ಸೇನೆಯ ಶೌರ್ಯದಲ್ಲಿ ಭಾರತೀಯರಿಗೆ ಸಂಪೂರ್ಣ ನಂಬಿಕೆಯಿದೆ: ರಾಜನಾಥ್ ಸಿಂಗ್
ಹೊಸದಿಲ್ಲಿ,ಫೆ.5: ಸೇನೆಯ ಶೌರ್ಯದಲ್ಲಿ ಭಾರತೀಯರಿಗೆ ಸಂಪೂರ್ಣ ನಂಬಿಕೆಯಿದೆ ಎಂದು ಗೃಹಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಇಲ್ಲಿ ಹೇಳಿದರು. ಜಮ್ಮು-ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನಿ ಸೈನಿಕರ ಶೆಲ್ ದಾಳಿಗಳಲ್ಲಿ ನಾಲ್ವರು ಭಾರತೀಯ ಯೋಧರು ಹುತಾತ್ಮರಾದ ಮರುದಿನ ಸಚಿವರ ಈ ಹೇಳಿಕೆ ಹೊರಬಿದ್ದಿದೆ.
ಸಂಸತ್ ಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಪಾಕ್ ದಾಳಿಗೆ ಉತ್ತರವಾಗಿ ಭಾರತವೇನು ಕ್ರಮಗಳನ್ನು ಕೈಗೊಳ್ಳಲಿದೆ ಎಂಬ ಪ್ರಶ್ನೆಗೆ, ಈ ದೇಶದ ಜನರಿಗೆ ಸೇನೆಯ ಶೌರ್ಯದಲ್ಲಿ ಸಂಪೂರ್ಣ ನಂಬಿಕೆಯಿದೆ ಎಂದು ಉತ್ತರಿಸಿದರು.
ರವಿವಾರ ಜಮ್ಮು-ಕಾಶ್ಮೀರದ ಪೂಂಛ್ ಮತ್ತು ರಾಜೌರಿ ಜಿಲ್ಲೆಗಳಲ್ಲಿನ ನಿಯಂತ್ರಣ ರೇಖೆಯಲ್ಲಿ ಪಾಕಿಗಳ ಭಾರೀ ಶೆಲ್ ದಾಳಿಯಲ್ಲಿ ಓರ್ವ ಯುವ ಕ್ಯಾಪ್ಟನ್ ಮತ್ತು ಮೂವರು ಯೋಧರು ಹುತಾತ್ಮರಾಗಿದ್ದರು. ಕನಿಷ್ಠ ನಾಲ್ವರು ಗಾಯಗೊಂಡಿದ್ದರು.
Next Story