Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇರುಪೇಟೆಯಲ್ಲಿ ಕುಸಿತದ ಅಲೆ: 3...

ಶೇರುಪೇಟೆಯಲ್ಲಿ ಕುಸಿತದ ಅಲೆ: 3 ದಿನಗಳಲ್ಲಿ ಕೊಚ್ಚಿ ಹೋಯಿತು 9.6 ಲಕ್ಷ ಕೋಟಿ ರೂ.!

ವಾರ್ತಾಭಾರತಿವಾರ್ತಾಭಾರತಿ6 Feb 2018 7:58 PM IST
share
ಶೇರುಪೇಟೆಯಲ್ಲಿ ಕುಸಿತದ ಅಲೆ: 3 ದಿನಗಳಲ್ಲಿ ಕೊಚ್ಚಿ ಹೋಯಿತು 9.6 ಲಕ್ಷ ಕೋಟಿ ರೂ.!

ಮುಂಬೈ, ಫೆ.6: ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆದಾರರು ತಮ್ಮ ಶೇರುಗಳನ್ನು ಮಾರಾಟ ಮಾಡಲು ಮುಂದಾದ ಪರಿಣಾಮ ಶೇರುಪೇಟೆಯಲ್ಲಿ ಉಂಟಾದ ದಿಢೀರ್ ಕುಸಿತವು ಮುಂದುವರಿದಿದ್ದು ಮೂರೇ ದಿನಗಳಲ್ಲಿ ಹೂಡಿಕೆದಾರರು 9.6 ಲಕ್ಷ ಕೋಟಿ ರೂ. ವನ್ನು ಕಳೆದುಕೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.

ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಸೆನ್ಸೆಕ್ಸ್ ಮಂಗಳವಾರದಂದು 1,274.35 ಅಂಕಗಳ ಕುಸಿತ ಕಂಡಿದ್ದು ದಿನದಂತ್ಯಕ್ಕೆ 33,482.81ಕ್ಕೆ ತಲುಪಿದೆ. ಫೆಬ್ರವರಿ ಒಂದರಂದು ಕೇಂದ್ರ ಮುಂಗಡಪತ್ರಕ್ಕೂ ಮುನ್ನ ಶೇರು ಸೂಚ್ಯಂಕವು 2,164.11 ಅಂಕಗಳ ಕುಸಿತ ಕಂಡಿತ್ತು.

ನಿರಂತರ ಮಾರಾಟದ ಪರಿಣಾಮವಾಗಿ ಬಿಎಸ್ಸಿಯಲ್ಲಿ ಪಟ್ಟಿ ಮಾಡಲಾಗಿರುವ ಕಂಪೆನಿಗಳ ಮಾರುಕಟ್ಟೆ ಬಂಡವಾಳೀಕರಣವು 9,60,938 ಕೋಟಿ ರೂ.ನಿಂದ 1,43,39,062 ಕೋಟಿ ರೂ.ಗೆ ಕುಸಿಯಿತು. ಸೋಮವಾರದಂದು ಸೆನ್ಸೆಕ್ಸ್ 309.59 ಅಂಕಗಳು ಅಥವಾ 0.88% ಕುಸಿತ ಕಂಡು 34,757.16 ಅಂಕಗಳಿಗೆ ಕೊನೆಯಾಯಿತು. ಶುಕ್ರವಾರದಂದು ಸೂಚ್ಯಂಕವು 839.91 ಅಂಕಗಳು ಅಥವಾ 2.34% ಕುಸಿತ ಕಂಡಿತ್ತು.

ಮಾತೃ ಮಾರುಕಟ್ಟೆ ಡೊವ್ 2,200 ಅಂಕಗಳ ಕುಸಿತ ಕಾಣುವ ಮೂಲಕ ಜಾಗತಿಕವಾಗಿ ಶೇರು ಮಾರುಕಟ್ಟೆಯಲ್ಲಿ ತಲ್ಲಣ ಮೂಡಿಸಿತು. ಯುಎಸ್ ಮಾರುಕಟ್ಟೆಯಲ್ಲಿ ಮಾರಾಟದ ಭರಾಟೆ ಹೆಚ್ಚಾದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿಯೂ ಹೂಡಿಕೆದಾರರನ್ನು ಶೇರುಗಳ ಮಾರಾಟಕ್ಕೆ ಪ್ರೋತ್ಸಾಹಿಸಿತು. ಈ ಕೆಳಮುಖ ಸವಾರಿಯಲ್ಲಿ ಭಾರತೀಯ ಮಾರುಕಟ್ಟೆಯು ಜಾಗತಿಕ ಮಾರುಕಟ್ಟೆಯೊಂದಿಗೆ ಹೆಜ್ಜೆಹಾಕುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಸರಕಾರವು ಶೇರುಗಳ ಮೇಲೆ ದೀರ್ಘ ಕಾಲೀನ ಬಂಡವಾಳದ ಮೇಲಿನ ಲಾಭಕ್ಕೆ ಶೇ. 10 ತೆರಿಗೆ ವಿಧಿಸುವ ಪ್ರಸ್ತಾವನೆ ಮತ್ತು 2017-18ರ ವಿತ್ತೀಯ ವರ್ಷದಲ್ಲಿ ಹಣದುಬ್ಬರವು ಜಿಡಿಪಿಯ ಶೇ.3.5 ಆಗಲಿದೆ ಎಂದು ಅಂದಾಜಿಸಿದ ಪರಿಣಾಮ ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಮುಂದಾದರು. ಅದರ ಪರಿಣಾಮವಾಗಿ 200ಕ್ಕೂ ಅಧಿಕ ಶೇರುಗಳು ಮಂಗಳವಾರದಂದು 52 ವಾರಗಳಲ್ಲೇ ಅತ್ಯಂತ ಕೆಳಮಟ್ಟವನ್ನು ತಲುಪಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X