Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರವೆಂದರೆ ಏಕವ್ಯಕ್ತಿ...

ಮೋದಿ ಸರಕಾರವೆಂದರೆ ಏಕವ್ಯಕ್ತಿ ಪ್ರದರ್ಶನ, ಇಬ್ಬರು ವ್ಯಕ್ತಿಗಳ ಸೈನ್ಯ: ಶತ್ರುಘ್ನ ಸಿನ್ಹಾ

ವಾರ್ತಾಭಾರತಿವಾರ್ತಾಭಾರತಿ6 Feb 2018 6:37 PM IST
share
ಮೋದಿ ಸರಕಾರವೆಂದರೆ ಏಕವ್ಯಕ್ತಿ ಪ್ರದರ್ಶನ, ಇಬ್ಬರು ವ್ಯಕ್ತಿಗಳ ಸೈನ್ಯ: ಶತ್ರುಘ್ನ ಸಿನ್ಹಾ

ನರಸಿಂಗಪುರ (ಒರಿಸ್ಸಾ), ಫೆ.6: ಕೇಂದ್ರದಲ್ಲಿರುವ ತಮ್ಮದೇ ಸರಕಾರದ ವಿರುದ್ಧ ಆಗಾಗ ಟೀಕೆ ಮಾಡುತ್ತಲೇ ಇರುವ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಸೋಮವಾರದಂದು ಮತ್ತೊಮ್ಮೆ ತಮ್ಮ ಪಕ್ಷದ ಅಗ್ರ ನಾಯಕರ ಕಾಲೆಳೆದಿದ್ದಾರೆ. ಕೇಂದ್ರದ ಮಂತ್ರಿಗಳ ಸ್ಥಾನಮಾನವು ಕುಸಿದಿದೆ. ಈಗ ಸರಕಾರವು ಏನಿದ್ದರೂ ಏಕವ್ಯಕ್ತಿ ಪ್ರದರ್ಶನ ಮತ್ತು ಇಬ್ಬರು ವ್ಯಕ್ತಿಗಳ ಸೈನ್ಯದಂತೆ ಕಾಣುತ್ತಿದೆ ಎಂದು ಸಿನ್ಹಾ ಕುಹಕವಾಡಿದ್ದಾರೆ. ರವಿವಾರದಂದು ಒರಿಸ್ಸಾದ ನರಸಿಂಗಪುರದಲ್ಲಿ ಬಿಜೆಪಿಯ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರು ಆಯೋಜಿಸಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಲು ಆಗಮಿಸಿದ್ದ ಸಿನ್ಹಾ ನಂತರ ಮಾಧ್ಯಮಗಳ ಜೊತೆ ನಡೆದ ಸಂವಾದದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷಾಧ್ಯಕ್ಷ ಅಮಿತ್ ಶಾ ಅವರನ್ನು ಗುರಿ ಮಾಡಿ ಈ ಮಾತುಗಳನ್ನು ಆಡಿದರು.

ವಿದ್ಯುತ್ ಉತ್ಪಾದನಾ ಘಟಕದ ನಿರ್ಮಾಣದಿಂದ ಸೂರು ಕಳೆದುಕೊಳ್ಳಲಿರುವ ಸ್ಥಳೀಯ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಯಶವಂತ್ ಸಿನ್ಹಾ ಅವರು ನರಸಿಂಗಪುರದಲ್ಲಿ ನಾಲ್ಕು ದಿನಗಳ ಧರಣಿ ಸತ್ಯಾಗ್ರಹ ಆಯೋಜಿಸಿದ್ದರು. ಈ ಸತ್ಯಾಗ್ರಹವು ಸೋಮವಾರ ರಾತ್ರಿ ಕೊನೆಗೊಂಡಿತು. ಪಕ್ಷ ಮತ್ತು ಸರಕಾರ ಜೊತೆಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಆದರೆ ಇಲ್ಲಿ ಕೇವಲ ನಮಗೆ ಮಾತ್ರವಲ್ಲ ನೀವು ಮತ್ತು ಇತರ ಹಲವರಿಗೆ, ಕೇಂದ್ರದಲ್ಲಿ ಏಕವ್ಯಕ್ತಿ ಪ್ರದರ್ಶನ ಮತ್ತು ಇಬ್ಬರು ವ್ಯಕ್ತಿಗಳ ಸೈನ್ಯ ಕೆಲಸದಲ್ಲಿದೆ ಎಂಬಂತೆ ಭಾಸವಾಗುತ್ತಿದೆ ಎಂದು ಶತ್ರುಘ್ನ ಸಿನ್ಹಾ ತಿಳಿಸಿದರು.

ಸರಕಾರದಲ್ಲಿ ಮಂತ್ರಿಗಳ ಸ್ಥಾನಮಾನ ಕುಸಿಯುತ್ತಿದೆ. ಬಹಳಷ್ಟು ಜನರಿಗೆ ಕೇಂದ್ರ ಸರಕಾರದ ಶೇ. 80 ಮಂತ್ರಿಗಳ ಬಗ್ಗೆ ಅರಿವೂ ಇರಲಿಕ್ಕಿಲ್ಲ. ಒಂದು ವೇಳೆ ತಿಳಿದಿದ್ದರೂ ಇವರೆಲ್ಲಾ ಅನಗತ್ಯ ಮಂತ್ರಿಗಳೆಂದೇ ತಿಳಿಯಬಹುದು ಎಂದು ಸಿನ್ಹಾ ವ್ಯಂಗ್ಯವಾಡಿದರು.

ಯಾವಾಗಲು ಒಟ್ಟಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಅಟಲ್ ಬಿಹಾರಿ ವಾಜಪೇಯಿ ಅವರ ಸರಕಾರ ಅತ್ಯುತ್ತಮವಾಗಿತ್ತು. ಅವರ ಸರಕಾರದಲ್ಲಿ ಸಚಿವರುಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತಿತ್ತು. ಜನರಿಗೆ ಸರಕಾರ ಕೆಲಸ ಮಾಡುತ್ತಿಲ್ಲ ಕೇವಲ ಮಾತನಾಡುತ್ತದೆ ಎಂದು ಅನಿಸಿದರೆ. ಈ ಹಿಂದೆ ಸರಕಾರಗಳು ಆ ಕಾರಣಕ್ಕಾಗಿ ಬೆಲೆ ತೆತ್ತಿರುವುದನ್ನು ನಾವು ನೋಡಿದ್ದೇವೆ. ರಾಜೀವ್ ಗಾಂಧಿ ಸರಕಾರವೂ 1984ರಲ್ಲಿ ಅಭೂತಪೂರ್ವ ಬಹುಮತವನ್ನು ಪಡೆದಿತ್ತು. ಆದರೆ ಜನರ ವಿಶ್ವಾಸ ಕಳೆದುಕೊಳ್ಳಲು ಅದಕ್ಕೆ ಹೆಚ್ಚು ಸಮಯ ಹಿಡಿಯಲಿಲ್ಲ. ಜನಶಕ್ತಿಯು ಯಾವಾಗಲೂ ಧನಶಕ್ತಿಗಿಂತ ದೊಡ್ಡದು ಎಂದು ಶತ್ರುಘ್ನ ಸಿನ್ಹಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X