Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ವಿರುದ್ಧ ಮಿತ್ರಪಕ್ಷ ಶಿರೋಮಣಿ...

ಬಿಜೆಪಿ ವಿರುದ್ಧ ಮಿತ್ರಪಕ್ಷ ಶಿರೋಮಣಿ ಅಕಾಲಿದಳ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ7 Feb 2018 8:59 PM IST
share
ಬಿಜೆಪಿ ವಿರುದ್ಧ ಮಿತ್ರಪಕ್ಷ ಶಿರೋಮಣಿ ಅಕಾಲಿದಳ ಅಸಮಾಧಾನ

ಹೊಸದಿಲ್ಲಿ, ಫೆ.7: ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ತೆಲುಗುದೇಶಂ ಪಕ್ಷವು ಬಿಜೆಪಿಯ ಅಗ್ರಪಂಕ್ತಿಯ ನಾಯಕತ್ವವು ಪ್ರದರ್ಶಿಸುತ್ತಿರುವ ಉದ್ದಟ ಧೋರಣೆಯಿಂದ ಬೇಸತ್ತು ಬಹಿರಂಗವಾಗಿ ಅಸಮಾಧಾನವನ್ನು ತೋಡಿಕೊಳ್ಳುತ್ತಿವೆ. ಇದೀಗ ಈ ಸಾಲಿಗೆ ಬಿಜೆಪಿಯ ಪಂಜಾಬ್‌ನ ಮಿತ್ರಪಕ್ಷ ಶಿರೋಮಣಿ ಅಕಾಲಿದಳ ಕೂಡಾ ಸೇರಿಕೊಂಡಿದೆ.

ಬಿಜೆಪಿ ನಾಯಕರು ತಮ್ಮ ಮಿತ್ರಪಕ್ಷಗಳನ್ನು ಉತ್ತಮವಾಗಿ ನಡೆಸಿಕೊಳ್ಳಬೇಕು. ಈ ಕಾರಣದಿಂದಲೇ ಈಗಾಗಲೇ ಶಿವಸೇನೆ ಮತ್ತು ಟಿಡಿಪಿ ಅಸಮಾಧಾನಗೊಂಡಿದೆ ಎಂದು ಅಕಾಲಿದಳದ ರಾಜ್ಯಸಭಾ ಸದಸ್ಯರಾದ ನರೇಶ್ ಗುಜ್ರಾಲ್ ಹೇಳುವ ಮೂಲಕ ಬಿಜೆಪಿ ನಾಯಕತ್ವದ ಬಗ್ಗೆ ಮೈತ್ರಿಕೂಟದೊಳಗೆ ಅಸಮಾಧಾನ ಹೊಗೆಯಾಡುತ್ತಿರುವುದನ್ನು ಬಹಿರಂಗಪಡಿಸಿದ್ದಾರೆ.

ಆದರೆ ಶಿವಸೇನೆ ಮತ್ತು ಟಿಡಿಪಿಯಂತೆ ನಾವು ಎನ್‌ಡಿಎಯನ್ನು ತೊರೆಯುವುದಿಲ್ಲ. ಅದು ಸಾಧ್ಯವಿಲ್ಲ. ನಾವು ಬಿಜೆಪಿಯ ಹಳೆಯ ಮಿತ್ರಪಕ್ಷವಾಗಿದ್ದು ಎಲ್ಲರೂ ಬಿಜೆಪಿಯಿಂದ ದೂರ ಸರಿದ ಸಮಯದಲ್ಲೂ ನಾವು ಜೊತೆಗಿದ್ದೆವು. ನಮ್ಮ ಮತ್ತು ಬಿಜೆಪಿ ನಡುವೆ ಮುರಿಯದ ಬಾಂಧವ್ಯವಿದೆ ಎಂದು ಗುಜ್ರಾಲ್ ತಿಳಿಸಿದ್ದಾರೆ.

ಪ್ರತಿಪಕ್ಷಗಳು ಸಂಸತ್‌ನ ಹೊರಗೆ ಕೇಂದ್ರ ಸರಕಾರದ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಶಿವಸೇನೆ ಮತ್ತು ಟಿಡಿಪಿ ಕೂಡಾ ಕೈಜೋಡಿಸಿತು.

ಫೆಬ್ರವರಿ ಒಂದರಂದು ಅರುಣ್ ಜೇಟ್ಲಿ ಮಂಡಿಸಿದ ಬಜೆಟ್‌ನಲ್ಲಿ ಆಂಧ್ರಪ್ರದೇಶವನ್ನು ನಿರ್ಲಕ್ಷಿಸಲಾಗಿದೆ ಎಂದು ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಸೋಮವಾರ ಆರೋಪಿಸಿದ್ದರು. ಮತ್ತೊಂದೆಡೆ, ರೈತರಿಗೆ ಏನಾದರೂ ಮಾಡಿರುವ ಏಕೈಕ ಬಜೆಟ್ ಇದು. ತಮಗೆ ಪ್ರಾಶಸ್ತ್ಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಚಂದ್ರಬಾಬು ನಾಯ್ಡು ಮತ್ತು ಶಿವಸೇನೆ ಅಸಮಾಧಾನಗೊಂಡಿದೆ ಎಂದು ಗುಜ್ರಾಲ್ ತಿಳಿಸಿದ್ದಾರೆ.

ಬಿಜೆಪಿಯು ಈ ಮೈತ್ರಿಕೂಟ ಮುರಿಯಲು ಬಿಡಬಾರದು. ಆದಷ್ಟು ಮಿತ್ರಪಕ್ಷಗಳನ್ನು ಜೊತೆಯಾಗಿ ಕೊಂಡೊಯ್ಯಲು ಪಕ್ಷವು ಪ್ರಯತ್ನಿಸಬೇಕು ಎಂದು ಗುಜ್ರಾಲ್ ಬಿಜೆಪಿಗೆ ಸಲಹೆ ನೀಡಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಅಧಿವೇಶನವು ಮುಂದುವರಿದಿದ್ದು ಬುಧವಾರದಂದು ತೆಲುಗುದೇಶಂ ಪಕ್ಷದ ಸದಸ್ಯರಾದ ಜಯದೇವ್ ಗಲ್ಲಾ ಎನ್‌ಡಿಎ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದ ವಿಭಜನೆ ಮಾಡಿದ ಕಾಂಗ್ರೆಸ್‌ಗೆ ಜನರು ಶೂನ್ಯ ಸ್ಥಾನವನ್ನು ನೀಡಿದ್ದಾರೆ. ಈಗ ರಾಜ್ಯವನ್ನು ಮರುಸ್ಥಾಪಿಸಲು ಅಗತ್ಯವಿರುವ ಮೂಲಭೂತ ಸವಲತ್ತುಗಳನ್ನೂ ನೀಡದಿರುವ ನಿಮ್ಮ ಪರಿಸ್ಥಿತಿ ಹೇಗಾಗಬಹುದು ಎಂಬುದನ್ನು ಸ್ವಲ್ಪ ಯೋಚಿಸಿ ಎಂದು ಗಲ್ಲಾ, ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಅವರ ಮಾತಿಗೆ ಧ್ವನಿಗೂಡಿಸಿದ ತೆಲಂಗಾಣ ರಾಷ್ಟ್ರ ಸಮಿತಿಯ ಸದಸ್ಯರಾದ ಎ.ಪಿ ಜಿತೇಂದ್ರ ರೆಡ್ಡಿ, ಎರಡು ತೆಲುಗು ರಾಜ್ಯಗಳಿಗೂ ನೀಡಿರುವ ಭರವಸೆಯನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X