Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನಪ್ರಯಾಣ ದರ ಆಟೊರಿಕ್ಷಾ ದರಕ್ಕಿಂತಲೂ...

ವಿಮಾನಪ್ರಯಾಣ ದರ ಆಟೊರಿಕ್ಷಾ ದರಕ್ಕಿಂತಲೂ ಅಗ್ಗ : ಕೇಂದ್ರ ಸಚಿವ ಜಯಂತ್ ಸಿನ್ಹ

ವಾರ್ತಾಭಾರತಿವಾರ್ತಾಭಾರತಿ4 Feb 2018 8:05 PM IST
share
ವಿಮಾನಪ್ರಯಾಣ ದರ ಆಟೊರಿಕ್ಷಾ ದರಕ್ಕಿಂತಲೂ ಅಗ್ಗ : ಕೇಂದ್ರ ಸಚಿವ ಜಯಂತ್ ಸಿನ್ಹ

ಹೊಸದಿಲ್ಲಿ, ಫೆ.4: ವಿಶ್ವದಲ್ಲೇ ಅತ್ಯಂತ ಕನಿಷ್ಟ ವಿಮಾನಯಾನ ದರ ಭಾರತದಲ್ಲಿದೆ. ನಮ್ಮ ದೇಶದಲ್ಲಿ ಆಟೋರಿಕ್ಷಾದಲ್ಲಿ ಪ್ರಯಾಣಿಸುವದಕ್ಕಿಂತಲೂ ಕಡಿಮೆ ದರದಲ್ಲಿ ವಿಮಾನದಲ್ಲಿ ಪ್ರಯಾಣಿಸಬಹುದು ಎಂದು ನಾಗರಿಕ ವಿಮಾನಯಾನ ಇಲಾಖೆಯ ಸಹಾಯಕ ಸಚಿವ ಜಯಂತ್ ಸಿನ್ಹಾ ಬಣ್ಣಿಸಿದ್ದಾರೆ.

ಈ ಹೇಳಿಕೆ ಅಸಂಬದ್ಧ ಎಂದು ಕೆಲವರು ಹೇಳಬಹುದು. ಆದರೆ ಇಂದೋರ್‌ನಿಂದ ದಿಲ್ಲಿಗೆ ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ಪ್ರತೀ ಕಿ.ಮೀ.ಗೆ ಕೇವಲ ಐದು ರೂಪಾಯಿ ಪಾವತಿಸಬೇಕು. ಆದರೆ ಆಟೊರಿಕ್ಷಾದಲ್ಲಿ ಪ್ರತೀ ಕಿ.ಮೀ.ಗೆ 8ರಿಂದ 10 ರೂಪಾಯಿ ಪಾವತಿಸಬೇಕಾಗುತ್ತದೆ ಎಂದು ಸಚಿವರು ವಿವರ ನೀಡಿದ್ದಾರೆ.

    ಇದೀಗ ಭಾರತದಲ್ಲಿ ಬಹಳಷ್ಟು ಮಂದಿ ವಿಮಾನ ಪ್ರಯಾಣದತ್ತ ಒಲವು ತೋರುತ್ತಿದ್ದಾರೆ. ಚಪ್ಪಲ್ ಧರಿಸಿದವರು ಕೂಡಾ ಈಗ ವಿಮಾನದಲ್ಲಿ ಪ್ರಯಾಣಿಸಬಹುದು ಎಂದು ಕೆಲ ದಿನಗಳ ಹಿಂದೆ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯಿಸಿದ್ದರು. ನಾಲ್ಕು ವರ್ಷಗಳ ಹಿಂದೆ ದೇಶದಲ್ಲಿ ವಿಮಾನದಲ್ಲಿ ಪ್ರಯಾಣಿಸುವವರ ಸಂಖ್ಯೆ 11 ಕೋಟಿ ಆಗಿತ್ತು. ಆದರೆ ಈ ಆರ್ಥಿಕ ವರ್ಷಾಂತ್ಯದಲ್ಲಿ ಇದು 20 ಕೋಟಿಗೇರುವ ನಿರೀಕ್ಷೆಯಿದೆ . ಮುಂದಿನ ವರ್ಷಗಳಲ್ಲಿ ವಿಮಾನದಲ್ಲಿ ಪ್ರಯಾಣಿಸುವವರ ಸಂಖ್ಯೆ 100 ಕೋಟಿಗೆ ತಲುಪಬೇಕು ಎಂಬುದು ಸರಕಾರದ ಆಶಯವಾಗಿದೆ ಎಂದು ಜಯಂತ್ ಸಿನ್ಹ ತಿಳಿಸಿದರು. ಪಕೋಡಾ ಮಾರಿ ದಿನಕ್ಕೆ 200 ರೂ. ಸಂಪಾದಿಸುವ ವ್ಯಕ್ತಿಯನ್ನು ಉದ್ಯೋಗಿ ಎಂದು ಪರಿಗಣಿಸಬಹುದು ಎಂಬ ಪ್ರಧಾನಿ ಮೋದಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು, ಮಾಧ್ಯಮಗಳಲ್ಲಿ ಇಂದಿನ ದಿನಗಳಲ್ಲಿ ‘ಪಕೋಡಾ ಆರ್ಥಿಕತೆ’ಯ ಬಗ್ಗೆ ಮಾತನಾಡಲಾಗುತ್ತಿದೆ. ಆದರೆ ಪಕೋಡಾ ಮಾರುವವರಿಗೆ ಉದ್ಯಮಿಗಳಾಗಲು ಅವಕಾಶ ಮಾಡಿಕೊಟ್ಟರೆ ಮುಂದಿನ ದಿನದಲ್ಲಿ ಅವರೂ ಕೂಡಾ ಮೆಕ್‌ಡೊನಾಲ್ಡ್ ಸರಣಿ ಆಹಾರ ಮಳಿಗೆಯಂತೆ ಕಾರ್ಯ ನಿರ್ವಹಿಸಬಹುದು ಎಂದರು.

ಉದ್ಯಮಿಗಳು ಮುಂದೆ ಬಂದರೆ ದೇಶದಲ್ಲಿ ಪ್ರಯಾಣಿಕರ ಡ್ರೋನ್ ವಿಮಾನ, ಹೆಲಿಕಾಪ್ಟರ್ ಟ್ಯಾಕ್ಸಿ , ಏರ್-ರಿಕ್ಷಾ ಮುಂತಾದ ಇಲೆಕ್ಟ್ರಿಕ್ ವಾಹನಗಳ ಸೇವೆ ಆರಂಭಗೊಂಡು ಸಂಚಾರ ದಟ್ಟಣೆಯ ಸಮಸ್ಯೆಗೆ ಮುಕ್ತಿ ದೊರಕಬಹುದು ಎಂದು ಜಯಂತ್ ಸಿನ್ಹಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X