Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಟಿಡಿಎಸ್ ಎಂದರೇನು ಮತ್ತು ತೆರಿಗೆ ಉಳಿತಾಯ...

ಟಿಡಿಎಸ್ ಎಂದರೇನು ಮತ್ತು ತೆರಿಗೆ ಉಳಿತಾಯ ಪುರಾವೆಗಳನ್ನು ಸಲ್ಲಿಸುವುದು ಏಕೆ ಅಗತ್ಯ....?

ವಾರ್ತಾಭಾರತಿವಾರ್ತಾಭಾರತಿ7 Feb 2018 7:35 PM IST
share
ಟಿಡಿಎಸ್ ಎಂದರೇನು ಮತ್ತು ತೆರಿಗೆ ಉಳಿತಾಯ ಪುರಾವೆಗಳನ್ನು ಸಲ್ಲಿಸುವುದು ಏಕೆ ಅಗತ್ಯ....?

ಹಾಲಿ ಹಣಕಾಸು ವರ್ಷ ಅಂತ್ಯಗೊಳ್ಳಲು ಎರಡು ತಿಂಗಳುಗಳೂ ಉಳಿದಿಲ್ಲ. ಸಂಸ್ಥೆಗಳ ಲೆಕ್ಕಪತ್ರ ವಿಭಾಗಗಳು ಮೂಲದಲ್ಲಿ ಹೆಚ್ಚುವರಿ ಆದಾಯ ತೆರಿಗೆ ಕಡಿತವಾಗುವುದನ್ನು ತಪ್ಪಿಸಲು ತಮ್ಮ ತೆರಿಗೆ ಉಳಿತಾಯ ಪುರಾವೆಗಳನ್ನು ಸಲ್ಲಿಸುವಂತೆ ಉದ್ಯೋಗಿಗಳಿಗೆ ಸೂಚನೆಗಳನ್ನು ನೀಡತೊಡಗಿವೆ.

ಟ್ಯಾಕ್ಸ್ ಡಿಡಕ್ಟೆಡ್ ಅಟ್ ಸೋರ್ಸ್(ಟಿಡಿಎಸ್) ಅಥವಾ ಮೂಲದಲ್ಲಿಯೇ ತೆರಿಗೆ ಕಡಿತವು ಹೆಸರೇ ಸೂಚಿಸುವಂತೆ ಆದಾಯದ ಮೂಲದಲ್ಲಿಯೇ ತೆರಿಗೆ ಸಂಗ್ರಹದ ಉದ್ದೇಶವನ್ನು ಹೊಂದಿದೆ.

ವೇತನಗಳು ಟಿಡಿಎಸ್‌ಗೊಳಪಟ್ಟಿವೆ

ಆದಾಯ ತೆರಿಗೆ ಕಾಯ್ದೆಯನ್ವಯ ವೇತನಗಳು ಸಾಮಾನ್ಯವಾಗಿ ಟಿಡಿಎಸ್ ಅಡಿಯಲ್ಲಿ ಬರುತ್ತವೆ. ಹಾಗೆಯೇ ಬ್ಯಾಂಕ್ ಠೇವಣಿಗಳು ಮತ್ತು ಇತರ ಹೂಡಿಕೆಗಳ ಮೇಲಿನ ಬಡ್ಡಿ, ವಿಮಾ ಕಂಪನಿಗಳ ಏಜೆಂಟರ ಕಮಿಷನ್ ಇತ್ಯಾದಿಗಳೂ ಟಿಡಿಎಸ್ ವ್ಯಾಪ್ತಿಗೊಳಪಟ್ಟಿವೆ. ತಮ್ಮ ನೌಕರರಿಗೆ ವೇತನಗಳನ್ನು ನೀಡುವ ಉದ್ಯೋಗದಾತರು ವೇತನ ಪಾವತಿಯ ಸಂದರ್ಭ ಆದಾಯ ತೆರಿಗೆಯನ್ನು ಕಡಿತಗೊಳಿಸುವುದು ಕಡ್ಡಾಯವಾಗಿದ್ದು, ಅದನ್ನು ಅವರು ನೇರವಾಗಿ ಸರಕಾರಕ್ಕೆ ಪಾವತಿಸುತ್ತಾರೆ. ಹಣಕಾಸು ವರ್ಷದ ಆರಂಭದಲ್ಲಿಯೇ ಕಂಪನಿಗಳ ಲೆಕ್ಕಪತ್ರ ವಿಭಾಗವು ಉದ್ಯೋಗಿಯ ಅಂದಾಜು ತೆರಿಗೆಗರ್ಹ ವೇತನದ ಆಧಾರದಲ್ಲಿ ಆದಾಯ ತೆರಿಗೆಯನ್ನು ಲೆಕ್ಕ ಹಾಕಲು ಆರಂಭಿಸುತ್ತದೆ.

►ಟಿಡಿಎಸ್‌ನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ?

