ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು
![ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು](https://www.varthabharati.in/sites/default/files/images/articles/2018/02/5/download.jpg)
ಚಿಕ್ಕಮಗಳೂರು, ಫೆ.5: ಜೀಪೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಳಸ ಸಮೀಪದ ಸಂಸೆ ಎಂಬಲ್ಲಿ ನಡೆದಿದೆ.
ಮೃತನನ್ನು ಶಿವಮೊಗ್ಗ ಜಿಲ್ಲೆಯ ಗಾಜನೂರು ಎಂಬಲ್ಲಿನ ರಾಮು(28) ಮತ್ತು ಭರತ್(24) ಎಂದು ಗುರುತಿಸಲಾಗಿದೆ. ಈ ಇಬ್ಬರು ಕಳಸದ ರಾಜೇಶ್ ಎಂಬವರ ಜೆಸಿಬಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಅಗತ್ಯ ಕೆಲಸದ ನಿಮಿತ್ತ ಬೈಕ್ ನಲ್ಲಿ ಸಂಸೆ ಕಡೆಗೆ ಚಲಿಸುತ್ತಿದ್ದಾಗ ಎದುರಿನಿಂದ ಬಂದ ಜೀಪು ಢಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಅವಘಡದ ವೇಳೆ ರಾಮು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಭರತ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಮೃತಪಟ್ಟಿದ್ದಾರೆ. ಈ ಕುರಿತು ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story