Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಗೆಲುವಿನ ಅಭಿಯಾನ ಮುಂದುವರಿಸುವ...

ಭಾರತಕ್ಕೆ ಗೆಲುವಿನ ಅಭಿಯಾನ ಮುಂದುವರಿಸುವ ಗುರಿ

ಹರಿಣ ಪಡೆಗೆ ಗಾಯದ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ3 Feb 2018 11:41 PM IST
share
ಭಾರತಕ್ಕೆ ಗೆಲುವಿನ ಅಭಿಯಾನ ಮುಂದುವರಿಸುವ ಗುರಿ

ಸೆಂಚೂರಿಯನ್,ಫೆ.3: ದಕ್ಷಿಣ ಆಫ್ರಿಕ ವಿರುದ್ಧ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ರವಿವಾರ ಇಲ್ಲಿ ನಡೆಯಲಿರುವ ಎರಡನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಗೆಲುವಿನ ಅಭಿಯಾನ ಮುಂದುವರಿಸಲು ಎದುರು ನೋಡುತ್ತಿದೆ.

  ಕಳೆದ ಪಂದ್ಯದಲ್ಲಿ ಸೋಲಿನಿಂದ ಆಘಾತಗೊಂಡಿರುವ ದಕ್ಷಿಣ ಆಫ್ರಿಕ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಕಂಡು ಬಂದಿದೆ.ತಂಡದ ನಾಯಕ ಎಫ್ ಡು ಪ್ಲೆಸಿಸ್ ಗಾಯಾಳುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ. ಸ್ಟಾರ್ ಆಟಗಾರ ಎಬಿಡಿ ವಿಲಿಯರ್ಸ್ ಅವರು ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಗಾಯಗೊಂಡು ತಂಡದಿಂದ ಹೊರಗುಳಿದಿದ್ದರು. ಇದೀಗ ನಾಯಕ ಪ್ಲೆಸಿಸ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ ತಂಡಕ್ಕೆ ಇನ್ನಷ್ಟು ಸಮಸ್ಯೆ ಉಂಟಾಗಿದೆ.

ಭಾರತ ಕಳೆದ ಪಂದ್ಯದಲ್ಲಿ ಆಫ್ರಿಕ ವಿರುದ್ಧ 6 ವಿಕೆಟ್‌ಗಳ ಗೆಲುವಿನೊಂದಿಗೆ 6 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಇದರೊಂದಿಗೆ ಆಫ್ರಿಕ ತಂಡದ 17 ಪಂದ್ಯಗಳ ಗೆಲುವಿನ ಅಜೇಯ ಓಟಕ್ಕೆ ತಡೆ ಬಿದ್ದಿದೆ. ಕಳೆದ ಫೆಬ್ರವರಿಯಲ್ಲಿ ಪೋರ್ಟ್ ಎಲಿಜಬೆತ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕ ಸೋಲು ಅನುಭವಿಸಿತ್ತು. ಆ ಬಳಿಕ ಗೆಲುವಿನ ಹಳಿಗೆ ಮರಳಿದ್ದ ದಕ್ಷಿಣ ಆಫ್ರಿಕ ಇದೇ ಮೊದಲ ಬಾರಿ ಸೋಲು ಅನುಭವಿಸಿದೆ.

  ಈ ಸೋಲಿನ ಬೆನ್ನಲ್ಲೇ ದಕ್ಷಿಣ ಆಫ್ರಿಕ ತಂಡದ ನಾಯಕ ಪ್ಲೆಸಿಸ್ ಕೈ ಬೆರಳಿಗೆ ಆಗಿರುವ ಗಾಯದಿಂದಾಗಿ ತಂಡದಿಂದ 6 ವಾರಗಳ ಕಾಲ ಹೊರಗುಳಿಯುವಂತಾಗಿದೆ. ಇದರಿಂದಾಗಿ ಪ್ಲೆಸಿಸ್ ಭಾರತ ವಿರುದ್ಧದ ಸರಣಿಯ ಉಳಿದ 5 ಏಕದಿನ ಮತ್ತು 3 ಪಂದ್ಯಗಳ ಟ್ವೆಂಟಿ-20 ಸರಣಿಗೆ ತಂಡದ ಸೇವೆಗೆ ಲಭ್ಯರಿಲ್ಲ.

 ಮೂರನೇ ಟೆಸ್ಟ್ ವೇಳೆ ಗಾಯಗೊಂಡಿದ್ದ ಡಿವಿಲಿಯರ್ಸ್‌ ಸರಣಿಯ ಮೂರು ಏಕದಿನ ಪಂದ್ಯಗಳಿಗೆ ಲಭ್ಯರಿಲ್ಲ. ಈ ಕಾರಣದಿಂದಾಗಿ ಆಫ್ರಿಕ ತಂಡಕ್ಕೆ ಹಿನ್ನ್ನಡೆಯಾಗಿದೆ. ಬ್ಯಾಟ್ಸ್ ಮನ್ ಫರ್ಹಾನ್ ಬೆಹಾರ್ದಿನ್ ಅವರನ್ನು ಪ್ಲೆಸಿಸ್‌ರಿಂದ ತೆರವಾಗಿರುವ ಜಾಗಕ್ಕೆ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

