Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಕ್ಷೀರ ಪಥ’ ಆಕಾಶಗಂಗೆಯ ಹೊರಗೂ ಗ್ರಹಗಳು

‘ಕ್ಷೀರ ಪಥ’ ಆಕಾಶಗಂಗೆಯ ಹೊರಗೂ ಗ್ರಹಗಳು

ಮೊದಲ ಬಾರಿಗೆ ಪತ್ತೆ

ವಾರ್ತಾಭಾರತಿವಾರ್ತಾಭಾರತಿ5 Feb 2018 11:00 PM IST
share
‘ಕ್ಷೀರ ಪಥ’ ಆಕಾಶಗಂಗೆಯ ಹೊರಗೂ ಗ್ರಹಗಳು

ವಾಶಿಂಗ್ಟನ್, ಫೆ. 5: ಖಗೋಳ ವಿಜ್ಞಾನಿಗಳು ‘ನಾಸಾ’ದ ‘ಚಂದ್ರ ಎಕ್ಸ್-ರೇ ವೀಕ್ಷಣಾಲಯ’ದ ಮಾಹಿತಿಗಳನ್ನು ಬಳಸಿ ನಮ್ಮ ‘ಕ್ಷೀರ ಪಥ’ (ಮಿಲ್ಕಿ ವೇ) ಆಕಾಶಗಂಗೆ (ಗೆಲಾಕ್ಸಿ)ಯ ಹೊರಗೂ ಗ್ರಹಗಳು ಇರುವುದನ್ನು ಮೊದಲ ಬಾರಿಗೆ ಪತ್ತೆಹಚ್ಚಿದ್ದಾರೆ.

ಕ್ಷೀರ ಪಥಕ್ಕೆ ಹೊರತಾದ ಆಕಾಶಗಂಗೆಯಲ್ಲಿ ಚಂದ್ರನಿಂದ ಹಿಡಿದು ಗುರು ಗ್ರಹದವರೆಗಿನ ದ್ರವ್ಯರಾಶಿಗಳ ಕಾಯಗಳು ಇರುವುದನ್ನು ಅಮೆರಿಕದ ಓಕ್ಲಹೋಮ ವಿಶ್ವವಿದ್ಯಾನಿಲಯದ ಸಂಶೋಧಕರು ಮೈಕ್ರೊಲೆನ್ಸಿಂಗ್ ವಿಧಾನದಿಂದ ಪತ್ತೆಹಚ್ಚಿದ್ದಾರೆ.

ನಾಸಾದ ಚಂದ್ರ ಎಕ್ಸ್‌ರೇ ವೀಕ್ಷಣಾಲಯ, ಅಂದರೆ ಬಾಹ್ಯಾಕಾಶದಲ್ಲಿರುವ ಟೆಲಿಸ್ಕೋಪ್‌ನಿಂದ ಪಡೆದ ಮಾಹಿತಿಯ ಆಧಾರದಲ್ಲಿ ಪ್ರೊಫೆಸರ್ ಕ್ಸಿನ್ಯು ಡೈ ಮತ್ತು ಎಡ್ವರ್ಡೊ ಗೆರಸ್ ಈ ಸಂಶೋಧನೆ ನಡೆಸಿದ್ದಾರೆ.

‘‘ಈ ಸಂಶೋಧನೆಯ ಬಗ್ಗೆ ನಾವು ರೋಮಾಂಚನಗೊಂಡಿದ್ದೇವೆ. ನಮ್ಮ ಆಕಾಶಗಂಗೆ (ಕ್ಷೀರ ಪಥ)ಯ ಹೊರಗೆ ಗ್ರಹಗಳ ಅಸ್ತಿತ್ವವಿರುವುದು ಇದೇ ಮೊದಲ ಬಾರಿಗೆ ಹೊರಗೆ ಬಂದಿದೆ’’ ಎಂದು ಡೈ ಹೇಳಿದರು.

ಈ ಅಧ್ಯಯನವು ‘ದಿ ಆ್ಯಸ್ಟ್ರೊಫಿಸಿಕಲ್ ಜರ್ನಲ್ ಲೆಟರ್ಸ್‌’ನಲ್ಲಿ ಪ್ರಕಟಗೊಂಡಿದೆ.

ದೂರದರ್ಶಕದಿಂದ ನೇರವಾಗಿ ವೀಕ್ಷಿಸಲು ಸಾಧ್ಯವೇ ಇಲ್ಲ

‘‘ಹೊರಗಿನ ಆಕಾಶಗಂಗೆಯು 380 ಕೋಟಿ ಜ್ಯೋತಿರ್ವರ್ಷಗಳಷ್ಟು ದೂರದಲ್ಲಿದೆ. ಈ ಗ್ರಹಗಳನ್ನು ನೇರವಾಗಿ ವೀಕ್ಷಿಸಲು ಅವಕಾಶವೇ ಇಲ್ಲ. ಎಷ್ಟೇ ಪ್ರಬಲ ದೂರದರ್ಶಕದಿಂದಲೂ ಇವುಗಳನ್ನು ಭೂಮಿಯಿಂದ ವೀಕ್ಷಿಸಲು ಸಾಧ್ಯವಿಲ್ಲ’’ ಎಂದು ಗೆರಸ್ ಹೇಳುತ್ತಾರೆ.

‘‘ಆದಾಗ್ಯೂ, ನಮಗೆ ಅವುಗಳ ಬಗ್ಗೆ ಅಧ್ಯಯನ ನಡೆಸಲು ಸಾಧ್ಯವಾಗಿದೆ. ಅವುಗಳ ಅಸ್ತಿತ್ವವನ್ನು ಬಹಿರಂಗಪಡಿಸಿದ್ದೇವೆ. ಅವುಗಳ ದ್ರವ್ಯರಾಶಿಗಳ ಕಲ್ಪನೆಯೂ ಇದೆ. ಇದು ಅತ್ಯಂತ ಸುಧಾರಿತ ವಿಜ್ಞಾನ’’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X