Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರತ್ಕಲ್ ಕಾನ ಜಂಕ್ಷನ್‌ನಲ್ಲಿ...

ಸುರತ್ಕಲ್ ಕಾನ ಜಂಕ್ಷನ್‌ನಲ್ಲಿ ಡಿವೈಎಫ್‌ಐ ವತಿಯಿಂದ ರಸ್ತೆ ತಡೆ

ರಸ್ತೆ ದುರಸ್ತಿಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 Feb 2018 4:32 PM IST
share
ಸುರತ್ಕಲ್ ಕಾನ ಜಂಕ್ಷನ್‌ನಲ್ಲಿ ಡಿವೈಎಫ್‌ಐ ವತಿಯಿಂದ ರಸ್ತೆ ತಡೆ

ಮಂಗಳೂರು, ಫೆ.8: ಗುಂಡಿಮಯವಾಗಿರುವ ಸುರತ್ಕಲ್ ಸಮೀಪದ ಕಾನ ಪ್ರದೇಶದಿಂದ ಜೋಕಟ್ಟೆಯನ್ನು ಸಂಪರ್ಕಿಸುವ ಎಸ್‌ಇಝೆಡ್ ಕಾರಿಡಾರ್ ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಕಾನ ಜಂಕ್ಷನ್‌ನಲ್ಲಿ ಡಿವೈಎಫ್‌ಐ ಸುರತ್ಕಲ್, ಜೋಕಟ್ಟೆ ಘಟಕಗಳ ವತಿಯಿಂದ ಗುರುವಾರ ರಸ್ತೆ ತಡೆ ನಡೆಸಲಾಯಿತು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ಎಸ್‌ಇಝೆಡ್, ಎಂಆರ್‌ಪಿಎಲ್ ಮುಂತಾದ ಕೈಗಾರಿಕೆಗಳಿಂದ ಊರು ಅಭಿವೃದ್ಧಿಗೊಳ್ಳುತ್ತವೆ, ಯುವಜನರಿಗೆ ಉದ್ಯೋಗ ದೊರಕುತ್ತವೆ ಎಂಬ ಭ್ರಮೆಯನ್ನು ಹುಟ್ಟು ಹಾಕಲಾಗಿತ್ತು. ಆದರೆ ಎಂಆರ್‌ಪಿಎಲ್‌ನಿಂದಾಗಿ ಊರು ನರಕವಾಗಿದೆ. ಯುವ ಜನರಿಗೆ ಉದ್ಯೋಗದ ಭರವಸೆ ಸುಳ್ಳಾಗಿದೆ. ಅಭಿವೃದ್ದಿಯ ಬದಲಿಗೆ ಪರಿಸರ ಮಲಿನಗೊಂಡು ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಸಾರ್ವಜನಿಕ ರಸ್ತೆಗಳು ಕೈಗಾರಿಕಾ ಕಂಪನಿಗಳ ದೈತ್ಯ ವಾಹನಗಳ ಓಡಾಟದಿಂದ ಪೂರ್ಣವಾಗಿ ಹದಗೆಟ್ಟಿದೆ ಎಂದು ಆಪಾದಿಸಿದರು.

ವರ್ಷಕ್ಕೆ ಸಾವಿರಾರು ಕೋಟಿ ಲಾಭಗಳಿಸುವ ಎಂಆರ್‌ಪಿಎಲ್, ಎಸ್‌ಇಝೆಡ್‌ಗಳು ಕನಿಷ್ಟ ತಾವು ಬಳಸುತ್ತಿರುವ ರಸ್ತೆಗಳ ದುರಸ್ತಿಗೂ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಕೈಗಾರಿಕಾ ಘಟಕಗಳ ಸುತ್ತಲಿನ ಗ್ರಾಮಗಳ ಜನರ ಬದುಕು ನರಕಸದೃಶವಾಗಿದೆ. ಇಂತಹ ದುಸ್ಥಿತಿಗೆ ಕಾರಣವಾಗಿರುವ ಬೃಹತ್ ಕೈಗಾರಿಕೆಗಳನ್ನು ಹದ್ದುಬಸ್ತಿನಲ್ಲಿಡಬೇಕಾದ ಜನಪ್ರತಿನಿಧಿಗಳು ಮೌನ ವಹಿಸಿರುವುದರಿಂದ ಕಂಪನಿಗಳಿಗೆ ಕಡಿವಾಣ ಇಲ್ಲದಂತ ಸ್ಥಿತಿ ನಿರ್ಮಿಸಿದೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು.

ಎಸ್‌ಇಝೆಡ್ ಮತ್ತು ಎಂಆರ್‌ಪಿಎಲ್ ಅಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ರಸ್ತೆ ದುರಸ್ಥಿ ಕಾರ್ಯ ಆರಂಭಿಸುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನಕಾರರು ರಸ್ತೆ ತಡೆ ಕೈಬಿಟ್ಟರು. 

ರಸ್ತೆ ತಡೆಯ ನೇತೃತ್ವವನ್ನು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಸ್ಥಳೀಯ ಸಮಿತಿಯ ಪ್ರಮುಖರಾದ ಶ್ರೀನಾಥ್ ಕುಲಾಲ್, ಶ್ರೀನಿವಾಸ ಹೊಸಬೆಟ್ಟು, ಮಕ್ಸೂದ್, ಸಲೀಂ ಶ್ಯಾಡೊ, ಅಜ್ಮಲ್ ಕಾನ, ಆಬೂಬಕರ್ ಬಾವಾ ಜೋಕಟ್ಟೆ, ಇಕ್ಬಾಲ್ ಜೋಕಟ್ಟೆ, ಸಿಲ್ವಿಯಾ ಜೋಕಟ್ಟೆ, ರಹೀಂ ಕಾನ, ಬೆನೆಟ್ ಡಿಸೋಜ, ರಾಜು ಜೋಕಟ್ಟೆ ಮತ್ತಿತರರು ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X