ನಿಮ್ಮ ಒಟ್ಟು ಆದಾಯದಲ್ಲಿ ಹಣಕಾಸು ವರ್ಷದಲ್ಲಿ ನೀವು ಮಾಡಲು ಉದ್ದೇಶಿಸಿರುವ ತೆರಿಗೆ ಉಳಿತಾಯ ವೆಚ್ಚಗಳನ್ನು ಕಳೆದು ಅಂದಾಜು ತೆರಿಗೆಗರ್ಹ ಆದಾಯವನ್ನು ಲೆಕ್ಕ ಹಾಕಲಾಗುತ್ತದೆ. ತೆರಿಗೆ ಉಳಿತಾಯವನ್ನು ನೀಡುವ ಯಾವುದೇ ಉದ್ದೇಶಿತ ಹೂಡಿಕೆ ಯನ್ನು ಘೋಷಿಸದಿದ್ದರೆ ಪೂರ್ಣ ವೇತನದ ಮೇಲೆ ಮೂಲದಲ್ಲಿಯೇ ತೆರಿಗೆಯನ್ನು ಕಡಿತಗೊಳಿಸಲಾಗುತ್ತದೆ.

ಪುರಾವೆಯ ದಾಖಲೆಗಳ ಸಲ್ಲಿಕೆ

ಹೀಗಾಗಿ, ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಕಾಯ್ದೆಯಂತೆ ನಿಮ್ಮ ಒಟ್ಟು ಆದಾಯದಲ್ಲಿ ಕಡಿತಕ್ಕೆ ಅರ್ಹವಿರುವ, ತೆರಿಗೆಯನ್ನು ಉಳಿಸುವ ಯಾವುದೇ ಹೂಡಿಕೆ ಅಥವಾ ಗೃಹಸಾಲದ ಮೇಲಿನ ಬಡ್ಡಿಯಂತಹ ಇತರ ಯಾವುದೇ ವೆಚ್ಚವನ್ನು ಮಾಡಿದ್ದರೆ ಉದ್ಯೋಗಿಯು ಇಂತಹ ಹೂಡಿಕೆಗಳು ಅಥವಾ ವೆಚ್ಚಗಳ ಪುರಾವೆಗಳನ್ನು ಉದ್ಯೋಗದಾತರಿಗೆ ಸಲ್ಲಿಸಬೇಕಾಗುತ್ತದೆ. ಇಂತಹ ದಾಖಲೆಗಳನ್ನು ಸಲ್ಲಿಸಿದ ಬಳಿಕ ಲೆಕ್ಕಪತ್ರ ವಿಭಾಗವು ಅವುಗಳ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕುತ್ತದೆ ಮತ್ತು ನಿಮ್ಮ ವೇತನದಿಂದ ಹೆಚ್ಚುವರಿ ತೆರಿಗೆ ಕಡಿತವಾಗುವುದು ತಪ್ಪುತ್ತದೆ.

►ತೆರಿಗೆ ಉಳಿತಾಯದ ಲಾಭಗಳನ್ನು ಪಡೆಯಲು ವಿಳಂಬವಾಗಿಲ್ಲ

ಹಾಲಿ ಹಣಕಾಸು ವರ್ಷ ಅಂತ್ಯಗೊಳ್ಳುವವರೆಗೆ ನಿಮ್ಮ ಬಳಿ ಹೆಚ್ಚುಕಡಿಮೆ ಕೇವಲ ಎರಡು ತಿಂಗಳುಗಳಿರಬಹುದು, ಆದರೆ ಹೆಚ್ಚಿನ ತೆರಿಗೆ ಪಾವತಿಯಿಂದ ತಪ್ಪಿಸಿಕೊಳ್ಳಲು ನಿಮಗೆ ಬೇರೆ ಮಾರ್ಗವೇ ಉಳಿದಿಲ್ಲ ಎಂದು ಅರ್ಥವಲ್ಲ. ಹಾಲಿ ಹಣಕಾಸು ವರ್ಷದಲ್ಲಿ ಈವರೆಗೆ ನೀವು ಯಾವುದೇ ಹೂಡಿಕೆಯನ್ನು ಮಾಡಿರದಿದ್ದರೂ ತೆರಿಗೆ ಉಳಿತಾಯದ ಲಾಭವನ್ನು ಪಡೆಯಲು ಕಾಲವು ಮಿಂಚಿಲ್ಲ. ತೆರಿಗೆಯನ್ನು ಉಳಿಸಲು ನೆರವಾಗುವ ಹೂಡಿಕೆಗಳನ್ನು ಮಾಡಲು ನಿಮ್ಮ ಬಳಿ ಹಣವಿಲ್ಲದಿದ್ದರೂ ನೀವು ನಿಮ್ಮ ತೆರಿಗೆ ಪಾವತಿಯನ್ನು ಕಡಿಮೆಗೊಳಿಸಲು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಸಿ ಮತ್ತು ಇತರ ಲಭ್ಯ ತೆರಿಗೆ ಉಳಿತಾಯ ಮಾರ್ಗಗಳನ್ನು ಬಳಸಿಕೊಳ್ಳಬಹುದು.

 ತೆರಿಗೆ ಉಳಿತಾಯದ ಲಾಭವನ್ನು ಪಡೆಯಲು ಸರಿಯಾದ ಎಲ್ಲ ದಾಖಲೆಗಳನ್ನು ಸಕಾಲದಲ್ಲಿ ನಿಮ್ಮ ಉದ್ಯೋಗದಾತರಿಗೆ ಸಲ್ಲಿಸಲು ಮಾತ್ರ ಮರೆಯಬೇಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X