Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಅಗತ್ಯ ಔಷಧಿಗಳು ಇವೆಯೇ?: ಈ...

ಭಾರತದಲ್ಲಿ ಅಗತ್ಯ ಔಷಧಿಗಳು ಇವೆಯೇ?: ಈ ಬಗ್ಗೆ ಅಧ್ಯಯನವೊಂದು ಹೇಳುವುದೇನು?

ವಾರ್ತಾಭಾರತಿವಾರ್ತಾಭಾರತಿ4 Feb 2018 8:37 PM IST
share
ಭಾರತದಲ್ಲಿ ಅಗತ್ಯ ಔಷಧಿಗಳು ಇವೆಯೇ?: ಈ ಬಗ್ಗೆ ಅಧ್ಯಯನವೊಂದು ಹೇಳುವುದೇನು?

ಮುಂಬೈ,ಫೆ.4: ಸರಕಾರವು ಔಷಧಿಗಳನ್ನು ವ್ಯಾಪಕವಾಗಿ ಲಭ್ಯವಾಗಿಸಲು ಸಾವಿರಾರು ಔಷಧಿಗಳಿಗೆ ಅನುಮತಿ ನೀಡುತ್ತಿದೆಯಾದರೂ ಭಾರತೀಯರು ಅಗತ್ಯ ಔಷಧಿಗಳ ಲಭ್ಯತೆಯ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಬ್ರಿಟನ್‌ನ ನ್ಯೂಕ್ಯಾಸಲ್ ವಿವಿ, ಮುಂಬೈನ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ‘ಲಕ್ಷ’ ಹಾಗೂ ಟಿಸಿಎಸ್ ಜಂಟಿಯಾಗಿ ಕೈಗೊಂಡಿದ್ದ ಅಧ್ಯಯನವು ಹೇಳಿದೆ.

ಈ ವರ್ಷದ ಜ.17ರ ಜರ್ನಲ್ ಆಫ್ ಗ್ಲೋಬಲ್ ಹೆಲ್ತ್‌ನಲ್ಲಿ ಪ್ರಕಟಗೊಂಡಿರುವ ಅಧ್ಯಯನವು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ತೋರಿಸಲಾಗಿರುವ ಔಷಧಿಗಳ ಬಳಕೆ ಮತ್ತು ಮಹಾರಾಷ್ಟ್ರದ 124 ಖಾಸಗಿ ಔಷಧಿ ಅಂಗಡಿಗಳಲ್ಲಿ ಆರು ಅಗತ್ಯ ಔಷಧಿಗಳ ಲಭ್ಯತೆಯನ್ನು ಪರಿಶೀಲಿಸಿತ್ತು.

ಭಾರತದ ದತ್ತಾಂಶ ಕೋಶಗಳಲ್ಲಿ ಹಲವಾರು ಔಷಧಿಗಳನ್ನು ಪಟ್ಟಿ ಮಾಡಲಾಗಿದ್ದರೂ, ಅವುಗಳ ಪೈಕಿ ಕೆಲವೇ ಔಷಧಿಗಳು ಮಾತ್ರ ಜನರ ಕೈಗೆಟಕುವ ಬೆಲೆಗಳಲ್ಲಿ ಖಾಸಗಿ ಫಾರ್ಮಸಿಗಳಲ್ಲಿ ಲಭ್ಯವಿರುವುದನ್ನು ಅಧ್ಯಯನವು ಕಂಡುಕೊಂಡಿದೆ.

ಭಾರತದ 2015ರ ಅಗತ್ಯ ಔಷಧಿಗಳ ರಾಷ್ಟ್ರೀಯ ಪಟ್ಟಿಯು 376 ಔಷಧಿಗಳನ್ನೊಳ ಗೊಂಡಿದೆ.

