Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ವಿರುಪಾ’ ಕನ್ನಡ ಸಿನೆಮಾದ...

‘ವಿರುಪಾ’ ಕನ್ನಡ ಸಿನೆಮಾದ ‘ಟೀಸರ್’ಅನಾವರಣ

ವಾರ್ತಾಭಾರತಿವಾರ್ತಾಭಾರತಿ7 Feb 2018 11:41 PM IST
share
‘ವಿರುಪಾ’ ಕನ್ನಡ ಸಿನೆಮಾದ ‘ಟೀಸರ್’ಅನಾವರಣ

ಮಂಗಳೂರು, ಫೆ.7: ಉದ್ಯಮಿ ಡ್ಯಾಪ್ನಿ ನೀತು ಡಿಸೋಜ ನಿರ್ಮಾಣದ, ಛಾಯಾಗ್ರಾಹಕ ಪುನೀಕ್ ಶೆಟ್ಟಿ ನಿರ್ದೇಶನದ ‘ವಿರುಪಾ’ ಕನ್ನಡ ಚಿತ್ರದ ಟೀಸರ್ ಬುಧವಾರ ನಗರದ ಖಾಸಗಿ ಹೊಟೇಲಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಟೀಸರ್ ಬಿಡುಗಡೆಗೊಳಿಸಿ ಮಾತನಾಡಿದ ಪರಿಸರವಾದಿ ದಿನೇಶ್ ಹೊಳ್ಳ ಹಂಪಿಯಲ್ಲಿ ನಡೆಯುವ ಪ್ರತಿ ಕ್ಷಣವನ್ನು ಈ ಚಿತ್ರದಲ್ಲಿ ವಿಭಿನ್ನವಾಗಿ ಸೆರೆ ಹಿಡಿಯಲಾಗಿದೆ. ಮೂರು ಮಕ್ಕಳ ಕಥೆಯೊಳಗೆ ಬೆಸೆದ ಈ ಸಿನೆಮಾ ಅದ್ಬುತವಾಗಿ ಮೂಡಿಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದ ನಿರ್ದೇಶಕ ಪುನೀಕ್ ಶೆಟ್ಟಿ ಮಾತನಾಡಿ, ಶೂಟಿಂಗ್ ಬಹುತೇಕ ಪೂರ್ಣಗೊಳಿಸಿ ಸಂಕಲನ ಹಂತದಲ್ಲಿದ್ದು, ಮಕ್ಕಳನ್ನೇ ಮುಖ್ಯ ಕಥೆಯಲ್ಲಿಟ್ಟು, ಮಕ್ಕಳ ಮೂಲಕವೇ ನಡೆಸಿದ ಅಪರೂಪದ ಚಿತ್ರವಿದು. ಪ್ರವಾಸೋದ್ಯಮದಲ್ಲಿ ಜಗತ್ತಿನಲ್ಲಿ ಗುರುತಿಸಿಕೊಂಡ ಹಂಪಿಯಲ್ಲಿ ‘ವಿರುಪಾ’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ನಟನಾ ಕೌಶಲ್ಯತೆ ಅರಿಯದ ಮಕ್ಕಳಿಗೆ ಮೊದಲು ನಟನಾ ಚಾತುರ್ಯತೆಯನ್ನು ತಿಳಿಸಿಕೊಟ್ಟು ಆ ಬಳಿಕ, ಶೂಟಿಂಗ್ ನಡೆಸಲಾಗಿದೆ. ಕಿವಿ ಕೇಳದ ಹಾಗೂ ಕಣ್ಣು ಕಾಣದ ಮಕ್ಕಳ ಈ ಕಥೆಯನ್ನು ಅಂತಹ ಮಕ್ಕಳ ಮೂಲಕವೇ ನಿರ್ಮಿಸಲಾಗಿದೆ. ಈ ಚಿತ್ರದಲ್ಲಿ ಬರುವ ಪಾತ್ರಧಾರಿಗಳು ಸ್ಥಳೀಯರು ಹಾಗೂ ಕಥೆಯಲ್ಲಿ ಬರುವ ಸನ್ನಿವೇಶವನ್ನು ಸ್ವತಃ ಅನುಭವಿಸಿದವರೇ ಆಗಿದ್ದಾರೆ. ಉಳಿದಂತೆ ಹಂಪಿಯ ಅಲ್ಲಿನ ಗೈಡ್, ಅಜ್ಜಿಯ ಪಾತ್ರ, ಹೊಟೇಲ್‌ನಲ್ಲಿ ಇರುವ ವಿದೇಶಿಗ ಸೇರಿದಂತೆ ಯಾರೆಲ್ಲ ಅಲ್ಲಿ ಜೀವನ ನಿರ್ವಹಿಸುತ್ತಿದ್ದಾರೋ ಅವರನ್ನೇ ಮುಖ್ಯ ಭೂಮಿಕೆಯಲ್ಲಿಟ್ಟು ಸಿನೆಮಾ ಮಾಡಲಾಗಿದೆ ಎಂದರು.

ಹಂಪಿಯ ಸುಂದರ ಹಾಗೂ ಮನಮೋಹಕ ದೃಶ್ಯವನ್ನು ಈ ಸಿನೆಮಾದಲ್ಲಿ ಅದ್ಬುತವಾಗಿ ಕಟ್ಟಿಕೊಡಲಾಗಿದೆ. ವಿಶೇಷವಾಗಿ ಈ ಸಿನೆಮಾವನ್ನು ‘ಸಿಂಕ್ ಸೌಂಡ್’ ಮಾದರಿಯಲ್ಲಿ ಚಿತ್ರೀಕರಿಸಲಾಗಿದೆ. ಹೀಗಾಗಿ ಶೂಟಿಂಗ್ ಮಾಡುವ ಅಲ್ಲಿನ ಧ್ವನಿಯನ್ನೇ ಈ ಸಿನೆಮಾದಲ್ಲಿ ಹಿಡಿದಿಡಲಾಗಿದೆ. ಈಗಾಗಲೇ ಒಂದು ತಿಂಗಳ ಕಾಲ ಹಂಪಿ ಆಸುಪಾಸಿನಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಮುಂದಿನ ತಿಂಗಳೊಳಗೆ ಫ್ರಾನ್ಸ್ ಹಾಗೂ ಗೋವಾದಲ್ಲಿ ಕೊನೆಯ ಹಂತದ ಶೂಟಿಂಗ್ ನಡೆಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲಿ ಈ ಸಿನೆಮಾ ಬಿಡುಗಡೆಯಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ಡ್ಯಾಪ್ನಿ ನೀತು ಡಿಸೋಜ, ಕಾರ್ಯಕಾರಿ ನಿರ್ಮಾಪಕ ಡಿಕ್ಸನ್ ಜಾಕಿ ಡಿಸೋಜ, ಕಿರಣ್ ಶೆಣೈ, ಅವಿನಾಶ್ ಕಾವೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X