Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೀವನ ದೊಡ್ಡದಾಗಿರಬೇಕು, ದೀರ್ಘವಲ್ಲ:...

ಜೀವನ ದೊಡ್ಡದಾಗಿರಬೇಕು, ದೀರ್ಘವಲ್ಲ: ಪಾಕ್ ದಾಳಿಯಲ್ಲಿ ಹುತಾತ್ಮರಾದ ಕ್ಯಾ.ಕಪಿಲ್ ರ ಫೇಸ್ಬುಕ್ ಬರಹ

ವಾರ್ತಾಭಾರತಿವಾರ್ತಾಭಾರತಿ5 Feb 2018 7:47 PM IST
share
ಜೀವನ ದೊಡ್ಡದಾಗಿರಬೇಕು, ದೀರ್ಘವಲ್ಲ: ಪಾಕ್ ದಾಳಿಯಲ್ಲಿ ಹುತಾತ್ಮರಾದ ಕ್ಯಾ.ಕಪಿಲ್ ರ ಫೇಸ್ಬುಕ್ ಬರಹ

ಹೊಸದಿಲ್ಲಿ, ಫೆ.5: ಇನ್ನು ಆರು ದಿನಗಳು ಕಳೆದಿದ್ದರೆ ಅವರು ತಮ್ಮ 23ನೇ ಹುಟ್ಟುಹಬ್ಬವನ್ನು ಆಚರಿಸುವವರಿದ್ದರು. ಆದರೆ ಪಾಕಿಸ್ತಾನಿ ಶೆಲ್ಲಿಂಗ್ ದಾಳಿಗೆ ಬಲಿಯಾಗುವ ಮೂಲಕ ಅವರು ವೀರ ಮರಣವನ್ನು ಪಡೆದರು.

ಇದು ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನದ ದಾಳಿಯಿಂದ ಹುತಾತ್ಮರಾದ ನಾಲ್ಕು ಭಾರತೀಯ ಯೋಧರಲ್ಲಿ ಒಬ್ಬರಾಗಿದ್ದ ಕ್ಯಾಪ್ಟನ್ ಕಪಿಲ್ ಕುಂಡು ಅವರ ಕತೆ. “ಜೀವನ ದೊಡ್ಡದಾಗಿರಬೇಕು, ದೀರ್ಘವಲ್ಲ” ಎಂಬ ಅವರ ಫೇಸ್‌ಬುಕ್ ಬರಹವೇ ಅವರು ವೀರತ್ವಕ್ಕೆ ಹಿಡಿದ ಕನ್ನಡಿಯಾಗಿದೆ.

ಕಪಿಲ್ ಕುಂಡು ಅವರ ಜೊತೆಗೆ 28ರ ಹರೆಯದ ರೈಫಲ್‌ಮ್ಯಾನ್ ರಾಮ ಅವತಾರ್, 22 ವರ್ಷ ಪ್ರಾಯದ ಶುಭಮ್ ಸಿಂಗ್ ಮತ್ತು 42 ವಯಸ್ಸಿನ ಹವಲ್ದಾರ್ ರೋಶನ್ ಸಿಂಗ್ ಕೂಡಾ ಹುತಾತ್ಮರಾದರು. ಪಾಕಿಸ್ತಾನಿ ಸೇನೆಯು ಹಾರಿಸಿದ ಐದರಿಂದ ಆರು ಟ್ಯಾಂಕ್ ನಿಗ್ರಹ ಕ್ಷಿಪಣಿಯಲ್ಲಿ ಕನಿಷ್ಟ ಒಂದು ಕ್ಷಿಪಣಿ ಭಾರತೀಯರಿದ್ದ ಬಂಕರ್‌ಗೆ ಅಪ್ಪಳಿಸಿದ ಪರಿಣಾಮ ಅದರಲ್ಲಿದ್ದ ಯೋಧರು ಸಾವನ್ನಪ್ಪಿದರು.

ಫೆಬ್ರವರಿ ಹತ್ತು ಕಪಿಲ್ ಕುಂಡು ಅವರ 23ನೇ ಜನ್ಮದಿನವಾಗಿತ್ತು. ಆ ದಿನವನ್ನು ಹರ್ಯಾಣದ ಪಟೌಡಿಯಲ್ಲಿ ವಾಸಿಸುವ ತಮ್ಮ ತಾಯಿ ಮತ್ತು ಸಹೋದರಿಯ ಜೊತೆಗೆ ಆಚರಿಸುವ ಸಲುವಾಗಿ ಕುಂಡು ರಜೆ ಪಡೆದುಕೊಂಡಿದ್ದು, ಟಿಕೆಟ್ ಕೂಡಾ ಖರೀದಿಸಿದ್ದರು. ಕೆಲವೇ ಸಮಯದ ಹಿಂದೆ ಅವರು ತಮ್ಮ ಗ್ರಾಮಕ್ಕೆ ಮರಳಿದ್ದಾಗ ಗ್ರಾಮಸ್ಥರು ಅವರನ್ನು ತಮ್ಮ ನಾಯಕ ಎಂದು ಕರೆದು ಮೆರವಣಿಗೆ ಮಾಡಿದ್ದರು. ಕುಂಡು ಅವರಿಗೆ ಕವಿತೆಗಳನ್ನು ಬರೆಯುವ ಹವ್ಯಾಸವಿತ್ತು. ‘ಓರ್ವ ಹುತಾತ್ಮ ಸೈನಿಕನ ಕತೆ’ ಎಂಬ ಕವಿತೆಯನ್ನು ಅವರು ಬರೆದಿದ್ದಾರೆ. ತಮ್ಮ ಫೇಸ್‌ಬುಕ್‌ನಲ್ಲಿ ಅನೇಕ ಸ್ಫೂರ್ತಿದಾಯಕ ಸಾಲುಗಳನ್ನು ಹಂಚಿಕೊಂಡಿರುವ ಕುಂಡು ಅವರು, “ನಿನಗೆ ಓಡಲಾಗದಿದ್ದರೆ ನಡೆ, ನಡೆಯಲಾಗದಿದ್ದರೆ ತೆವಳು. ಆದರೆ ನಿನ್ನ ಗುರಿಯನ್ನು ಮುಟ್ಟುವವರೆಗೆ ನಿಲ್ಲಬೇಡ ಎಂಬ ಸಾಲುಗಳು ನನಗೆ ಅತ್ಯಂತ ಅಚ್ಚುಮೆಚ್ಚು” ಎಂದು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X