ಈ ಔಷಧಿಗಳು ದೇಶಾದ್ಯಂತ ಸಾರ್ವಜನಿಕ ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳಲ್ಲಿ ವ್ಯಾಪಕವಾಗಿ ಲಭ್ಯವಿರಬೇಕಿತ್ತು. ಆದರೆ ಸಾರ್ವಜನಿಕ ಆರೋಗ್ಯ ಕೇಂದ್ರ ಗಳಲ್ಲಿ ಸೀಮಿತ ಸಂಪನ್ಮೂಲಗಳ ಪೂರೈಕೆಯಿಂದಾಗಿ ರೋಗಿಗಳು ಖಾಸಗಿ ಔಷಧಿ ಅಂಗಡಿಗಳಿಗೆ ತೆರಳುವುದು ಅನಿವಾರ್ಯವಾಗಿದೆ ಮತ್ತು ಅಲ್ಲಿ ಔಷಧಿಗಳು ದುಬಾರಿ ಯಾಗಿವೆ ಎಂದು ನ್ಯೂಕ್ಯಾಸಲ್ ವಿವಿಯ ಡಾ.ಕಾಲಿನ್ ಮಿಲರ್ಡ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ತಾತ್ವಿಕವಾಗಿ ಜೆನರಿಕ್ ಔಷಧಿಗಳಿಗಾಗಿ ಭಾರತದ ವಿಶಾಲ ಮಾರುಕಟ್ಟೆಯಲ್ಲಿ ಪೈಪೋಟಿಯಿಂದಾಗಿ ಖಾಸಗಿ ಔಷಧಿ ಅಂಗಡಿಗಳಲ್ಲಿ ಅಗತ್ಯ ಔಷಧಿಗಳು ಜನರ ಕೈಗೆಟಕುವ ಬೆಲೆಗಳಲ್ಲಿ ದೊರೆಯಬೇಕಾಗಿತ್ತು ಎಂದರು. ಇದನ್ನು ಪರೀಕ್ಷಿಸಲು ಮುಂಬೈ ಸೇರಿದಂತೆ ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಲ್ಲಿಯ 124 ಖಾಸಗಿ ಔಷಧಿ ಅಂಗಡಿಗಳಲ್ಲಿ ಆರು ಅಗತ್ಯ ಔಷಧಿಗಳ ಲಭ್ಯತೆಯ ಬಗ್ಗೆ ಅಧ್ಯಯನ ನಡೆಸಲಾಗಿತ್ತು.

ಆರ್ಟೆಮಿಸಿನಿನ್(ಮಲೇರಿಯಾ),ಲಾಮಿವುಡಿನ್(ಎಚ್‌ಐವಿ/ಏಡ್ಸ್), ರಿಫಾಮ್‌ಪಿಸಿನ್ (ಕ್ಷಯರೋಗ ನಿಯಂತ್ರಣ), ಆಕ್ಸಿಟೊಸಿನ್(ಸಂತಾನೋತ್ಪತ್ತಿ), ಫ್ಲುಕ್ಸೆಟಿನ್(ಮಾನಸಿಕ ಆರೋಗ್ಯ) ಮತ್ತು ಮೆಟ್‌ಫಾರ್ಮಿನ್(ಮಧುಮೇಹ) ಇವು ಈ ಆರು ಅಗತ್ಯ ಔಷಧಿಗಳಾಗಿವೆ. ಈ ಪೈಕಿ ಮೆಟ್‌ಫಾರ್ಮಿನ್ ಮಾತ್ರ ಧಾರಾಳವಾಗಿ ಲಭ್ಯವಿದ್ದು, ಶೇ.64.5ರಷ್ಟು ಅಂಗಡಿಗಳಲ್ಲಿ ಮಾತ್ರ ರಿಫಾಮ್‌ಪಿಸಿನ್ ಲಭ್ಯವಿರುವುದು ಅಧ್ಯಯನದಲ್ಲಿ ಕಂಡುಬಂದಿತ್ತು. ಇತರ ನಾಲ್ಕು ಔಷಧಿಗಳು ಶೇ.50ಕ್ಕೂ ಕಡಿಮೆ ಅಂಗಡಿಗಳಲ್ಲಿ ಮಾತ್ರ ಲಭ್ಯವಿದ್ದವು. ಫಿಕ್ಸೆಡ್ ಡೋಸ್ ಕಾಂಬಿನೇಷನ್‌ನಲ್ಲಿ ಹಲವಾರು ಬ್ರಾಂಡ್‌ಗಳ ಔಷಧಿಗಳು ಅಂಗಡಿಗಳಲ್ಲಿ ಮಾರಾಟವಾಗುತ್ತಿರುವುದು ಇನ್ನೊಂದು ಕಳವಳದ ವಿಷಯವಾಗಿದೆ ಎಂದು ಮಿಲರ್ಡ್ ತಿಳಿಸಿದರು.

ಔಷಧಿಗಳ ತಯಾರಿಕೆಗೆ ಸರಕಾರದ ಒಪ್ಪಿಗೆ, ಅವುಗಳ ಪರಿಣಾಮಕಾರಿ ಗುಣ ಮತ್ತು ಬೆಲೆಗಳನ್ನು ಜನರು ಹೋಲಿಸುವಂತಾಗಲು ಗ್ರಾಹಕ ಸ್ನೇಹಿ ಕೇಂದ್ರ ದತ್ತಾಂಶ ಕೋಶವು ತುರ್ತಾಗಿ ಅಗತ್ಯವಿದೆ ಎಂದು ಅಧ್ಯಯನವು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X