Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರಿ ನೌಕರರಿಗೆ ಸಿಹಿ ಸುದ್ದಿ

ಕೇಂದ್ರ ಸರಕಾರಿ ನೌಕರರಿಗೆ ಸಿಹಿ ಸುದ್ದಿ

ವಾರ್ತಾಭಾರತಿವಾರ್ತಾಭಾರತಿ6 Feb 2018 8:05 PM IST
share
ಕೇಂದ್ರ ಸರಕಾರಿ ನೌಕರರಿಗೆ ಸಿಹಿ ಸುದ್ದಿ

ಹೊಸದಿಲ್ಲಿ,ಫೆ.6: ಕೇಂದ್ರ ಸರಕಾರದ ನೌಕರರಿಗೆ ಒಳ್ಳೆಯ ಸುದ್ದಿಯೊಂದು ಇಲ್ಲಿದೆ. ನರೇಂದ್ರ ಮೋದಿ ಸರಕಾರವು ಮ್ಯಾಟ್ರಿಕ್ಸ್ ಲೆವೆಲ್ 1ರಿಂದ 5ರವರೆಗಿನ ಕೆಳಮಟ್ಟದ ಅಧಿಕಾರಿಗಳ ವೇತನವನ್ನು ಏಳನೇ ವೇತನ ಆಯೋಗದ ಶಿಫಾರಸಿನಾಚೆಗೆ ಹೆಚ್ಚಿಸುವ ಬಗ್ಗೆ ಪರಿಶೀಲಿಸುತ್ತಿದೆ. ಸದ್ಯ ಕೇಂದ್ರ ಸರಕಾರಿ ನೌಕರರು ಮೂಲವೇತನದ 2.57 ಫಿಟ್‌ಮೆಂಟ್ ಸೂತ್ರಕ್ಕನುಗುಣವಾಗಿ ವೇತನಗಳನ್ನು ಪಡೆಯತ್ತಿದ್ದು, ಸರಕಾರದ ಚಿಂತನೆ ಕಾರ್ಯರೂಪಕ್ಕೆ ಇಳಿದರೆ ವೇತನದಲ್ಲಿ ಭಾರೀ ಏರಿಕೆಯಾಗಲಿದೆ. ವೇತನ ಏರಿಕೆಯ ಬಗ್ಗೆ ಅಧಿಕೃತ ಪ್ರಕಟಣೆಯು ಎಪ್ರಿಲ್‌ನ ಆಸುಪಾಸಿನಲ್ಲಿ ಹೊರಬೀಳುವ ವರದಿಯಿದೆ.

ನೌಕರರಿಗೆ ಹೆಚ್ಚಿನ ವೇತನ ದೊರೆಯುವಂತೆ ಸರಕಾರವು ಫಿಟ್‌ಮೆಂಟ್ ಫ್ಯಾಕ್ಟರ್‌ನ್ನು ಮೂರು ಪಟ್ಟು ಪರಿಷ್ಕರಿಸಬಹುದು, ಆದರೆ ವೇತನ ಏರಿಕೆಯು ಮುಂದಿನ ಹಣಕಾಸು ವರ್ಷಕ್ಕೆ ಮುನ್ನ ಜಾರಿಗೊಳ್ಳುವುದಿಲ್ಲ. ಸರಕಾರವು ವೇತನ ಏರಿಕೆಯ ಪ್ರಸ್ತಾಪವನ್ನು ಮುಂದಿನ ಹಣಕಾಸು ವರ್ಷದ ಆರಂಭದಲ್ಲಿ ಸಂಪುಟದ ಮುಂದಿರಿಸಲು ಯೋಜಿಸಿದೆ ಎನ್ನಲಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಬಳಿಕ ಕೇಂದ್ರ ಸರಕಾರಿ ನೌಕರರ ಮೂಲ ವೇತನ 2.57 ಫಿಟ್‌ಮೆಂಟ್ ಫ್ಯಾಕ್ಟರ್‌ನ ಆಧಾರದಲ್ಲಿ ಮಾಸಿಕ 7,000 ರೂ.ಗಳಿಂದ 18,000 ರೂ.ಗಳಿಗೆ ಏರಿಕೆಯಾಗಿದ್ದು, 2016,ಜ.1ರಿಂದ ಪೂರ್ವಾನ್ವಯಗೊಂಡು ಜಾರಿಗೆ ಬಂದಿತ್ತು.

ಆರಂಭದಲ್ಲಿ ವೇತನ ಆಯೋಗವು 18,000 ರೂ.ಗಳ ಮೂಲವೇತನಕ್ಕೆ ಶಿಫಾರಸು ಮಾಡಿತ್ತು. ಆದರೆ ಸರಕಾರಿ ನೌಕರರು ಪ್ರತಿಭಟನೆಗಳನ್ನು ನಡೆಸಿ ಅದನ್ನು 26000 ರೂ.ಗೆ ಹೆಚ್ಚಿಸುವಂತೆ ಆಗ್ರಹಿಸಿದ್ದರು. ಈಗ ಈ ವರದಿಗಳನ್ನು ನಂಬುವುದಾದರೆ, ಪ್ರಸ್ತಾವನೆಯು ಸಮ್ಮತಿಗಾಗಿ ಎಪ್ರಿಲ್ ಆರಂಭದಲ್ಲಿ ಸಂಪುಟಕ್ಕೆ ಸಲ್ಲಿಕೆಯಾದ ಬಳಿಕ ಪೇ ಮ್ಯಾಟ್ರಿಕ್ಸ್ ಲೆವೆಲ್ 1ರಿಂದ 5ರೊಳಗಿರುವ ನೌಕರರು ವೇತನದಲ್ಲಿ ಹೆಚ್ಚಳವನ್ನು ಕಾಣಲಿದ್ದಾರೆ. ಕೇಂದ್ರ ಸರಕಾರಿ ನೌಕರರ ವೇತನಗಳನ್ನು 7ನೇ ವೇತನ ಆಯೋಗದ ಶಿಫಾರಸುಗಳನ್ನು ಮೀರಿ ಹೆಚ್ಚಿಸುವುದಾಗಿ ವಿತ್ತಸಚಿವ ಅರುಣ ಜೇಟ್ಲಿಯವರು 2016ರಲ್ಲಿ ಭರವಸೆ ನೀಡಿದ್ದರು.

ತನ್ಮಧ್ಯೆ ಸರಕಾರವು ತನ್ನ ನೌಕರರ ವೇತನ ಏರಿಕೆ ಬಾಕಿಗಳನ್ನು ಪಾವತಿಸುವುದಿಲ್ಲ ಎಂಬ ವರದಿಗಳಿವೆ. ಈ ಪ್ರಸ್ತಾವನೆಯನ್ನು ಎಪ್ರಿಲ್‌ನಲ್ಲಿ ಜೇಟ್ಲಿಯವರ ಮುಂದಿರಿಸ ಲಾಗುವುದು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X