Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಲ್ಡೀವ್ಸ್ ನಲ್ಲಿ ತುರ್ತು ಪರಿಸ್ಥಿತಿ...

ಮಾಲ್ಡೀವ್ಸ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ5 Feb 2018 10:31 PM IST
share
ಮಾಲ್ಡೀವ್ಸ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಮಾಲೆ,ಫೆ.5: ಪ್ರತಿಪಕ್ಷ ನಾಯಕರನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಮಾಲ್ದೀವ್ಸ್‌ನ ಸರ್ವೋಚ್ಚ ನ್ಯಾಯಾಲಯವು ಕಳೆದ ವಾರ ಆದೇಶಿಸಿದ ಬಳಿಕ ಈ ದ್ವೀಪರಾಷ್ಟ್ರದಲ್ಲಿ ತೀವ್ರಗೊಳ್ಳುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಅಧ್ಯಕ್ಷ ಅಬುಲ್ಲಾ ಯಮೀನ್ ಅವರು ಸೋಮವಾರ 15 ದಿನಗಳ ಅವಧಿಗೆ ತುರ್ತು ಸ್ಥಿತಿಯನ್ನು ಘೋಷಿಸಿದ್ದಾರೆ.

ಈ ಅವಧಿಯಲ್ಲಿ ಕೆಲವು ಹಕ್ಕುಗಳನ್ನು ನಿರ್ಬಂಧಿಸಲಾಗುವುದಾದರೂ ಸಾಮಾನ್ಯ ಚಟುವಟಿಕೆಗಳು, ಸೇವೆಗಳು ಮತ್ತು ಉದ್ಯಮಗಳಿಗೆ ಯಾವುದೇ ತೊಂದರೆಯಾ ಗುವುದಿಲ್ಲ. ಮಾಲ್ದೀವ್ಸ್‌ನ ಎಲ್ಲ ಪ್ರಜೆಗಳು ಮತ್ತು ಈ ದೇಶದಲ್ಲಿ ವಾಸವಿರುವ ಹಾಗೂ ಇಲ್ಲಿಗೆ ಭೇಟಿ ನೀಡಿರುವ ವಿದೇಶಿಯರ ಸುರಕ್ಷತೆಯನ್ನು ಕಾಯ್ದುಕೊಳ್ಳಲಾಗುವುದು ಎಂದು ಪ್ರಜೆಗಳಿಗೆ ಮತ್ತು ಅಂತರರಾಷ್ಟ್ರೀಯ ಸಮುದಾಯಕ್ಕೆ ಭರವಸೆಯನ್ನು ನೀಡಲು ಸರಕಾರವು ಬಯಸಿದೆ ಎಂದು ಅಧ್ಯಕ್ಷರ ಕಚೇರಿಯು ಹೇಳಿಕೆಯಲ್ಲಿ ತಿಳಿಸಿದೆ.

ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ

  ತುರ್ತು ಸ್ಥಿತಿಯು ಶಂಕಿತ ವ್ಯಕ್ತಿಗಳನ್ನು ಬಂಧಿಸಲು ಭದ್ರತಾ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ ಎಂದು ಮೂಲಗಳು ತಿಳಿಸಿವೆ. ದೇಶಭ್ರಷ್ಟ ಮಾಜಿ ಅಧ್ಯಕ್ಷ ಮುಹಮ್ಮದ್ ನಶೀದ್ ಸೇರಿದಂತೆ ಒಂಭತ್ತು ಪ್ರತಿಪಕ್ಷ ನಾಯಕರ ಬಿಡುಗಡೆಗೆ ಸರ್ವೋಚ್ಚ ನ್ಯಾಯಾಲಯವು ಆದೇಶಿಸಿದ ಐದು ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಹಿಂದೆ ಉಚ್ಚಾಟಿಸಲಾಗಿದ್ದ 12 ಸಂಸದರ ಸದಸ್ಯತ್ವ ಮರುಸ್ಥಾಪನೆಗೂ ನ್ಯಾಯಾಲಯವು ಆದೇಶಿಸಿತ್ತು.

ತುರ್ತು ಸ್ಥಿತಿಯ ಘೋಷಣೆಯು ಯಮೀನ್ ಅವರ ಹತಾಶೆಯ ಪ್ರತೀಕವಾಗಿದೆ. ಅದು ಕೇವಲ ಜನತೆಯ ಮತ್ತು ಸ್ವತಂತ್ರ ಸಂಸ್ಥೆಗಳ ವಿಶ್ವಾಸಕ್ಕೆ ಎರವಾಗಿರುವ ಪ್ರತ್ಯೇಕಿತ ವ್ಯಕ್ತಿಯನ್ನು ತೋರಿಸುತ್ತಿದೆ ಎಂದು ಸಂಸದೆ ಹಾಗೂ ಪ್ರತಿಪಕ್ಷ ಮಾಲ್ದಿವಿಯನ್ ಡೆಮಾಕ್ರಟಿಕ್ ಪಾರ್ಟಿಯ ಸದಸ್ಯೆ ಇವಾ ಅಬುಲ್ಲಾ ಹೇಳಿದರು.

ಎರಡನೇ ಬಾರಿ ತುರ್ತು ಸ್ಥಿತಿ

ಯಮೀನ್ ಅವರು ದೇಶದಲ್ಲಿ ತುರ್ತು ಸ್ಥಿತಿಯನ್ನು ಘೋಷಿಸಿರುವುದು ಇದು ಎರಡನೇ ಬಾರಿಯಾಗಿದೆ. 2015 ನವೆಂಬರ್‌ನಲ್ಲಿ ತನ್ನ ಹತ್ಯೆಗೆ ಯತ್ನ ನಡೆದ ಬಳಿಕ ಅವರು ಮೊದಲ ಬಾರಿ ತುರ್ತು ಸ್ಥಿತಿಯನ್ನು ಘೋಷಿಸಿದ್ದರು.

ಅಧ್ಯಕ್ಷರು ತುರ್ತು ಸ್ಥಿತಿಯ ಯಾವುದೇ ಘೋಷಣೆಯ ಕುರಿತು ಎರಡು ದಿನಗಳೊಳಗೆ ಸಂಸತ್ತಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ, ಆದರೆ ದೇಶದ ಶಾಸಕಾಂಗವನ್ನು ಅನಿರ್ದಿಷ್ಟಾವಧಿಗೆ ಅಮಾನತಿನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸರ್ವೋಚ್ಚ ನ್ಯಾಯಾಲಯವು ಗುರುವಾರ ಯಮೀನ್ ಪಕ್ಷದಿಂದ ಪಕ್ಷಾಂತರಗೊಂಡಿದ್ದ 12 ಸದಸ್ಯರ ಸ್ಥಾನಗಳನ್ನು ಮರು ಊರ್ಜಿತಗೊಳಿಸಿತ್ತು . ಇದರ ಪರಿಣಾಮವಾಗಿ 85 ಸದಸ್ಯ ಬಲದ ಸಂಸತ್ತಿನಲ್ಲಿ ಪ್ರತಿಪಕ್ಷಗಳಿಗೆ ಬಹುಮತದ ಅವಕಾಶ ಲಭಿಸಿತ್ತು ಮತ್ತು ಅಧ್ಯಕ್ಷರ ವಾಗ್ದಂಡನೆಗೆ ಮಾರ್ಗವು ಸುಲಭಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X