Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರ ಪಾಕಿಸ್ತಾನ ಪಾಲಾಗುವುದನ್ನು...

ಕಾಶ್ಮೀರ ಪಾಕಿಸ್ತಾನ ಪಾಲಾಗುವುದನ್ನು ತಪ್ಪಿಸಿದ್ದ ಶೇಕ್ ಅಬ್ದುಲ್ಲಾರ ಪತ್ರ

ಈ ಪತ್ರದಲ್ಲಿ ಇದ್ದದ್ದೇನು?

ವಾರ್ತಾಭಾರತಿವಾರ್ತಾಭಾರತಿ8 Feb 2018 5:58 PM IST
share
ಕಾಶ್ಮೀರ ಪಾಕಿಸ್ತಾನ ಪಾಲಾಗುವುದನ್ನು ತಪ್ಪಿಸಿದ್ದ ಶೇಕ್ ಅಬ್ದುಲ್ಲಾರ ಪತ್ರ

ಶ್ರೀನಗರ, ಫೆ.8: ಜಮ್ಮು ಮತ್ತು ಕಾಶ್ಮೀರದ ಭವಿಷ್ಯವನ್ನು ನಿರ್ಧರಿಸಿದ 1947, ಅಕ್ಟೋಬರ್ 26ರಂದು ಪ್ರಧಾನಿ ಜವಾಹರ್ ಲಾಲ್ ನೆಹರೂರವರ ನಿವಾಸದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ ಅವರ ಕೈಸೇರಿದ ಒಂದು ಪತ್ರ ಕಾಶ್ಮೀರ ಪಾಕಿಸ್ತಾನದ ಪಾಲಾಗುವುದನ್ನು ತಪ್ಪಿಸಿತ್ತು. ಆ ಪತ್ರವನ್ನು ಬರೆದವರು ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥರಾದ ಶೇಕ್ ಅಬ್ದುಲ್ಲಾ ಅವರು.

ಕಾಶ್ಮೀರದ ಅಂದಿನ ಪ್ರಧಾನಿಯಾಗಿದ್ದ ಮೆಹರ್ ಚಂದ್ ಮಹಾಜನ್ ಅವರ ಆತ್ಮಕಥನ ಲುಕಿಂಗ್ ಬ್ಯಾಕ್‌ನಲ್ಲಿ ಆ ದಿನ ಏನು ನಡೆಯಿತು ಎಂಬ ಬಗ್ಗೆ ಸಂಪೂರ್ಣ ವಿವರವನ್ನು ನೀಡಲಾಗಿದೆ. ಮಹಾಜನ್ ಅವರ ಆತ್ಮಕತೆಯ ಪುಸ್ತಕವನ್ನು 1963ರಲ್ಲಿ ಮೊದಲ ಬಾರಿ ಮುದ್ರಿಸಲಾಗಿತ್ತು. ನಂತರ 1995ರಲ್ಲಿ ಮರುಮುದ್ರಣಗೊಂಡು ಇದೀಗ ಮೂರನೇ ಬಾರಿ ಮುದ್ರಣಗೊಳ್ಳುತ್ತಿದೆ.

ಈ ಪುಸ್ತಕದಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥರಾದ ಶೇಕ್ ಅಬ್ದುಲ್ಲಾ ಅವರು ಪ್ರಧಾನಿ ನೆಹರೂಗೆ ನೀಡಿದ ಪತ್ರವು ಕಾಶ್ಮೀರವು ಪಾಕಿಸ್ತಾನದ ಪಾಲಾಗುವುದನ್ನು ತಪ್ಪಿಸಿದ ಬಗ್ಗೆ ಉಲ್ಲೇಖವಿದೆ. ಅದು 1947, ಅಕ್ಟೋಬರ್ 26. ನೆಹರೂ ನಿವಾಸದಲ್ಲಿ ಗೃಹ ಸಚಿವರಾದ ಸರ್ದಾರ್ ವಲ್ಲಭ ಬಾಯಿ ಪಟೇಲ್ ಕೂಡಾ ಇದ್ದರು. ಸಭೆಯಲ್ಲಿ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಪ್ರಧಾನಿ ಮೆಹರ್ ಚಂದ್ ಮಹಾಜನ್, ನೀವು ಕಣಿವೆ ರಾಜ್ಯವನ್ನು ಸ್ವಾಧೀನಪಡಿಸಿಕೊಳ್ಳಿ ಮತ್ತು ನ್ಯಾಶನಲ್ ಕಾನ್ಫರೆನ್ಸ್ ಪಕ್ಷಕ್ಕೆ ಯಾವುದೆಲ್ಲಾ ಅಧಿಕಾರ ನೀಡಲು ಬಯಸಿದ್ದೀರೋ ಎಲ್ಲವನ್ನೂ ನೀಡಿ. ಆದರೆ ಸಂಜೆಯ ಒಳಗಾಗಿ ಭಾರತೀಯ ಸೇನೆ ಶ್ರೀನಗರಕ್ಕೆ ತಲುಪಬೇಕು. ಇಲ್ಲವಾದರೆ, ಈ ನಗರವನ್ನು ರಕ್ಷಿಸುವ ಸಲುವಾಗಿ ನಾನು ಪಾಕಿಸ್ತಾನದ ನಾಯಕ ಮುಹಮ್ಮದ್ ಅಲಿ ಜಿನ್ನಾ ಅವರೊಂದಿಗೆ ಸಮಾಲೋಚನೆ ನಡೆಸಬೇಕಾಗುತ್ತದೆ ಎಂದು ತಿಳಿಸಿದ್ದರು.

