Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಮಕೃಷ್ಣ ಮಿಷನ್‌ನಿಂದ ಮೋರ್ಗನ್ಸ್ ಗೇಟ್,...

ರಾಮಕೃಷ್ಣ ಮಿಷನ್‌ನಿಂದ ಮೋರ್ಗನ್ಸ್ ಗೇಟ್, ಮಹಾಕಾಳಿಪಡ್ಪುನಲ್ಲಿ ಸ್ವಚ್ಛತೆ

ವಾರ್ತಾಭಾರತಿವಾರ್ತಾಭಾರತಿ4 Feb 2018 7:52 PM IST
share
ರಾಮಕೃಷ್ಣ ಮಿಷನ್‌ನಿಂದ ಮೋರ್ಗನ್ಸ್ ಗೇಟ್, ಮಹಾಕಾಳಿಪಡ್ಪುನಲ್ಲಿ ಸ್ವಚ್ಛತೆ

ಮಂಗಳೂರು, ಫೆ. 4: ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ 4ನೆ ಹಂತದ 14ನೆ ವಾರದ ಸ್ವಚ್ಛತಾ ಕಾರ್ಯಕ್ರಮ ರವಿವಾರ ಮೋರ್ಗನ್ಸ್ ಗೇಟ್, ಮಹಾಕಾಳಿಪಡ್ಪುನಲ್ಲಿ ನಡೆಯಿತು.

ಬೆಳಗ್ಗೆ 7:30ಕ್ಕೆ ರಾಗತರಂಗ ಸಂಸ್ಥೆಯ ಮುಖ್ಯಸ್ಥ ಸದಾನಂದ ಉಪಾಧ್ಯಾಯ ಹಾಗೂ ಸೀತಾರಾಮ್ ಎ. ಜಂಟಿಯಾಗಿ ಅಭಿಯಾನವನ್ನು ಶುಭಾರಂಭಗೊಳಿಸಿದರು. ಈ ಸಂದರ್ಭದಲ್ಲಿ ಕೆ.ಪ್ರಸಾದ್, ಪಿ.ಎನ್.ಭಟ್, ಸುರೇಶ್ ಶೆಟ್ಟಿ, ಲೆಕ್ಕಪರಿಶೋಧಕ ಕೆ. ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಸುಮಾರು 250 ಮಂದಿ ಕಾರ್ಯಕರ್ತರು ಆರು ಗುಂಪುಗಳಾಗಿ ವಿಂಗಡಿಸಿಕೊಂಡು ಮಹಾಕಾಳಿಪಡ್ಪು ರೈಲ್ವೆ ಕ್ರಾಸಿಂಗ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶ್ರಮದಾನ ಕೈಗೊಂಡರು. ಸಂತ ಅಲೋಸಿಯಸ್ ಕಾಲೇಜಿನ ಸಹಾಯ ಬಳಗದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಡಾ. ಈಶ್ವರ್ ಭಟ್ ನೇತೃತ್ವದಲ್ಲಿ ರೈಲ್ವೆ ಕ್ರಾಸಿಂಗ್‌ನಿಂದ ಮೋರ್ಗನ್ಸ್ ಗೇಟ್ ಮುಖ್ಯರಸ್ತೆಯವರೆಗಿನ ರಸ್ತೆ, ತೋಡುಗಳನ್ನು ಸ್ವಚ್ಛಗೊಳಿಸಿರು.