ವಿಕೆಟ್ ಕೀಪರ್ ಹೆನ್ರಿಕ್ ಕ್ಲಾಸೆನ್ ಅವರು ದಕ್ಷಿಣ ಆಫ್ರಿಕದ ದೇಶೀಯ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಗಳಿಸಿದ 3ನೇ ಆಟಗಾರ. ಇವರನ್ನು ಕ್ವಿಂಟನ್ ಡಿ ಕಾಕ್ ಬದಲಿಯಾಗಿ ತಂಡದಲ್ಲಿ ಸೇರಿಸಿಕೊಳ್ಳಲಾಗಿತ್ತು. ಡಿ ಕಾಕ್ ಅವರು 49 ಎಸೆತಗಳಲ್ಲಿ 34 ರನ್ ಗಳಿಸಿದ್ದರು. ಫಾರ್ಮ್ ಕಳೆದುಕೊಂಡಿರುವ ಡಿ ಕಾಕ್ ಅವರಿಗೆ ಮುಂದಿನ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆ ಇಲ್ಲ. ಕ್ಲಾಸೆನ್ ಅವಕಾಶ ಪಡೆಯುವುದು ಬಹುತೇಕ ಖಚಿತವಾಗಿದೆ.

   ಮೂರನೇ ಟೆಸ್ಟ್‌ನಲ್ಲಿ ಗೆಲುವು ದಾಖಲಿಸಿದ ಟೀಮ್ ಇಂಡಿಯಾ ಇದೇ ಫಾರ್ಮ್‌ನ್ನು ಮುಂದುವರಿಸಿ ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸಿತ್ತು. ಕಿಂಗ್ಸ್‌ಮೇಡ್‌ನಲ್ಲಿ ಗೆಲುವಿನ ಖಾತೆ ತೆರೆದಿತ್ತು. ಸೆಂಚೂರಿಯನ್‌ನಲ್ಲಿ ಭಾರತ ವಿವಿಧ ತಂಡಗಳ ವಿರುದ್ಧ 11 ಏಕದಿನ ಪಂದ್ಯಗಳಲ್ಲಿ ಆಡಿತ್ತು. 4 ಪಂದ್ಯಗಳಲ್ಲಿ ಜಯ ಹಾಗೂ 5 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. 2003ರಲ್ಲಿ ಪಾಕಿಸ್ತಾನ ವಿರುದ್ಧ ವಿಶ್ವಕಪ್‌ನಲ್ಲಿ ಜಯ ಗಳಿಸಿತ್ತು.

ದಕ್ಷಿಣ ಆಫ್ರಿಕ ವಿರುದ್ಧ 5 ಪಂದ್ಯಗಳಲ್ಲಿ ಭಾರತ ಆಡಿತ್ತು. 2 ಪಂದ್ಯಗಳಲ್ಲಿ ಜಯ ಗಳಿಸಿತ್ತು. 1ರಲ್ಲಿ ಸೋಲು ಅನುಭವಿಸಿತ್ತು. 2001-02ರಲ್ಲಿ ಆಫ್ರಿಕ ವಿರುದ್ಧ ತ್ರಿಕೋನ ಸರಣಿಯಲ್ಲಿ ಕೊನೆಯ ಬಾರಿ ಆಡಿತ್ತು. 2006-07 ಮತ್ತು 2010-11 ಪ್ರವಾಸ ಸರಣಿುಲ್ಲಿ ಭಾರತ ಸೋಲು ಅನುಭವಿಸಿತ್ತು.

ಭಾರತ

ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಎಂ.ಎಸ್.ಧೋನಿ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಜಸ್‌ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ಶಾರ್ದುಲ್ ಠಾಕೂರ್.

ದಕ್ಷಿಣ ಆಫ್ರಿಕ

ಏಡೆನ್ ಮರ್ಕರಮ್(ಹಂಗಾಮಿ ನಾಯಕ), ಹಾಶಿಮ್ ಅಮ್ಲ, ಕ್ವಿಂಟನ್ ಡಿಕಾಕ್(ವಿಕೆಟ್ ಕೀಪರ್), ಜೆ.ಪಿ.ಡುಮಿನಿ, ಇಮ್ರಾನ್ ತಾಹಿರ್, ಡೇವಿಡ್ ಮಿಲ್ಲರ್, ಮೊರ್ನೆ ಮೊರ್ಕೆಲ್, ಕ್ರಿಸ್ ಮೋರಿಸ್, ಲುಂಗಿಸಾನಿ ಗಿಡಿ, ಆ್ಯಂಡ್ಲೆ ಫೆಹ್ಲುಕ್ವಾಯೊ, ಕಾಗಿಸೊ ರಬಾಡ, ತಾಬ್ರೈದ್ ಶಂಸಿ, ಹೆನ್ರಿಕ್ ಕ್ಲಾಸೆನ್, ಖಯೆಲಿಹಿಲ್ಲೆ ರೊಂಡೊ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X