Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ...

88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ

ಜೈನ ಧರ್ಮ ಮಾನವ ಕಲ್ಯಾಣದ ಸಂದೇಶ ಸಾರಿರುವ ಧರ್ಮ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ವಾರ್ತಾಭಾರತಿವಾರ್ತಾಭಾರತಿ7 Feb 2018 2:07 PM IST
share
88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ

ಶ್ರವಣಬೆಳಗೊಳ, ಫೆ.7: ಜೈನ ಧರ್ಮವು ತ್ಯಾಗ, ಕರುಣೆ, ಮಾನವೀಯತೆ, ಮಾನವ ಕಲ್ಯಾಣದ ಸಂದೇಶ ಸಾರಿರುವ ಧರ್ಮ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನುಡಿದರು.

ಶ್ರವಣಬೆಳಗೊಳದ ಪಂಚಕಲ್ಯಾಣ ನಗರದಲ್ಲಿನ ಚಾವುಂಡರಾಯ ಸಭಾ ಮಂಟಪದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ‘88ನೇ ಮಹಾ ಮಸ್ತಕಾಭಿಷೇಕ ಮಹೋತ್ಸವ-2018’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಪ್ರಾರಂಭದಲ್ಲಿ ‘‘ಸಹೋದರ ಸಹೋದರಿಯರೇ, ಎಲ್ಲರಿಗೂ ನನ್ನ ನಮಸ್ಕಾರಗಳು’’ ಎಂದು ಕನ್ನಡದಲ್ಲಿ ಮಾತು ಆರಂಭಿಸಿ ಸಭಿಕರ ಚಪ್ಪಾಳೆ ಗಿಟ್ಟಿಸಿದ ರಾಷ್ಟ್ರಪತಿ, ಶಾಂತಿ, ಕರುಣೆ, ಮಾನವೀಯತೆ, ಸಹೋದರತ್ವ, ಅಹಿಂಸೆಯ ಪ್ರತೀಕವಾಗಿರುವ ಶ್ರೀ ಬಾಹುಬಲಿ ಭವ್ಯ ಪ್ರತಿಮೆ ನೋಡಿ ನಾನು ಕೃತಾರ್ಥನಾದೆ. ಬಾಹುಬಲಿ ಸ್ವಾಮಿ ನೀಡಿರುವ ಸಂದೇಶ ಮಾನವ ಕಲ್ಯಾಣದ ಸಂದೇಶವಾಗಿದೆ ಎಂದರು.

ಶಾಂತಿ, ಅಹಿಂಸೆ, ಕರುಣೆ, ತ್ಯಾಗದಿಂದ ದೇಶದ ಕಲ್ಯಾಣ, ವಿಶ್ವದ ಕಲ್ಯಾಣ, ಹಾಗೂ ಮಾನವ ಕಲ್ಯಾಣವಾಗುತ್ತದೆ ಎಂದ ರಾಷ್ಟ್ರಪತಿ, ವಿಶ್ವ ಶಾಂತಿಗಾಗಿ ನಡೆಯುತ್ತಿರುವ ಈ ಐತಿಹಾಸಿಕ ಮಹಾಮಸ್ತಕಾಭಿಷೇಕ ಸಮಾಜದಲ್ಲಿ ಶಾಂತಿ ಪಸರಿಸಲಿ ಎಂದು ಹಾರೈಸಿದರು.

ಮಹಾರಾಜ ಚಂದ್ರಗುಪ್ತ ಮೌರ್ಯ ತನ್ನ ಸಂಸ್ಥಾನವನ್ನು ತ್ಯಾಗಮಾಡಿ ಚಂದ್ರಗಿರಿಯಲ್ಲಿ ತ್ಯಾಗಿಯಾಗಿ ದೀಕ್ಷೆ ಸ್ವೀಕರಿಸಿ ಅಲ್ಲಿಯೇ ಸಲ್ಲೇಖನ ವೃತ ಸ್ವೀಕರಿಸಿದ್ದನ್ನು ಸ್ಮರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಜೈನ ಧರ್ಮದಲ್ಲಿ ಪ್ರಕೃತಿಯ ಸಂರಕ್ಷಣೆಯ ವಿಶೇಷವಿದೆ. ಪ್ರತಿಯೊಬ್ಬರು ಜೈನ ಮುನಿಗಳು, ಮಾತೆಯರ ಸಂದೇಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಕರೆ ನೀಡಿದರು.

ಸಮಾಜಕ್ಕಾಗಿ ತ್ಯಾಗ ಮಾಡುವ ಗುಣ ಬೆಳೆಸಿಕೊಳ್ಳಿ: ರಾಜ್ಯಪಾಲ ವಜುಬಾಯಿ ವಾಲಾ ಕರೆ
ಜೈನ ಸಮಾಜ ಸೇರಿದಂತೆ ಇನ್ನಿತರ ಸಮಾಜದಲ್ಲಿನ ಉಳ್ಳವರು ತಮ್ಮಲ್ಲಿರುವ ಸಂಪತ್ತಿನಲ್ಲಿ ಸಮಾಜಕ್ಕಾಗಿ ಒಂದು ಪ್ರಮಾಣದ ತ್ಯಾಗ ಮಾಡುವ ಗುಣ ಬೆಳೆಸಿಕೊಳ್ಳುವ ಮೂಲಕ ಗವಾನ್ ಬಾಹುಬಲಿ ಸಂದೇಶವನ್ನು ಮೈಗೂಡಿಸಿಕೊಳ್ಳುವಂತೆ ವಜುಬಾಯಿ ರುಡಬಾಯಿ ವಾಲಾ ಕರೆ ನೀಡಿದರು.

ಸತ್ಯ, ಅಹಿಂಸೆ, ಬ್ರಹ್ಮಚಾರ್ಯ, ಕರುಣೆಯ ಚೈತನ್ಯವೇ ಗೊಮ್ಮಟೇಶ್ವರನ ಪ್ರತಿಮೆಯಾಗಿದ್ದು ಈ ವೌಲ್ಯವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕು ರೂಪಿಸಿಕೊಳ್ಳುವಂತೆ ಅವರು ತಿಳಿಸಿದರು.

ಜೀವನದಲ್ಲಿ ತ್ಯಾಗವೇ ದೊಡ್ಡದು ಎಂದ ಅವರು ದೇಶದಲ್ಲಿ ಸಂಸ್ಕಾರ ಉಳಿಯಬೇಕಾದರೆ ಆಧ್ಯಾತ್ಮದ ಶಕ್ತಿ ಬೇಕು. ಅದು ತ್ಯಾಗ, ಶಾಂತಿ, ಅಹಿಂಸೆಯಿಂದ ಮಾತ್ರ ಸಾಧ್ಯವೆಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೆಂದ್ರ ಹೆಗ್ಗಡೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X