ಪ್ರೊ. ಶೇಷಪ್ಪ ಅಮೀನ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮಹಾಕಾಳಿಪಡ್ಪುನಿಂದ ಹೆದ್ದಾರಿಯತ್ತ ಸಾಗುವ ರಸ್ತೆಯಲ್ಲಿ ಸ್ವಚ್ಛತೆಯನ್ನು ನಡೆಸಿದರು. ಸ್ವಚ್ಛ ಮಂಗಳೂರು ಕಾರ್ಯಕರ್ತರು ರೈಲ್ವೇ ಕ್ರಾಸಿಂಗ್ ನಾಲ್ಕು ಬದಿಗಳಲ್ಲಿ ಸೇರಿಕೊಂಡಿದ್ದ ಹುಲ್ಲು, ಕಸ, ಪ್ಲಾಸ್ಟಿಕ್, ಬಾಟಲ್ ಸೇರಿದಂತೆ ಎರಡು ಟಿಪ್ಪರ್‌ಗಳಷ್ಟು ತ್ಯಾಜ್ಯವನ್ನು ಹೆಕ್ಕಿ ಶುಚಿಗೊಳಿಸಿದರು. ದಿನೇಶ್ ಕರ್ಕೇರಾ ಹಾಗೂ ವಿಠಲದಾಸ ಪ್ರಭು ಜೆಸಿಬಿ ಉಪಯೋಗಿಸಿಕೊಂಡು ರಸ್ತೆಯಲ್ಲಿ ಸೇರಿದ್ದ ಲೋಡ್‌ಗಟ್ಟಲೆ ಮಣ್ಣನ್ನು ತೆಗೆದು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಆಂಟನಿ ವೇಸ್ಟ್ ಕಾರ್ಮಿಕರು ಈ ಬಾರಿಯ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಕಾರ್ಯಕರ್ತರೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.

ಮಾರ್ಗ ವಿಭಾಜಕ ಅಳವಡಿಕೆ: ಪ್ರತಿನಿತ್ಯ ಸುಮಾರು ಐವತ್ತಕ್ಕೂ ಅಧಿಕ ಬಾರಿ ಗೇಟ್ ಹಾಕಲಾಗುವ ಮಹಾಕಾಳಿಪಡ್ಪು ರೈಲ್ವೇ ಕ್ರಾಸಿಂಗ್‌ನಲ್ಲಿ ಪ್ರಯಾಣಿಕರ ವಾಹನಗಳ ಅವ್ಯವಸ್ಥಿತ ಸಾಲು, ಅದರಿಂದ ಉಂಟಾಗುವ ವಾದ-ವಿವಾದಗಳು, ಜೊತೆಗೆ ಸ್ಥಳೀಯರ ಸಮಸ್ಯೆಗಳನ್ನು ಕಂಡು ದಿಲ್‌ರಾಜ ಆಳ್ವ ಹಾಗೂ ಸ್ವಚ್ಛ ಮಂಗಳೂರು ಕಾರ್ಯಕರ್ತರು ಅಲ್ಲಿ ಹೋಗಿ ಸರ್ವೆ ನಡೆಸಿದರು. ಜೊತೆಗೆ ಸ್ಥಳೀಯರೊಂದಿಗೆ ಸಂವಾದ ನಡೆಸಿ ಈ ಸಮಸ್ಯೆಗಳಿಗೆ ಒಂದಿಷ್ಟು ಪರಿಹಾರ ನೀಡಬೇಕೆಂದು ಉದ್ದೇಶಿಸಲಾಯಿತು.

ರವಿವಾರ ಅಲ್ಲಲ್ಲಿ ಸುಮಾರು 20 ಕಬ್ಬಿಣದ ರಾಡ್‌ಗಳನ್ನು ರಸ್ತೆಗೆ ಡ್ರಿಲ್ ಮಾಡಿ ಅಳವಡಿಸಲಾಯಿತು. ಕಾರ್ಯಕರ್ತರಾದ ಸಂದೀಪ್ ಕೋಡಿಕಲ್, ಸುಭೋದಯ ಆಳ್ವ, ಸುಜಿತ್ ಪ್ರತಾಪ್, ಅಕ್ಷಿತ್ ಅತ್ತಾವರ ಹಾಗೂ ಸ್ಥಳೀಯರ ಸಹಾಯದಿಂದ ಈ ಕಾರ್ಯವನ್ನು ನೆರವೇರಿಸಲಾಯಿತು. ಮುಂದಿನ ದಿನಗಳಲ್ಲಿ ರೈಲ್ವೆ ಕ್ರಾಸಿಂಗ್‌ನಲ್ಲಿ ವ್ಯವಸ್ಥಿತವಾಗಿ ಸಾಲುಗಳಲ್ಲಿ ನಿಲ್ಲುವ ಕುರಿತಂತೆ ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸುವ ಕುರಿತಂತೆ ಜಾಗೃತಿಯನ್ನುಂಟು ಮಾಡಲು ಜಾಗೃತಿ ಸಪ್ತಾಹವನ್ನು ಹಮ್ಮಿಕೊಳ್ಳಲು ಯೋಜಿಸಲಾಯಿತು.

