಬಂಧನಕ್ಕೆ ಪೂರಕವಾಗಿ ಆ ದೇಶದ ಕಲ್ಲಿದ್ದಲು, ಕಬ್ಬಿಣದ ಅದಿರು, ಸೀಸದ ಅದಿರು, ಜವಳಿ ಮತ್ತು ಸಾಗರೋತ್ಪನ್ನಗಳ ರಫ್ತನ್ನು ನಿಷೇಧಿಸಲಾಗಿದೆ. ಅದೇ ವೇಳೆ, ಕಚ್ಚಾ ತೈಲ ಮತ್ತು ಶುದ್ಧೀಕೃತ ಪೆಟ್ರೋಲಿಯಂ ಉತ್ಪನ್ನಗಳ ಆಮದಿನ ಮೇಲೆ ಮಿತಿ ಹೇರಲಾಗಿದೆ.

ಸಿರಿಯ, ಮ್ಯಾನ್ಮಾರ್‌ಗೆ ಶಸ್ತ್ರಾಸ್ತ್ರಗಳ ರಫ್ತು

ಸಿರಿಯ ಮತ್ತು ಮ್ಯಾನ್ಮಾರ್ ನಡುವಿನ ಪ್ರಕ್ಷೇಪಕ ಕ್ಷಿಪಣಿ ಸಹಕಾರದ ಬಗ್ಗೆಯೂ ತಾವು ತನಿಖೆ ನಡೆಸಿರುವುದಾಗಿ ವಿಶ್ವಸಂಸ್ಥೆಯ ವೀಕ್ಷಕರು ಹೇಳಿದ್ದಾರೆ.

2012 ಮತ್ತು 2017ರ ನಡುವೆ ಸಿರಿಯದ ವೈಜ್ಞಾನಿಕ ಅಧ್ಯಯನಗಳು ಮತ್ತು ಸಂಶೋಧನಾ ಕೇಂದ್ರಕ್ಕೆ ಉತ್ತರ ಕೊರಿಯದಿಂದ 40ಕ್ಕೂ ಅಧಿಕ ಬಾರಿ ಸರಕು ಸಾಗಣೆಯಾಗಿರುವುದನ್ನು ಪತ್ತೆಹಚ್ಚಿರುವುದಾಗಿಯೂ ಅವರು ಹೇಳಿದ್ದಾರೆ. ಈ ಮೊದಲು ಈ ಸರಕು ಸಾಗಣೆ ವರದಿಯಾಗಿಲ್ಲ.

ಸಿರಿಯದ ವೈಜ್ಞಾನಿಕ ಅಧ್ಯಯನಗಳು ಮತ್ತು ಸಂಶೋಧನಾ ಕೇಂದ್ರವು ದೇಶದ ರಾಸಾಯನಿಕ ಅಸ್ತ್ರ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿಕೊಂಡಿದೆ.

ಮ್ಯಾನ್ಮಾರ್ ಉತ್ತರ ಕೊರಿಯದಿಂದ ಪ್ರಕ್ಷೇಪಕ ಕ್ಷಿಪಣಿ ವ್ಯವಸ್ಥೆಗಳು ಹಾಗೂ ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳನ್ನು ಪಡೆದುಕೊಂಡಿದೆ ಎನ್ನುವುದಕ್ಕೆ ತನ್ನ ಬಳಿ ಪುರಾವೆಯಿದೆ ಎಂಬುದಾಗಿ ಒಂದು ದೇಶ ಹೇಳಿದೆ ಎಂದು ವರದಿ ಹೇಳಿದೆ. ಆ ದೇಶವನ್ನು ವಿಶ್ವಸಂಸ್ಥೆಯ ವೀಕ್ಷಕರು ಗುರುತಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X