Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5000 ಮಂದಿ ಎಚ್ ಐವಿ ಭೀತಿಯಲ್ಲಿ!

5000 ಮಂದಿ ಎಚ್ ಐವಿ ಭೀತಿಯಲ್ಲಿ!

ಉತ್ತರ ಪ್ರದೇಶ: ಎಲ್ಲಾ ರೋಗಿಗಳಿಗೆ ಒಂದೇ ಸಿರಿಂಜ್ ಬಳಕೆ

ವಾರ್ತಾಭಾರತಿವಾರ್ತಾಭಾರತಿ8 Feb 2018 5:12 PM IST
share
5000 ಮಂದಿ ಎಚ್ ಐವಿ ಭೀತಿಯಲ್ಲಿ!

ಲಕ್ನೋ,ಫೆ.8 :  ನಕಲಿ ವೈದ್ಯನೊಬ್ಬ ಅಗ್ಗದ ಚಿಕಿತ್ಸೆ ನೀಡುವ ನೆಪದಲ್ಲಿ ಎಚ್‍ಐವಿ ರೋಗಿಯೊಬ್ಬನಿಗೆ ಚುಚ್ಚುಮದ್ದು ನೀಡಲು ಉಪಯೋಗಿಸಿದ ಸಿರಿಂಜ್ ನಿಂದ ಇತರ ರೋಗಿಗಳಿಗೂ ಚುಚ್ಚುಮದ್ದು ನೀಡಿದ ಪರಿಣಾಮ ಉತ್ತರ ಪ್ರದೇಶದ  ಉನ್ನಾವ್ ಜಿಲ್ಲೆಯ ಬಂಗರ್ಮವು ತೆಹ್ಸಿಲ್ ಎಂಬಲ್ಲಿ  ಕಳೆದ ಹತ್ತು ತಿಂಗಳುಗಳ ಅವಧಿಯಲ್ಲಿ ಕನಿಷ್ಠ 46 ಮಂದಿ ಎಚ್‍ಐವಿ ಬಾಧಿತರಾದ ಬಗ್ಗೆ ವರದಿಗಳು ಹೊರಬೀಳುತ್ತಿದ್ದಂತೆಯೇ ಈ ಪ್ರದೇಶದ ಜನ ಭಯದ ನೆರಳಿನಲ್ಲಿಯೇ ಬದುಕುವಂತಾಗಿದೆ. ಸುಮಾರು 5,000 ಜನಸಂಖ್ಯೆಯಿರುವ ಪ್ರೇಮ್ ಗಂಜ್ ಎಂಬಲ್ಲಿನ ಜನರು  ಈ ನಕಲಿ ವೈದ್ಯನ ಬಳಿಯೇ ಹೋಗುತ್ತಿದ್ದುದರಿಂದ ಅವರೆಲ್ಲರೂ ಚಿಂತಾಕ್ರಾಂತರಾಗಿದ್ದಾರೆ.