ಬಸ್ ತಂಗುದಾಣದ ಶುಚಿತ್ವ: ಜಪ್ಪಿನಮೊಗರುನಲ್ಲಿನ ಹೆದ್ದಾರಿ ಪಕ್ಕದ ಬಸ್ ತಂಗುದಾಣವನ್ನು ರವಿವಾರ ಸ್ವಚ್ಛಗೊಳಿಸಲಾಯಿತು. ಮುಖೇಶ್ ಆಳ್ವ, ಆನಂದ ಅಡ್ಯಾರ್ ಹಾಗೂ ಹಲವು ಕಾರ್ಯಕರ್ತರು ಬಸ್ ತಂಗುದಾಣಕ್ಕೆ ಅಂಟಿಸಿದ್ದ ಭಿತ್ತಿಚಿತ್ರ ಹಾಗೂ ಪೋಸ್ಟರ್‌ಗಳನ್ನು ಕಿತ್ತುಹಾಕಿದರು. ನಂತರ ಗುಡಿಸಿ, ನೀರಿನಿಂದ ತೊಳೆದು, ಸುಣ್ಣ ಬಣ್ಣ ಹಚ್ಚಿ ಸ್ವಚ್ಛಗೊಳಿಸಿದರು.

ಸಂತ ಅಲೋಶಿಯಸ್ ಕಾಲೇಜಿನ ಪ್ರಾಧ್ಯಾಪಕ ಅರುಣಾ ಕಲ್ಕೂರ್, ಸೋನಾಲ್ ಡಿಸೋಜಾ, ಫೆಲಿಸಿಯಾ ಮಾರ್ಟಿಜ್, ಸಾಮಾಜಿಕ ಕಾರ್ಯಕರ್ತ ಸೌರಜ್, ವಿಶಿಷ್ಟ ಚೇತನ ಜಗನ್, ಚೇತನಾ ಗಡಿಯಾರ್ ಸೇರಿದಂತೆ ಯುವಕ ಯುವತಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಸ್ವಚ್ಛತಾ ಅಭಿಯಾನದ ತರುವಾಯ ಕಾರ್ಯಕರ್ತರಿಗೆ ಶ್ರೀ ಆದಿಮಹೇಶ್ವರಿ ದೇವಸ್ಥಾನದಲ್ಲಿ ಉಪಾಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಈ ಅಭಿಯಾನಕ್ಕೆ ಎಂಆರ್‌ಪಿಎಲ್ ಸಂಸ್ಥೆ ಪ್ರಾಯೋಜಕತ್ವ ನೀಡಿ ಸಹಕರಿಸುತ್ತಿದೆ.  

ನಿತ್ಯ ಜಾಗೃತಿ: ರಾಮಕೃಷ್ಣ ಮಿಷನ್ ವತಿಯಿಂದ ಮಂಗಳೂರು ನಗರ ಪ್ರದೇಶದಲ್ಲಿ ಸ್ವಚ್ಛತೆಯ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಸಲುವಾಗಿ ಕಳೆದ ಮೂರು ತಿಂಗಳಿಂದ ಪ್ರತಿನಿತ್ಯ ಸುಮಾರು ನೂರು ಮನೆ ಹಾಗೂ ಅಂಗಡಿಗಳಿಗೆ ಭೇಟಿ ನೀಡಲಾಗುತ್ತಿದೆ. ಕಳೆದ ಜನವರಿ ತಿಂಗಳಲ್ಲಿ ಸುಮಾರು 20 ಸ್ವಚ್ಛತಾ ತಂಡಗಳಿಂದ 20 ಪ್ರದೇಶಗಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇಂದಿನ ವರೆಗೆ ಸುಮಾರು ಐದು ಸಾವಿರ ಮನೆಗಳನ್ನು ಸಂಪರ್ಕಿಸಲಾಯಿತು.

ಸ್ವಚ್ಛತಾ ಅಭಿಯಾನದ ಮುಖ್ಯ ಸಂಯೋಜಕ ಉಮಾನಾಥ್ ಕೋಟೆಕಾರ್ ಜಾಗೃತಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X