Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ...

ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಅಗತ್ಯ: ಡಾ.ಕೆ.ಶರೀಫಾ

ವಾರ್ತಾಭಾರತಿವಾರ್ತಾಭಾರತಿ6 Feb 2018 11:52 PM IST
share

ಬೆಂಗಳೂರು, ಫೆ.6: ಲೈಂಗಿಕ ಅಲ್ಪಸಂಖ್ಯಾತರನ್ನು ನಮ್ಮವರು ಎಂದು ತಿಳಿದು, ಸರಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸುವ ಅಗತ್ಯ ಇದೆ ಎಂದು ಹಿರಿಯ ಸಾಹಿತಿ ಡಾ.ಕೆ.ಶರೀಫಾ ಹೇಳಿದರು.

ಮಂಗಳವಾರ ನಗರದ ಕನ್ನಡಭವನದ ನಯನ ಸಭಾಂಗಣದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿದ್ದ ‘ದೇಸಿ ಕಮ್ಮಟ, ಲೋಕ ಕಾಣದ ಲೋಕ’ ಕಾರ್ಯಕ್ರಮದಲ್ಲಿ ‘ಮಂಗಳಮುಖಿಯರು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು’ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹೆಣ್ಣೋ ಅಥವಾ ಗಂಡೋ ಎನ್ನುವುದು ಮುಖ್ಯವಲ್ಲ. ಬದಲಾಗಿ ಎಲ್ಲರೂ ಮನುಷ್ಯರು ಎಂಬುದನ್ನು ಮನಗಾಣಬೇಕಿದೆ. ಅದೇರೀತಿ, ಲೈಂಗಿಕ ಅಲ್ಪಸಂಖ್ಯಾತರನ್ನು ಮುಖವಾಹಿನಿಗೆ ತೆಗೆದುಕೊಂಡು ಹೋಗಲು ಪ್ರಸ್ತುತ ಸರಕಾರಿ ಉದ್ಯೋಗಗಳಲ್ಲಿ ಮೀಸಲಾತಿಯ ಅಗತ್ಯವನ್ನು ನೆರವೇರಿಸಬೇಕು ಎಂದು ತಿಳಿಸಿದರು.

ಅಪರಾಧ ಪ್ರಕರಣಗಳನ್ನು ಮುಚ್ಚಿಹಾಕುವ ರಾಜಕಾರಣ ನಡೆಯುತ್ತಿದ್ದು, ಕೆಳ ವರ್ಗವನ್ನು ದಮನಕ್ಕೆ ತಳ್ಳುವಂಥ ಕಾರ್ಯವಾಗುತ್ತಿದೆ. ಮಂಗಳಮುಖಿಯರು ಮಾತ್ರವಲ್ಲದೆ, ಇಂದಿನ ಕಾನೂನು, ಪೊಲೀಸು, ರಾಜಕಾರಣದ ನಡುವೆ ಹೆಣ್ಣು ಸಿಲುಕಿ ನರಳುತ್ತಿದ್ದಾಳೆ ಎಂದು ಬೇಸರ ವ್ಯಕ್ತಪಡಿಸಿದರು.

ಸೆನ್ಸಾರ್ ಮಂಡಳಿ ಸದಸ್ಯೆ ಭಾರತಿ ಹೆಗಡೆ ಮಾತನಾಡಿ, ಅತ್ಯಾಚಾರಗಳು ರಾಜಕೀಯದ ಅಸ್ತ್ರವಾಗಿವೆ. ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಅತ್ಯಾಚಾರ ಪ್ರಕರಣಗಳನ್ನು ಬಳಸಿಕೊಂಡು ಕಾರ್ಯ ಸಾಧನೆ ಮಾಡಿಕೊಳ್ಳುತ್ತಾರೆ. ಅತ್ಯಾಚಾರಗಳಂತಹ ಪ್ರಕರಣಗಳಿಗೆ ಸೂಕ್ತ ನ್ಯಾಯಸಿಗಬೇಕು. ಹೀಗಾಗಿ, ಮಹಿಳೆಯರು ಚುನಾವಣೆಯಲ್ಲಿ ರಾಜಕೀಯ ವ್ಯಕ್ತಿಗಳನ್ನು ಆಯ್ಕೆ ಮಾಡುವಾಗ ಜಾಗೃತರಾಗಿರಬೇಕಾದ ರಿಸ್ಥಿತಿ ಉಂಟಾಗಿದೆ ಎಂದರು. ಅತ್ಯಾಚಾರಕ್ಕೂ ಉಡುಪುಗಳಿಗೂ ಸಂಬಂಧವಿದೆ ಎಂಬ ಮಾತು ಸೂಕ್ತವಲ್ಲ ಎಂದ ಅವರು, ಹೆಣ್ಣು ತನ್ನದಲ್ಲದ ತಪ್ಪಿಗಾಗಿ ಶೋಷಣೆಗೊಳಗಾಗುತ್ತಿರುವುದು ಖಂಡನೀಯ. ಹೀಗಾಗಿ, ಇದರಿಂದ ಹೊರಬಂದು ಘನತೆಯಿಂದ ಬದುಕು ನಡೆಸಲು ಸಂಘಟನೆ, ಹೋರಾಟ ಅವಶ್ಯಕವಾಗಿದೆ ಎಂದು ನುಡಿದರು.

ಪ್ರಸಕ್ತ ದಿನಗಳಲ್ಲಿ ಸಿನೆಮಾಗಳಲ್ಲಿ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸುವ ಹೆಣ್ಣಿನ ಚಿತ್ರಣದ ಬದಲು ದುರಂತಗಳನ್ನು ತೋರಿಸುವುದೇ ಹೆಚ್ಚು. ಪುರುಷರ ಅತ್ಯಾಚಾರದ ಮನೋಭಾವವನ್ನು ಕಿತ್ತು ಹಾಕಲು ಶಾಲಾ ಮಟ್ಟದಲ್ಲೇ ಶಿಕ್ಷಣ ನೀಡಬೇಕೋ ಅಥವಾ ಕಠಿಣ ಶಿಕ್ಷೆ ವಿಧಿಸಬೇಕೊ ಎಂಬುದರ ಚರ್ಚೆಯಾಗಬೇಕಿದೆ ಎಂದು ತಿಳಿಸಿದರು.

ವಿಚಾರಗೋಷ್ಠಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ, ಕಮ್ಮಟದ ನಿರ್ದೇಶಕಿ ಡಾ.ಎಂ.ಎಸ್. ಆಶಾದೇವಿ, ಸುಶೀಲ ಚಿಂತಾಮಣಿ, ಪತ್ರಕರ್ತೆ ಮಂಜುಳಾ ಹುಲಿಕುಂಟೆ, ಲೈಂಗಿಕ ಅಲ್ಪಸಂಖ್ಯಾತೆ ಚಾಂದಿನಿ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X