ಆರೋಪಿ ನಕಲಿ ವೈದ್ಯ ರಾಜೇಂದ್ರ ಯಾದವ್  ಹಳೆಯ ಸಂಸ್ಕೃತ ಶಾಲೆಯ ಕಟ್ಟಡವೊಂದರ ಮೂಲೆಯಲ್ಲಿ ತನ್ನ ಕ್ಲಿನಿಕ್ ನಡೆಸುತ್ತಿದ್ದು ಆತನ ಕ್ಲಿನಿಕ್ ಗೆ ರೋಗಿಗಳು ಬೆಳಗ್ಗೆ 9 ಗಂಟೆಯಿಂದ ಹಿಡಿದು ರಾತ್ರಿ 11 ಗಂಟೆವರೆಗೆ ಸಾಲುಸಾಲಾಗಿ ಬರುತ್ತಿದ್ದರು. ಆತ  ದಿನವೊಂದಕ್ಕೆ ಸುಮಾರು 150 ರೋಗಿಗಳನ್ನು ನೋಡುತ್ತಿದ್ದ. ಮೂರು ಡೋಸ್ ಔಷಧಿ ಹಾಗೂ ಒಂದು ಇಂಜೆಕ್ಷನ್ ಗೆ ಆತ ಕೇವಲ ರೂ. 10  ಪಡೆಯುತ್ತಿದ್ದುದೇ ಜನರು ಆತನ ಬಳಿ ಹೋಗಲು ಕಾರಣ. ಆತ ಒಂದೇ ಸಿರಿಂಜ್ ನಿಂದ ಎಲ್ಲರಿಗೂ ಚುಚ್ಚುಮದ್ದು ನೀಡುತ್ತಿದ್ದನೆಂದು ತಿಳಿದು ಈಗ ಜನರು ಕಂಗಾಲಾಗಿ ಬಿಟ್ಟಿದ್ದಾರೆ. ಈಗ ಜನರು ಅದೆಷ್ಟು ಭಯಭೀತರಾಗಿದ್ದಾರೆಂದರೆ ಹೆಚ್ಚಿನವರು ಎಚ್‍ಐವಿ ಪರೀಕ್ಷೆ ನಡೆಸಲು ಮುಂದೆ ಬರುತ್ತಿಲ್ಲ.

ಈ ವೈದ್ಯನ ಪ್ರಮಾದದಿಂದ ಬಾಧಿತರಾದವರಲ್ಲಿ ದೀಪ್ ಚಂದ್ ಕೂಡ ಒಬ್ಬನಾಗಿದ್ದಾನೆ. ಆತನ ಪತ್ನಿ ಮತ್ತು ಪುತ್ರ ಕೂಡ ಎಚ್‍ಐವಿ  ಬಾಧಿತರಾಗಿದ್ದಾರೆ. ಸ್ಥಳೀಯ ಮಾರ್ಕೆಟ್ ನಲ್ಲಿ ಲೋಡರ್ ಆಗಿ ಕೆಲಸ ಮಾಡುತಿದ್ದ ಆತನಿಗೆ ಕೆಲ ತಿಂಗಳುಗಳ ಹಿಂದೆ ಆತಿಯಾದ ಬೆನ್ನು ನೋವು ಕಾಡಿದಾಗ ರಾಜೇಂದ್ರ ಯಾದವ್ ಬಳಿ ಔಷಧಿ ಪಡೆದಿದ್ದ. ಅದೇ ಈಗ ಆತನ ಪಾಲಿಗೆ ಮುಳುವಾಗಿ ಬಿಟ್ಟಿದೆ. ಆತನಿಗೆ ನಾಲ್ಕು ಮಂದಿ ಪುತ್ರಿಯರಿದ್ದರೂ ಅವರನ್ನೂ ಪರೀಕ್ಷೆಗೊಡ್ಡಲು ಆತ ಸಿದ್ಧನಿಲ್ಲ. ಆತ ಈಗ ತನ್ನ ಗ್ರಾಮದಿಂದ 50 ಕಿ.ಮೀ. ದೂರದಲ್ಲಿರುವ ಕಾನ್ಪುರ ಎಆರ್‍ಟಿ ಕೇಂದ್ರಕ್ಕೆ ಹೋಗಿ ಅಲ್ಲಿ ತಪಾಸಣೆಗೊಳಪಟ್ಟು ಔಷಧಿ ಸ್ವೀಕರಿಸಬೇಕು. ಎಲ್ಲರನ್ನೂ ಅಷ್ಟು ದೂರ ನಿಯಮಿತವಾಗಿ ಕರೆದುಕೊಂಡು ಹೋಗಲು ತನ್ನ ಬಳಿ ಹಣವಿಲ್ಲ ಎಂದು ಆತ ಅಲವತ್ತುಕೊಳ್ಳುತ್ತಾನೆ.

ಹತ್ತಿರದ ಚಕ್ಮೀರಾ ಹಾಗೂ ಕಿದ್ಮಿಯಪುರ್ ಗ್ರಾಮಗಳ ಹಲವು ಮಂದಿಯೂ ಎಚ್‍ಐವಿ ಪೀಡಿತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X