Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಹಿಪ್ಪೇಮರ-ಜೀವನ ವೃತ್ತಾಂತ ಕಥನ

ಹಿಪ್ಪೇಮರ-ಜೀವನ ವೃತ್ತಾಂತ ಕಥನ

ಈ ಹೊತ್ತಿನ ಹೊತ್ತಿಗೆ

ವಾರ್ತಾಭಾರತಿವಾರ್ತಾಭಾರತಿ8 Feb 2018 12:14 AM IST
share
ಹಿಪ್ಪೇಮರ-ಜೀವನ ವೃತ್ತಾಂತ ಕಥನ

ಸತ್ಯನಾರಾಯಣರಾವ್ ಅಣತಿಯವರ ‘ಹಿಪ್ಪೇಮರ’ (ಜೀವನ ವೃತ್ತಾಂತ ಕಥನ)- ಈ ವೃತ್ತಾಂತದ ವೈಶಿಷ್ಟವೆಂದರೆ, ಅಂದಿನ ಬದುಕಿನ ವಿವರಗಳನ್ನು, ಜೀವಂತಿಕೆಯನ್ನು ಇಂದಿನ ಪ್ರಬುದ್ಧ, ವೈಚಾರಿಕ, ಮಾಗಿದ ದೃಷ್ಟಿಕೋನದಿಂದ ನೋಡದೆ ಆವತ್ತಿನ ದೃಷ್ಟಿಕೋನ- ಮನೋಧರ್ಮದಿಂದಲೇ ನೋಡಿರುವುದು. ಈ ಕಾರಣಕ್ಕೆ ಬಡತನ, ಬದುಕಿನ ಕಷ್ಟ ಸುಖವನ್ನು ನಿರೂಪಿಸುವಾಗಲೂ ಬರವಣಿಗೆಯಲ್ಲಿ ಆತ್ಮ ಮರುಕವಿಲ್ಲ. ಓದುಗರಿಂದ ಮರುಕವನ್ನೂ ಬಯಸುವುದಿಲ್ಲ. ಬದಲಿಗೆ ಅದೂ ಕೂಡಾ ಒಂದು ಜೀವನ ಕ್ರಮವೇ ಎಂಬ ಉಲ್ಲಾಸದಿಂದಲೇ ಬರೆಯುತ್ತಾರೆ.

ವೈಚಾರಿಕ ಅಣತಿಯವರು ಪ್ರತಿಗಾಮಿ ಅರ್ಚಕರ ಮನೆಗೆ ಹೋಗುವುದು, ಇಬ್ಬರೂ ತಮ್ಮ ತಮ್ಮ ಮಿತಿ ಪೂರ್ವಾಗ್ರಹಗಳನ್ನು ಮೀರುವುದು, ಈ ಮೀರುವಿಕೆ ಪರಸ್ಪರ ಪೂರಕವಾಗುವುದು ಮನಕರಗಿಸುವಂತಿದೆ.

ಅಣತಿಯವರು ತಮ್ಮ ಸೃಜನಶೀಲ ಬರವಣಿಗೆಯ ಗತಿ ಮತ್ತು ಸಾಧನೆಯನ್ನು ಹಿರಿಯರಿಂದ ಒಡನಾಡಿಗಳಿಂದ ಬಂದ ಪ್ರತಿಕ್ರಿಯೆ ಪ್ರೋತ್ಸಾಹವನ್ನು ಕೂಡಾ ಈ ವೃತ್ತಾಂತದ ಉತ್ತರಾರ್ಧದಲ್ಲಿ ನಿರೂಪಿಸಿದ್ದಾರೆ. ಓದುಗರಿಗೆ ಇದೊಂದು ಸ್ವಗೀಳಿನ ಬರವಣಿಗೆಯೆಂದು ಎಲ್ಲೂ ಅನ್ನಿಸುವುದಿಲ್ಲ.
ಪ್ರತಿಯೊಂದು ಜೀವನ ವೃತ್ತಾಂತವೂ ತನ್ನದೇ ಆದ ವಿಶಿಷ್ಟತೆ ಮತ್ತು ಧ್ವನಿಯನ್ನು ಸಾಕ್ಷಾತ್ಕರಿಸಿಕೊಳ್ಳುತ್ತದೆ. ಆತ್ಮರಂಜಕತೆಗೆ ಹೊರಳದಂತೆ, ವಿಶಿಷ್ಟತೆಯನ್ನು ಅಣತಿಯವರ ಈ ವೃತ್ತಾಂತ ಸಾಕ್ಷಾತ್ಕರಿಸಿಕೊಂಡಿದೆ.

-ಕೆ. ಸತ್ಯನಾರಾಯಣ ಅವರ ಬೆನ್ನುಡಿಯಿಂದ.

ಕಾಲ ಪ್ರಕಾಶನ, ರಾಜಾಜಿ ನಗರ, ಬೆಂಗಳೂರು ಈ ಕೃತಿಯನ್ನು ಹೊರತಂದಿದೆ. 216 ಪುಟಗಳ ಕೃತಿಯ ಮುಖಬೆಲೆ 150 ರೂಪಾಯಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X