ಮಹಾಜನ್ ಮಾತಿನಿಂದ ಕೋಪಗೊಂಡ ನೆಹರೂ, ಅವರನ್ನು ಹೊರಗೆ ಹೋಗುವಂತೆ ಸೂಚಿಸುತ್ತಾರೆ. ಇನ್ನೇನು ಮಹಾಜನ್ ಕೋಣೆಯಿಂದ ಹೊರನಡೆದರು ಎನ್ನುವಾಗಲೇ ಅವರ ಕೈಹಿಡಿದ ಪಟೇಲ್, ಖಂಡಿತವಾಗಿಯೂ ಮಹಾಜನ್, ನೀವು ಪಾಕಿಸ್ತಾನಕ್ಕೆ ಹೋಗುತ್ತಿಲ್ಲ ಎಂದು ಅವರ ಕಿವಿಯಲ್ಲಿ ಹೇಳಿದರು. ಈ ಎಲ್ಲಾ ಮಾತುಕತೆಗಳನ್ನು ಪ್ರಧಾನಿ ನೆಹರೂ ನಿವಾಸದಲ್ಲಿ ತಂಗಿದ್ದ ಶೇಕ್ ಅಬ್ದುಲ್ಲಾ ಅವರು ಕೇಳಿಸಿಕೊಂಡಿದ್ದರು. ಕೂಡಲೇ ಪತ್ರವೊಂದನ್ನು ಬರೆದ ಅವರು ಅದನ್ನು ಪ್ರಧಾನಿಗೆ ತಲುಪಿಸಿದರು. ಆ ಪತ್ರದಲ್ಲಿ ತಾನು ಕೂಡಾ ಮಹಾಜನ್ ಅವರ ಮಾತನ್ನು ಒಪ್ಪುತ್ತೇನೆ ಎಂದು ಬರೆಯಲಾಗಿತ್ತು. ಆ ಪತ್ರವನ್ನು ಓದಿದ ತಕ್ಷಣ ನೆಹರೂ ಅವರ ಯೋಚನೆ ಸಂಪೂರ್ಣ ಬದಲಾಯಿತು ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

ಕಣಿವೆ ರಾಜ್ಯದಲ್ಲಿ ಆಡಳಿತ ನಡೆಸಬೇಕೆಂದು ಬಯಸಿದ್ದ ಶೇಕ್ ಅಬ್ದುಲ್ಲಾ ಅವರು ಜಿನ್ನಾ ಅವರನ್ನು ಮತ್ತು ಕಾಶ್ಮೀರವು ಪಾಕಿಸ್ತಾನದ ಪಾಲಾಗುವುದನ್ನು ವಿರೋಧಿಸಿದ್ದರು.

ಇದೀಗ ಮುದ್ರಣಗೊಂಡಿರುವ ಪುಸ್ತಕದಲ್ಲಿ ಎರಡು ಹೊಸ ಅಧ್ಯಾಯಗಳನ್ನು ಸೇರಿಸಲಾಗಿದೆ. ಈ ಅಧ್ಯಾಯಗಳನ್ನು ಮಹಾಜನ್ ಅವರೇ ಬರೆದಿದ್ದು ಈಗ ಅದನ್ನು ಅವರ ಕುಟುಂಬಸ್ಥರು ತನಗೆ ನೀಡಿದ್ದಾರೆ ಎಂದು ಹರ್-ಆನಂದ ಮುದ್ರಣ ಸಂಸ್ಥೆಯ ಮುಖ್ಯಸ್ಥರಾದ ನರೇಂದ್ರ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X